Webdunia - Bharat's app for daily news and videos

Install App

ಮಳೆಯಿಂದ ತತ್ತರಿಸುವ ಬಾಂಗ್ಲಾದೇಶ!

Webdunia
ಸೋಮವಾರ, 20 ಜೂನ್ 2022 (08:22 IST)
ಢಾಕಾ : ಸತತ ಸುರಿಯುತ್ತಿರುವ ಮುಂಗಾರು ಮಳೆಯಿಂದ ತತ್ತರಿಸಿರುವ ಬಾಂಗ್ಲಾದೇಶದಲ್ಲಿ 25 ಮಂದಿ ಸಾವನ್ನಪ್ಪಿದ್ದು, 40 ಲಕ್ಷಕ್ಕೂ ಹೆಚ್ಚು ಜನರು ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ.
 
ತೀವ್ರ ಮಳೆಯ ಕಾರಣ ಬಾಂಗ್ಲಾ ದೇಶಾದ್ಯಂತ ಪ್ರೌಢಶಾಲಾ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಶಾಲಾ ತರಗತಿ ಕೊಠಡಿಗಳಲ್ಲಿ ನಿರಾಶ್ರಿತರಿಗೆ ತಾತ್ಕಾಲಿಕ ಆಶ್ರಯ ಕಲ್ಪಿಸಲಾಗಿದೆ.

ಕೆಲ ಹಳ್ಳಿಗಳು ಕೆಲ ಗಂಟೆಗಳಲ್ಲೇ ಮುಳುಗಿ ಹೋಗಿದ್ದು, ಶಾಲೆಗಳನ್ನೇ ಆಶ್ರಯತಾಣವಾಗಿ ಮಾಡಿಕೊಳ್ಳಲಾಗಿದೆ. ಕೆಲವರು ತಾತ್ಕಾಲಿಕ ದೋಣಿ ವ್ಯವಸ್ಥೆ ಮಾಡಿಕೊಂಡು ತಮ್ಮನ್ನು ತಾವು ರಕ್ಷಿಸಿಕೊಂಡರೆ, ಇನ್ನೂ ಕೆಲವರು ನೀರಿನ ದಡದಲ್ಲೇ ಪ್ರಾಣ ಉಳಿಸಿಕೊಳ್ಳಲು ತವಕಿಸುತ್ತಿದ್ದಾರೆ.  

ಹಳ್ಳಿ-ಹಳ್ಳಿಗಳನ್ನು ಸುತ್ತುವರಿದಿರುವ ನೀರಿನಿಂದಾಗಿ ಅಡುಗೆ ಮಾಡಿಕೊಳ್ಳಲು ಕಷ್ಟವಾಗುತ್ತಿದೆ. ಕಾರ್ಯಾಚರಣೆಗೆ ಇಳಿದಿರುವ ಸೇನೆಯು ಸಾಧ್ಯವಾದಷ್ಟು ಜನರನ್ನು ಸ್ಥಳಾಂತರಿಸುತ್ತಿದೆ. ನಿನ್ನೆ ಒಂದೇ ದಿನ 21 ಮಂದಿ ಮೃತಪಟ್ಟಿದ್ದು, ಈವರೆಗೆ 25 ಮಂದಿ ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bakrid ಹಿನ್ನೆಲೆ: ಬೆಂಗಳೂರು ರಸ್ತೆ ಬದಿ ಕುರಿ ಬೆಲೆ ಕೇಳಿದ್ರೇ ಶಾಕ್ ಆಗ್ತೀರಿ, Video

Operation Sindoor: ವಿವಾದಾತ್ಮಕ ಪೋಸ್ಟ್ ಬೆನ್ನಲ್ಲೇ ಗುಜರಾತ್‌ ಕಾಂಗ್ರೆಸ್‌ ನಾಯಕ ರಾಜೇಶ್ ಸೋನಿ ಅರೆಸ್ಟ್‌

ತುಂಡು ಬಟ್ಟೆ ನಮ್ಮ ಸಂಸ್ಕೃತಿಯಲ್ಲ, ನಾನು ಒಪ್ಪಲ್ಲ: ಬಿಜೆಪಿ ನಾಯಕ ಕೈಲಾಶ್‌

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

ಮುಂದಿನ ಸುದ್ದಿ
Show comments