Webdunia - Bharat's app for daily news and videos

Install App

ಪತಿಯಿಂದ್ಲೇ ಸುಪ್ರೀಂಕೋರ್ಟ್ ವಕೀಲೆಯ ಬರ್ಬರ ಹತ್ಯೆ! ಶಾಕಿಂಗ್ ವಿಚಾರ ಹೊರಬಿತ್ತು?

Webdunia
ಮಂಗಳವಾರ, 12 ಸೆಪ್ಟಂಬರ್ 2023 (07:02 IST)
ನವದೆಹಲಿ : ಸುಪ್ರೀಂಕೋರ್ಟ್ ವಕೀಲೆಯನ್ನು ಹತ್ಯೆ ಮಾಡಿದ ಆರೋಪದಲ್ಲಿ ಮಾಜಿ ಭಾರತೀಯ ಕಂದಾಯ ಸೇವೆ ಅಧಿಕಾರಿ ಅಜಯ್ ನಾಥ್ ಎಂಬವರನ್ನು ಸೋಮವಾರ ದೆಹಲಿ ಪೊಲೀಸರು ಬಂಧಿಸಿದ್ದಾರೆ. ಮೃತ ಮಹಿಳೆಯನ್ನು ಆರೋಪಿಯ ಪತ್ನಿ ರೇಣು ಸಿನ್ಹಾ (61) ಎಂದು ಗುರುತಿಸಲಾಗಿದೆ.

ರೇಣು ಸಿನ್ಹಾ ತನ್ನ ಸಹೋದರನ ಕರೆಗಳಿಗೆ ಸ್ಪಂದಿಸದ ಹಿನ್ನೆಲೆ ಆತಂಕಗೊಡು ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಅನ್ವಯ ತನಿಖೆ ಆರಂಭಿಸಿದ ಪೊಲೀಸರು, ಉತ್ತರ ಪ್ರದೇಶದ ನೋಯ್ಡಾದಲ್ಲಿರುವ ಬಂಗಲೆಯಲ್ಲಿ ಪರಿಶೀಲನೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಪೊಲೀಸ್ ಮಾಹಿತಿ ಪ್ರಕಾರ, ಬಂಗಲೆಯನ್ನು ಲಾಕ್ ಮಾಡಲಾಗಿತ್ತು. ಬಾಗಿಲು ಒಡೆದು ಪ್ರವೇಶ ಮಾಡಿದಾಗ ರೇಣು ಸಿನ್ಹಾ ಶವ ಬಾತ್ ರೂಂನಲ್ಲಿ ಬಿದ್ದಿತ್ತು. ಹತ್ಯೆ ಮಾಡಿದ ಆರೋಪಿ ಅಜಯ್ ನಾಥ್ ಬಂಗಲೆಯ ಸ್ಟೋರ್ ರೂಂನಲ್ಲಿ ತಲೆಮರೆಸಿಕೊಂಡಿದ್ದ. ಸದ್ಯ ಅವರನ್ನು ಬಂಧಿಸಲಾಗಿದೆ. ದಂಪತಿ ಆಗಾಗ್ಗೆ ಜಗಳವಾಡುತ್ತಿದ್ದರು ಎಂದು ಸಹೋದರ ಬಹಿರಂಗಪಡಿಸಿದ್ದಾನೆ. 

ತಮ್ಮ ಬಂಗಲೆಯನ್ನು 4 ಕೋಟಿ ರೂಪಾಯಿಗೆ ಮಾರಾಟ ಮಾಡಲು ಯೋಜಿಸಿದ್ದರು ಮತ್ತು ಮುಂಗಡವನ್ನೂ ತೆಗೆದುಕೊಂಡಿದ್ದರು ಎಂದು ಒಪ್ಪಿಕೊಂಡರು. ಆದರೆ ತಮ್ಮ ನಿರ್ಧಾರಕ್ಕೆ ಪತ್ನಿ ವಿರುದ್ಧವಾಗಿದ್ದರು. ಮೃತ ವಕೀಲರು ಕ್ಯಾನ್ಸರ್ ವಿರುದ್ಧ ಹೋರಾಡುತ್ತಿದ್ದರು ಮತ್ತು ಇತ್ತೀಚೆಗಷ್ಟೇ ಒಂದು ತಿಂಗಳ ಹಿಂದೆ, ಕ್ಯಾನ್ಸರ್ ಮುಕ್ತವಾಗಿದ್ದರು ಎಂದು ವಿಚಾರಣೆ ವೇಳೆ ಅಜಯ್ ನಾಥ್ ಹೇಳಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರೀ ಮಳೆಯ ಮುನ್ಸೂಚನೆ: 24ಗಂಟೆಗಳ ಕಾಲ ಚಾರ್‌ ಧಮ್ ಯಾತ್ರೆ ಸ್ಥಗಿತ

ಪ್ರತಿ ವರ್ಷವೂ ಯೋಗ ದಿನ ಅಂದುಕೊಂಡದಕ್ಕಿಂತ ವಿಶೇಷವಾಗಿರುತ್ತದೆ: ಪ್ರಧಾನಿ ಮೋದಿ ಮೆಚ್ಚುಗೆ

ವಿಷಪ್ರಾಶನದಿಂದ ಐದು ಹುಲಿಗಳು ಸಾವು ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ಸಿದ್ದರಾಮಯ್ಯ

ಒಡಿಶಾದ ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: ಮೂರು ಮಂದಿ ಸಾವು, ಹಲವರಿಗೆ ಗಾಯ

ಉತ್ತರಾಖಂಡದ ಬಾಲಿಗಢದಲ್ಲಿ ಭೀಕರ ಮೇಘಸ್ಫೋಟ: ಪ್ರವಾಹದಲ್ಲಿ ಸಿಲುಕಿ 9 ಕಾರ್ಮಿಕರ ಕಣ್ಮರೆ

ಮುಂದಿನ ಸುದ್ದಿ
Show comments