Webdunia - Bharat's app for daily news and videos

Install App

ಎನ್‌ಡಿ ಟಿವಿ ಬ್ಯಾನ್: ದೇಶ ನಿರಂಕುಶತೆಯತ್ತ ಸಾಗುತ್ತಿದೆ ಎಂದ ಲಾಲು

Webdunia
ಸೋಮವಾರ, 7 ನವೆಂಬರ್ 2016 (16:39 IST)
ಎನ್‌ಡಿ ಟಿವಿ ಮೇಲೆ ಒಂದು ದಿನದ ಬ್ಯಾನ್ ಮಾಡಿರುವುದಕ್ಕೆ ವಿರೋಧ ಪಕ್ಷಗಳ ನಾಯಕರಿಂದ ಭಾರಿ ವಿರೋಧ ವ್ಯಕ್ತವಾಗುತ್ತಿದ್ದು ಮತ್ತೀಗ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಕೂಡ ಹರಿಹಾಯ್ದಿದ್ದಾರೆ. ಕೇಂದ್ರ ಸರ್ಕಾರದ ಈ ಕ್ರಮ ಪ್ರಜಾಪ್ರಭುತ್ವದ ಮೇಲಿನ ದಾಳಿಯಾಗಿದ್ದು, ದೇಶ ನಿರಂಕುಶತೆಯತ್ತ ಜಾರುತ್ತಿದೆ ಎಂದು ಅವರು ಕಿಡಿಕಾರಿದ್ದಾರೆ. 

ಸಮಾಜವಾದಿ ಪಕ್ಷದ ರಜತಮಹೋತ್ಸವವನ್ನು ಉದ್ಘಾಟಿಸಿ ಮಾತನ್ನಾಡುತ್ತಿದ್ದ ಲಾಲು, ಎನ್‌ಡಿ ಟಿವಿ ಮೇಲೆ ಇಂದು ಏನಾಗುತ್ತಿದೆ ಎಂದು ನೋಡಿರುತ್ತಿರಿ. ನೀವು ಪಠಾಣ್‌ಕೋಟ್ ಉಗ್ರ ದಾಳಿಯನ್ನು ಬಿತ್ತರಿಸಿದಿರಿ ಎಂದು ಸರ್ಕಾರ ಹೇಳುತ್ತಿದೆ. ಸರ್ಕಾರ ಈ ವಾಹಿನಿಯನ್ನು ಗುರಿಯಾಗಿಸಿ ಕ್ರಮ ಕೈಗೊಂಡಿದೆ. ದೇಶ ನಿರಂಕುಶತೆಯತ್ತ ಸಾಗುತ್ತಿದೆ ಎಂದಿದ್ದಾರೆ. 
 
ಪಠಾಣ್ ಕೋಟ್ ಉಗ್ರರ ದಾಳಿ ಸಂದರ್ಭದ ಸೂಕ್ಷ್ಮ ವಿಚಾರಗಳನ್ನು ಬಿತ್ತರಿಸಿ, ಪ್ರಸಾರ ನಿಯಮ ಉಲ್ಲಂಘಿಸಿದ ಆರೋಪದಡಿ ನವೆಂಬರ್ 9ರ ಮಧ್ಯರಾತ್ರಿಯಿಂದ ನವೆಂಬರ್ 10ರ ಮಧ್ಯರಾತ್ರಿಯವರೆಗೆ 24ಗಂಟೆ ಯಾವುದೇ ಕಾರ್ಯಕ್ರಮ, ಸುದ್ದಿ ಪ್ರಸಾರ ಮಾಡದಂತೆ ಕೇಂದ್ರ ಸರ್ಕಾರ ಎನ್‌ಡಿ ಟಿವಿಗೆ ಆದೇಶಿಸಿದೆ. 
 
ನೀವು ಬಿತ್ತರಿಸಿರುವ ಮಾಹಿತಿ ಉಗ್ರರ ಕೈಗೆ ಸಿಕ್ಕರೆ ಕೇವಲ ದೇಶದ ಭದ್ರತೆಗಷ್ಟೇ ಅಲ್ಲ, ನಾಗರಿಕರ ಮತ್ತು ಭದ್ರತಾ ಸಿಬ್ಬಂದಿ ಜೀವಕ್ಕೂ ಹಾನಿ ತಲುಪಿಸುವಂತದ್ದು ಎಂದು ಕೇಂದ್ರ ಸುದ್ದಿ ವಾಹಿನಿಗೆ ಹೇಳಿದೆ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೆಚ್ಚುತ್ತಿರುವ ಪ್ರಕರಣಗಳ ಮಧ್ಯೆ ಜಯದೇವ್‌ಗೆ ರೋಗಿಗಳ ಸಂಖ್ಯೆ ಹೆಚ್ಚಳ: ಹೆಚ್ಚುವರಿ ತಜ್ಞ ವೈದ್ಯರ ನಿಯೋಜನೆ

ವೈಜ್ಞಾನಿಕ ಸಾಧನೆಯನ್ನು ಅಪಮಾನಿಸುವ ಮುಖ್ಯಮಂತ್ರಿ ಕ್ಷಮೆ ಕೇಳಲಿ: ಪ್ರಲ್ಹಾದ್ ಜೋಶಿ

ಪ್ರವೀಣ್ ನೆಟ್ಟಾರು ಪ್ರಕರಣ: ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ

ಹಿಮಾಚಲ ಪ್ರದೇಶದಲ್ಲಿ ವರುಣನ ಅಬ್ಬರಕ್ಕೆ 37 ಸಾವು, 400ಕೋಟಿ ನಷ್ಟ

ವಿಮಾನದಲ್ಲಿ ಸಹಪ್ರಯಾಣಿಕನ ಮೂತಿಗೆ ಗುದ್ದಿದ ವ್ಯಕ್ತಿ: ಭಾರತ ಮೂಲದ ಪ್ರಯಾಣಿಕ ಅರೆಸ್ಟ್‌

ಮುಂದಿನ ಸುದ್ದಿ
Show comments