Webdunia - Bharat's app for daily news and videos

Install App

ಪತ್ನಿಯ ಬರ್ಬರ ಹತ್ಯೆ! ಸೂಟ್ಕೇಸ್ನಲ್ಲಿ ತುಂಬಿ ಸುಟ್ಟು ಹಾಕಿದ

Webdunia
ಗುರುವಾರ, 15 ಡಿಸೆಂಬರ್ 2022 (08:48 IST)
ಲಕ್ನೋ : ವೈದ್ಯನೊಬ್ಬ ತನ್ನ ಪತ್ನಿಯನ್ನು ಕೊಂದು, ಆಕೆಯ ದೇಹವನ್ನು ಸೂಟ್ಕೇಸ್ನಲ್ಲಿ ತುಂಬಿಕೊಂಡು ಸುಮಾರು 400 ಕಿ.ಮೀ ದೂರದಲ್ಲಿ ಸುಟ್ಟು ಹಾಕಿದ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.

ಮೃತ ಮಹಿಳೆಯನ್ನು ಉತ್ತರ ಪ್ರದೇಶದ ಲಖಿಂಪುರ ಖೇರಿಯ ವಂದನಾ ಅವಸ್ತಿ ಎಂದು ಗುರುತಿಸಲಾಗಿದೆ. ವಂದನಾ ಅವಸ್ತಿ ಪತಿ ಅಭಿಷೇಕ್ ಅವಸ್ತಿ ಆಯುರ್ವೇದದ ವೈದ್ಯನಾಗಿದ್ದ.

ಈತ ತನ್ನ ತಂದೆ ಗೌರಿಶಂಕರ್ ಅವಸ್ತಿಯೊಂದಿಗೆ ಜಗಳ ಮಾಡುತ್ತಿದ್ದ ಸಂದರ್ಭದಲ್ಲಿ ಪತ್ನಿ ವಂದನಾಗೆ ಭಾರದ ವಸ್ತುವಿನಿಂದ ತಲೆಗೆ ಹೊಡೆದಿದ್ದಾನೆ. ಇದರಿಂದಾಗಿ ಗಂಭೀರವಾಗಿ ಗಾಯಗೊಂಡ ವಂದನಾ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.

ಇದಾದ ಬಳಿಕ ವಂದನಾಳ ಮೃತದೇಹವನ್ನು ಅಭಿಷೇಕ್ ಸೂಟ್ಕೇಸ್ನಲ್ಲಿ ಲಾಕ್ ಮಾಡಿ, ತನ್ನ ಆಸ್ಪತ್ರೆಯ ಅಂಬುಲೆನ್ಸ್ನಲ್ಲಿ ಶವವನ್ನು ಸುಮಾರು 400 ಕಿ.ಮೀ ದೂರದ ಗಢ್ ಮುಕ್ತೇಶ್ವರಕ್ಕೆ ತೆಗೆದುಕೊಂಡು ಹೋಗಿ ಸುಟ್ಟು ಹಾಕಿದ್ದಾನೆ.

ಅದಾದ ಬಳಿಕ ನವೆಂಬರ್ 27ರಂದು ಕೊತ್ವಾಲಿ ಸದರ್ ಪೊಲೀಸ್ ಠಾಣೆಗೆ ಹೋಗಿರುವ ಅಭಿಷೇಕ್ ತನ್ನ ಪತ್ನಿ ಕಾಣೆಯಾದ ಬಗ್ಗೆ ದೂರು ದಾಖಲಿಸಿದ್ದಾನೆ. ಅಷ್ಟೇ ಅಲ್ಲದೇ ವಂದನಾ ಕೆಲವು ಬೆಲೆಬಾಳುವ ವಸ್ತುಗಳೊಂದಿಗೆ ಮನೆಯಿಂದ ಬಿಟ್ಟು ಹೋಗಿದ್ದಾಳೆ ಎಂದು ದೂರಿನಲ್ಲಿ ದಾಖಲಿಸಲಾಗಿತ್ತು. 

ಘಟನೆಗೆ ಸಂಬಂಧಿಸಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಈ ವೇಳೆ ದಂಪತಿ ಮಧ್ಯೆ ವೈವಾಹಿಕ ಸಮಸ್ಯೆ ಇರುವುದು ಬೆಳಕಿಗೆ ಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments