Webdunia - Bharat's app for daily news and videos

Install App

ತಿರುಮಲ ಕ್ಷೇತ್ರದಲ್ಲಿ ರಾಜಕೀಯ, ದ್ವೇಷ ಭಾಷಣಗಳಿಗೆ ನಿಷೇಧ: ಸಹಕಾರಕ್ಕೆ ಟಿಟಿಡಿ ಮನವಿ

Sampriya
ಶನಿವಾರ, 30 ನವೆಂಬರ್ 2024 (15:24 IST)
Photo Courtesy X
ತಿರುಮಲ: ತಿರುಮಲ ಕ್ಷೇತ್ರದ  ಪಾವಿತ್ರ್ಯತೆ ಮತ್ತು ಆಧ್ಯಾತ್ಮಿಕ ಶಾಂತಿ ಕಾಪಾಡುವ ಉದ್ದೇಶದಿಂದ ರಾಜಕೀಯ ಮತ್ತು ದ್ವೇಷದ ಭಾಷಣ ಸಂಪೂರ್ಣ ನಿಷೇಧಿಸಲಾಗಿದೆ ಎಂದು ತಿರುಮಲ ತಿರುಪತಿ ದೇವಸ್ಥಾನಂ ಹೇಳಿದೆ.

ಸದಾ ಗೋವಿಂದ ನಾಮಸ್ಮರಣೆ ಮೊಳಗುವ ಪವಿತ್ರ ತಿರುಮಲ ದೈವಸ್ಥಾನದಲ್ಲಿ ಇತ್ತೀಚಿನ ದಿನಗಳಲ್ಲಿ ರಾಜಕೀಯ ನಾಯಕರು ಸೇರಿದಂತೆ ಕೆಲವರು ದೇವರ ದರ್ಶನ ಪಡೆದ ಬಳಿಕ ದೇವಸ್ಥಾನದ ಎದುರು ಮಾಧ್ಯಮಗಳ ಮುಂದೆ ರಾಜಕೀಯ ದ್ವೇಷದ ಹೇಳಿಕೆ ನೀಡುವುದು ಮತ್ತು ಆಧ್ಯಾತ್ಮಿಕತೆಗೆ ಧಕ್ಕೆ ಉಂಟು ಮಾಡುತ್ತಿರುವುದು ಗಮನಕ್ಕೆ ಬಂದಿದೆ ಎಂದು ಟಿಟಿಡಿ ಹೇಳಿದೆ.

ಈ ನಿರ್ಧಾರಕ್ಕೆ ಎಲ್ಲರೂ ಸಹಕರಿಸುವಂತೆ ಮನವಿ ಮಾಡುತ್ತೇವೆ. ಹಾಗೆಯೇ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ಟಿಟಿಡಿ ಎಚ್ಚರಿಕೆ ನೀಡಿದೆ.

ತಿರುಮಲದಲ್ಲಿ ಕೆಲಸ ಮಾಡುವ ಪ್ರತಿಯೊಬ್ಬರೂ ಹಿಂದೂಗಳೇ ಆಗಿರಬೇಕು ಎಂದು ಪ್ರತಿಪಾದಿಸಿರುವ ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಮಂಡಳಿಯ ನೂತನ ಅಧ್ಯಕ್ಷ ಬಿ.ಆರ್‌. ನಾಯ್ಡು ಅವರು, ಇದಕ್ಕಾಗಿ ನಾನು ಕಾರ್ಯ ನಿರ್ವಹಿಸುತ್ತೇನೆ ಎಂದು ಈಚೆಗೆ ತಿಳಿಸಿದ್ದರು.

ಇತರ ಧರ್ಮಕ್ಕೆ ಸೇರಿದ ಸಿಬ್ಬಂದಿ ಕುರಿತು ಆಂಧ್ರಪ್ರದೇಶ ಸರ್ಕಾರದ ಜತೆ ಚರ್ಚಿಸಲಾಗುವುದು. ಈ ಸಿಬ್ಬಂದಿಯನ್ನು ಸರ್ಕಾರದ ಇತರ ಇಲಾಖೆಗಳಿಗೆ ನಿಯುಕ್ತಿಗೊಳಿಸುವ ಅಥವಾ ಸ್ವಯಂ ನಿವೃತ್ತಿಗೆ (ವಿಆರ್‌ಎಸ್‌) ಅವಕಾಶ ಕಲ್ಪಿಸುವ ಕುರಿತು ಸಮಾಲೋಚನೆ ನಡೆಸಲಾಗುವುದು ಎಂದು ಅವರು ಹೇಳಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್‌ಸಿಬಿ ಕಾಲ್ತುಳಿತದಲ್ಲಿ ಪ್ರಾಣ ಕಳೆದುಕೊಂಡ ದಿವ್ಯಾಂಶಿ ತಾಯಿ ದಿಢೀರ್‌ ಠಾಣೆ ಮೆಟ್ಟಿಲೇರಿದ್ದೇಕೆ

ಸ್ಮಾರ್ಟ್ ಮೀಟರ್ ಹಗರಣದಲ್ಲಿರುವ ಸಚಿವ ಕೆಜೆ ಜಾರ್ಜ್ ವಜಾ ಮಾಡಿ: ಡಾ ಸಿಎನ್ ಅಶ್ವತ್ಥನಾರಾಯಣ

ಯೆಸ್ ಬ್ಯಾಂಕ್‌ಗೆ ₹3,000 ಕೋಟಿ ಸಾಲ ವಂಚನೆ: ಅನಿಲ್‌ ಅಂಬಾನಿಗೆ ಜಾರಿ ನಿರ್ದೇಶನಾಲಯ ಶಾಕ್‌

ರಷ್ಯಾದಲ್ಲಿ ತಾಂತ್ರಿಕ ದೋಷದಿಂದ ಪ್ಯಾಸೇಂಜರ್‌ ವಿಮಾನ ಪತನ: ಆರು ಸಿಬ್ಬಂದಿ ಸೇರಿ 50 ಮಂದಿ ಸಾವು

ಮಹದಾಯಿ ಯೋಜನೆಗೆ ಅನುಮತಿ ನಿರಾಕರಿಸಿ ಕೇಂದ್ರದಿಂದ ಕನ್ನಡಿಗರಿಗೆ ಅನ್ಯಾಯ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments