Webdunia - Bharat's app for daily news and videos

Install App

ಶ್ರದ್ಧಾ ವಾಲ್ಕರ್ ನೆನಪಿಸಿದ ಬೆಂಗಳೂರಿನ ಹತ್ಯೆ ಪ್ರಕರಣ: ಶ್ರದ್ಧಾ ಆರೋಪಿ ಕತೆ ಏನಾಗಿದೆ

Krishnaveni K
ಸೋಮವಾರ, 23 ಸೆಪ್ಟಂಬರ್ 2024 (09:37 IST)
ಬೆಂಗಳೂರು: ದೆಹಲಿಯ ಶ್ರದ್ಧಾ ವಾಲ್ಕರ್ ಹತ್ಯೆ ಪ್ರಕರಣ ಎಲ್ಲರಿಗೂ ನೆನಪಿರಬಹುದು. ಪ್ರಿಯಕರನಿಂದಲೇ ಬರ್ಬರವಾಗಿ ಹತ್ಯೆಯಾಗಿದ್ದ ಶ್ರದ್ಧಾಳನ್ನು ತುಂಡು ತುಂಡು ಮಾಡಿ ಫ್ರಿಡ್ಜ್ ನಲ್ಲಿರಿಸಲಾಗಿತ್ತು.

ಇದೀಗ ಅದೇ ಮಾದರಿಯಲ್ಲಿ ಬೆಂಗಳೂರಿನಲ್ಲಿ ಮಹಿಳೆಯೊಬ್ಬಳನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹತ್ಯೆ ಬಳಿಕ ಮೃತದೇಹವನ್ನು ಮೂರು ತುಂಡಾಗಿ ಕತ್ತರಿಸಿ ಫ್ರಿಡ್ಜ್ ನ್ಲಲಿರಿಸಲಾಗಿತ್ತು. ಈ ಪ್ರಕರಣ ಇಡೀ ಬೆಂಗಳೂರನ್ನು ಬೆಚ್ಚಿಬೀಳಿಸಿದೆ. ಇಲ್ಲೂ ಆಕೆಯ ಪ್ರಿಯಕರನೇ ಕೊಲೆ ಆರೋಪಿಯಾಗಿರಬಹುದು ಎಂದು ಶಂಕಿಸಲಾಗಿದೆ.

ದೆಹಲಿಯ ಶ್ರದ್ಧಾಳನ್ನು ಉಸಿರುಗಟ್ಟಿಸಿ ಹತ್ಯೆ ಮಾಡಿದ್ದ ಪ್ರಿಯಕರ ಸ್ನೇಹಿತ ಅಫ್ತಾಬ್ ಬಳಿಕ ಆಕೆಯ ಮೃತದೇಹವನ್ನು ಹಲವು ಪೀಸ್ ಮಾಡಿ ಫ್ರಿಡ್ಜ್ ನಲ್ಲಿಟ್ಟಿದ್ದ. ಬಳಿಕ ಒಂದೊಂದೇ ತುಂಡನ್ನು ಪ್ರತಿನಿತ್ಯ ಎಂಬಂತೆ ನಿರ್ಜನ ಪ್ರದೇಶದಲ್ಲಿ ಎಸೆಯುತ್ತಿದ್ದ. ಈ ಪ್ರಕರಣದಲ್ಲಿ ಆತನನ್ನು ದೆಹಲಿ ಪೊಲೀಸರು ಬಂಧಿಸಿದ್ದರು.

ಇದೀಗ ಆರೋಪಿ ತಿಹಾರ್ ಜೈಲಿನ ಸೆಲ್ ನಂ.4 ರಲ್ಲಿರಿಸಲಾಗಿದೆ. ಈತನ ಮೇಲೆ ಜೈಲು ಅಧಿಕಾರಿಗಳು ತೀವ್ರ ನಿಗಾ ಇಟ್ಟಿದ್ದಾರೆ. ಆತನಿಗೆ ಕೆಲವು ಗಂಟೆ ಕಾಲ ಮಾತ್ರ ಜೈಲಿನ ಹೊರಾವರಣದಲ್ಲಿ ವಾಕಿಂಗ್ ಗೆ ಅವಕಾಶವಿದೆ. ಉಳಿದಂತೆ ಜೈಲು ಕೊಠಡಿಯಲ್ಲೇ ಕಾಲ ಕಳೆಯಬೇಕಾಗಿದೆ. ಈತನಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಶ್ರದ್ಧಾ ತಂದೆ ಆಗ್ರಹಿಸುತ್ತಿದ್ದಾರೆ. 2022 ರಂದು ಈ ಘಟನೆ ನಡೆದಿತ್ತು. ಇದೀಗ ಅದೇ ಮಾದರಿಯಲ್ಲಿ ಬೆಂಗಳೂರಿನಲ್ಲೂ ಹತ್ಯೆ ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments