Webdunia - Bharat's app for daily news and videos

Install App

ನೆಟ್ಟಿಗರ ಟೀಕೆಗೆ ಒಳಗಾದ ಬ್ಯಾನರ್ಜಿ!?

Webdunia
ಗುರುವಾರ, 2 ಡಿಸೆಂಬರ್ 2021 (09:38 IST)
ದೆಹಲಿ : ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಾಷ್ಟ್ರಗೀತೆಗೆ ಅವಮಾನ ಮಾಡಿದ್ದಾರೆ ಎಂದು ಬಿಜೆಪಿ ಆರೋಪ ಮಾಡಿದೆ.
ಮಮತಾ ಬ್ಯಾನರ್ಜಿಯವರು ಸುದ್ದಿಗೋಷ್ಠಿ ನಡೆಸುವಾಗ ರಾಷ್ಟ್ರಗೀತೆಯನ್ನೇನೋ ಹಾಡಿದರು. ಆದರೆ ಅದನ್ನು ಪೂರ್ತಿಗೊಳಿಸಲಿಲ್ಲ ಮತ್ತು ಮಧ್ಯದಲ್ಲಿಯೇ ಉಳಿತುಕೊಂಡರು ಎಂದು ಬಿಜೆಪಿ ಹೇಳಿದೆ.  ಹಾಗೇ, ಮುಂಬೈನಲ್ಲಿ ನಡೆದ ಈ ಸುದ್ದಿಗೋಷ್ಠಿಯ ವಿಡಿಯೋವನ್ನೂ ಶೇರ್ ಮಾಡಿಕೊಂಡಿದೆ.
ಟ್ವೀಟ್ ಮಾಡಿರುವ ಪಶ್ಚಿಮ ಬಂಗಾಳ ಬಿಜೆಪಿ ಘಟಕ, ಮಮತಾ ಬ್ಯಾನರ್ಜಿ ಮೊದಲು ಕುಳಿತುಕೊಂಡೇ ರಾಷ್ಟ್ರಗೀತೆ ಹಾಡಲು ಶುರು ಮಾಡಿದರು. ನಂತರ ಎದ್ದು ನಿಂತರು.
ಸ್ವಲ್ಪ ಹೊತ್ತು ಹಾಡಿ, ರಾಷ್ಟ್ರಗೀತೆಯನ್ನು ಪೂರ್ಣಗೊಳಿಸದೆ ಮತ್ತೆ ಕುಳಿತುಕೊಂಡರು. ಅವರು ರಾಷ್ಟ್ರಗೀತೆ, ಪಶ್ಚಿಮ ಬಂಗಾಳದ ಸಂಸ್ಕೃತಿ ಮತ್ತು ರವೀಂದ್ರನಾಥ್ ಟಾಗೋರ್ಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿದೆ.  ಅಷ್ಟೇ ಅಲ್ಲ, ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳ್ವಿಯಾ, ಸಂಸದ ತೇಜಸ್ವಿ ಸೂರ್ಯ ಕೂಡ ಟ್ವೀಟ್ ಮೂಲಕ ಇದನ್ನು ಖಂಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments