Webdunia - Bharat's app for daily news and videos

Install App

ಗಂಡನಿಗೆ ಟವೆಲ್ ಕೊಡಲು ತಡವಾಗಿದ್ದಕ್ಕೆ ಹೆಂಡತಿಯ ಬರ್ಬರ ಹತ್ಯೆ!

Webdunia
ಸೋಮವಾರ, 8 ನವೆಂಬರ್ 2021 (14:56 IST)
ಭೂಪಾಲ್ : ಗಂಡ-ಹೆಂಡತಿಯ ನಡುವೆ ನಡೆದ ಒಂದು ಸಣ್ಣ ಜಗಳದಿಂದ ಒಂದು ಜೀವವೇ ಹೋಗಿದೆ.
ಅಷ್ಟಕ್ಕೂ ಈ ಜಗಳ ನಡೆದಿದ್ದು ಟವೆಲ್ ಸಲುವಾಗಿ ಎಂದರೆ ಆಶ್ಚರ್ಯವಾಗದಿರದು. ಸ್ನಾನಕ್ಕೆ ಹೋದ ಗಂಡನಿಗೆ ಆತನ ಹೆಂಡತಿ ಟವೆಲ್ ಕೊಡುವುದು ತಡವಾಯಿತು ಎಂಬ ಕಾರಣಕ್ಕೆ ಆತ ತನ್ನ ಹೆಂಡತಿಯನ್ನು ಕೊಲೆ ಮಾಡಿದ್ದಾನೆ.
ಮಧ್ಯಪ್ರದೇಶದಲ್ಲಿ ಈ ಘಟನೆ ನಡೆದಿದ್ದು, 50 ವರ್ಷದ ವ್ಯಕ್ತಿ ಸ್ನಾನಕ್ಕೆ ಹೋದಾಗ ತನ್ನ ಹೆಂಡತಿಯನ್ನು ಕರೆದು ಟವೆಲ್ ಕೊಡಲು ಹೇಳಿದ್ದ. ಆದರೆ, ಅಡುಗೆ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಆಕೆ ಸ್ವಲ್ಪ ಹೊತ್ತು ಕಾಯುವಂತೆ ಹೇಳಿದ್ದಳು. ಆತನ ಸ್ನಾನ ಮುಗಿದರೂ ಆಕೆ ಟವೆಲ್ ಕೊಡದಿದ್ದರಿಂದ ಕೋಪಗೊಂಡ ಗಂಡ ತನ್ನ ಹೆಂಡತಿಯನ್ನು ಕೊಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಧ್ಯಪ್ರದೇಶದ ಬಾಲಘಾಟ್ ಜಿಲ್ಲೆಯ ಕಿರ್ನಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಹೀರಾಪುರ ಗ್ರಾಮದಲ್ಲಿ ಶನಿವಾರ ಸಂಜೆ ಈ ಘಟನೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ. ಆರೋಪಿ, ಅರಣ್ಯ ಇಲಾಖೆಯ ದಿನಗೂಲಿ ನೌಕರ ರಾಜಕುಮಾರ್ ಬಹೆ (50) ತನ್ನ ಪತ್ನಿ ಪುಷ್ಪಾ ಬಾಯಿ (45)ಯನ್ನು ಕೊಲೆ ಮಾಡಿದ್ದಾನೆ. ಆತ ಸ್ನಾನದ ನಂತರ ಟವೆಲ್ ನೀಡುವಂತೆ ಕೇಳಿದ್ದ. ಆದರೆ, ಆಕೆ ಟವೆಲ್ ನೀಡಲು ತಡವಾಗಿದ್ದಕ್ಕೆ ಈ ಕೊಲೆ ಮಾಡಿದ್ದಾನೆ ಎಂದು ಎಂದು ಕಿರ್ನಾಪುರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ರಾಜೇಂದ್ರ ಕುಮಾರ್ ಬರಿಯಾ ತಿಳಿಸಿದ್ದಾರೆ.
ಅಡುಗೆ ಮನೆಯಲ್ಲಿ ಪಾತ್ರೆಗಳನ್ನು ತೊಳೆಯುತ್ತಿದ್ದುದರಿಂದ ಸ್ವಲ್ಪ ಸಮಯ ಕಾಯುವಂತೆ ಅವನ ಹೆಂಡತಿ ಹೇಳಿದ್ದಳು. ಇದರಿಂದ ಕೋಪಗೊಂಡ ವ್ಯಕ್ತಿ ಸ್ನಾನ ಮುಗಿಸಿ ಹೊರಗೆ ಬಂದ ನಂತರ ಕಬ್ಬಿಣದ ರಾಡಿನಿಂದ ಪತ್ನಿಯ ತಲೆಗೆ ಪದೇ ಪದೇ ಹೊಡೆದಿದ್ದಾನೆ. ಇದರಿಂದ ಆ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ತನ್ನ ಅಪ್ಪನನ್ನು 23 ವರ್ಷದ ಮಗಳನ್ನು ತಡೆಯಲು ಪ್ರಯತ್ನಿಸಿದಾಗ ಆಕೆಗೆ ಬೆದರಿಕೆ ಹಾಕಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂತ್ರಾಲಯಕ್ಕೆ ಭೇಟಿ ನೀಡಿದ ಬಳಿಕ ಪೀಠಾಧಿಪತಿಯರನ್ನು ಭೇಟಿಯಾದ ಸಚಿವ ರಾಮಲಿಂಗಾರೆಡ್ಡಿ

₹1 ಕೋಟಿ ಸುಲಿಗೆಗೆ ಉದ್ಯಮಿಯ ಮಗನನ್ನೇ ಕಿಡ್ನ್ಯಾಪ್ ಮಾಡುವುದಾಗಿ ಬೆದರಿಕೆ: ಸಂಚು ವಿಫಲ

ಶುಭಾಂಶು ಶುಕ್ಲಾ ಸಾಧನೆ ಶತಕೋಟಿ ಕನಸುಗಳಿಗೆ ಸ್ಪೂರ್ತಿ: ಪ್ರಧಾನಿ ಮೋದಿ ಬಣ್ಣನೆ

ವಿಶ್ವದ ಅ‌ತ್ಯಂತ ಹಿರಿಯ ಮ್ಯಾರಥಾನ್ ಓಟಗಾರ ಫೌಜಾ ಸಿಂಗ್ ರಸ್ತೆ ಅಪಘಾತದಲ್ಲಿ ನಿಧನ

ಬೆಲೆ ಏರಿಕೆಯಿಂದ ಸುಸ್ತಾಗಿದ್ದ ಸಿಲಿಕಾನ್ ಸಿಟಿ ಮಂದಿಗೆ ಇದೀಗ ಆಟೋ ದರ ಬಿಸಿ

ಮುಂದಿನ ಸುದ್ದಿ
Show comments