Webdunia - Bharat's app for daily news and videos

Install App

ರೆಬೆಲ್ ಲೀಡರ್ ಬಸನಗೌಡ ಪಾಟೀಲ್ ಯತ್ನಾಳ್ ರಿಂದ ಇಂದು ಹೈಕಮಾಂಡ್ ನಾಯಕರ ಭೇಟಿ

Krishnaveni K
ಬುಧವಾರ, 4 ಡಿಸೆಂಬರ್ 2024 (09:18 IST)
ನವದೆಹಲಿ: ರಾಜ್ಯ ಬಿಜೆಪಿಯ ನಾಯಕತ್ವದ ವಿರುದ್ಧ ಸಿಡಿದೆದ್ದಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಂಡ್ ಟೀಂ ಇಂದು ಬಿಜೆಪಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲಿದ್ದಾರೆ.

ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಬಹಿರಂಗ ಟೀಕಾ ಪ್ರಹಾರ ನಡೆಸುತ್ತಿರುವ ಯತ್ನಾಳ್ ಗೆ ಬಿಜೆಪಿ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ಜಾರಿ ಮಾಡಿತ್ತು. ಈ ಸಂಬಂಧ ದೆಹಲಿಗೆ ತೆರಳಿರುವ ಯತ್ನಾಳ್ ತಮ್ಮ ಜೊತೆಗೆ ಬೆಂಬಲಿಗ ನಾಯಕರನ್ನೂ ಕರೆದೊಯ್ದಿದ್ದಾರೆ.

ಎಲ್ಲರೂ ಇಂದು ಬಿಜೆಪಿ ರಾಷ್ಟ್ರೀಯ ನಾಯಕರನ್ನು ಭೇಟಿ ಮಾಡುತ್ತಾರಾ ಅಥವಾ ಕೇವಲ ಯತ್ನಾಳ್ ಮಾತ್ರ ಭೇಟಿಯಾಗುತ್ತಾರಾ ಎನ್ನುವುದು ಖಚಿತವಾಗಿಲ್ಲ. ಆದರೆ ಇಂದು ಬಿಜೆಪಿ ರಾಷ್ಟ್ರೀಯ ನಾಯಕರನ್ನು ಭೇಟಿ ಮಾಡಿ ವಿಜಯೇಂದ್ರ ಬಣದ ವಿರುದ್ಧ ತಮ್ಮ ಆರೋಪಗಳ ಪಟ್ಟಿಯನ್ನು ನೀಡಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಹೊರತುಪಡಿಸಿ ಉಳಿದೆಲ್ಲಾ ಬಿಜೆಪಿ ನಾಯಕರ ಭೇಟಿಗೆ ಯತ್ನಾಳ್ ಸಮಯ ಕೇಳಿದ್ದಾರೆ. ಈ ನಡುವೆ ಯಾವೆಲ್ಲಾ ನಾಯಕರನ್ನು ಭೇಟಿ ಮಾಡಲಿದ್ದಾರೆ ಎನ್ನುವುದು ಖಚಿತವಾಗಿಲ್ಲ. ಕಾಂಗ್ರೆಸ್ ನಾಯಕರೊಂದಿಗೆ ವಿಜಯೇಂದ್ರ ಮಾಡಿಕೊಂಡಿರುವ ಮ್ಯಾಚ್ ಫಿಕ್ಸಿಂಗ್ ತಡೆದರೆ ಕರ್ನಾಟಕದಲ್ಲಿ ಬಿಜೆಪಿಗೆ ಭವಿಷ್ಯವಿದೆ ಎಂದು ಮನವರಿಕೆ ಮಾಡಿಕೊಡುವುದಾಗಿ ಯತ್ನಾಳ್ ಬಣದ ಸದಸ್ಯರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಎರಡನೇ ದಿನ ಹುಡುಕಾಡುತ್ತಿರುವ ಎಸ್ಐಟಿ ತಂಡಕ್ಕೆ ಸಿಕ್ಕಿದ್ದೇನು

ಧರ್ಮಸ್ಥಳ: 6 ಅಡಿ ಅಗೆದರೂ ಸಿಗದ ಕಳೆಬರಹ, ಕಾರ್ಯಚರಣೆಯಲ್ಲಿ ಬಿಗ್‌ಟ್ವಿಸ್ಟ್‌

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ತೀರ್ಪಿಗಾಗಿ ಕಾಯುತ್ತಿದ್ದ ಪ್ರಜ್ವಲ್ ರೇವಣ್ಣಗೆ ಶಾಕ್: ಕೋರ್ಟ್ ಹೇಳಿದ್ದೇನು

ಧರ್ಮಸ್ಥಳ ಕೇಸ್: ಪೊಲೀಸರಿಗೂ ಸಂಕಷ್ಟ ತಂದಿಟ್ಟ ಎಸ್ಐಟಿ ಆರ್ಡರ್

ಮುಂದಿನ ಸುದ್ದಿ
Show comments