ಮೌನವಾಗಿರದಿದ್ರೆ ಕಪಾಳಮೋಕ್ಷ ಮಾಡ್ತೇನೆ: ಜನರಿಗೆ ಗೃಹ ಸಚಿವ ರಾಜನಾಥ್ ಸಿಂಗ್ ಬೆದರಿಕೆ

Webdunia
ಶುಕ್ರವಾರ, 10 ಜೂನ್ 2016 (12:02 IST)
ಬಿಜೆಪಿ ಪಕ್ಷ ಆಯೋಜಿಸಿದ ಸಭೆಯಲ್ಲಿ ಭಾಷಣಕ್ಕೆ ಪದೇ ಪದೇ ಅಡ್ಡಿ ಮಾಡುತ್ತಿದ್ದ ಸಾರ್ವಜನಿಕರ ಗುಂಪಿನ ವರ್ತನೆಯಿಂದ ಬೇಸತ್ತು ತಾಳ್ಮೆ ಕಳೆದುಕೊಂಡ ಗೃಹ ಸಚಿವ ರಾಜನಾಥ್ ಸಿಂಗ್, ಮೌನವಾಗಿರಿ ಇಲ್ಲಾಂದ್ರೆ ಕಪಾಳಮೋಕ್ಷ ಮಾಡುತ್ತೇನೆ ಎಂದು ಬೆದರಿಸಿದ ಘಟನೆ ವರದಿಯಾಗಿದೆ.
 
ಸಾರ್ವಜನಿಕ ಸಭೆಯಲ್ಲಿ ರಸಗೊಬ್ಬರ ಕುರಿತಂತೆ ಭಾಷಣ ಮಾಡುತ್ತಿರುವಾಗ ವೇದಿಕೆಯ ಮುಂದೆ ನೆರೆದಿದ್ದ ಪ್ರೇಕ್ಷಕರ ಗುಂಪು ಜೋರಾಗಿ ಕೂಗಲು ಆರಂಭಿಸಿತು. ಇದರಿಂದ ಕೆಂಡಾಮಂಡಲವಾದ ಸಿಂಗ್, ಸುಮ್ಮನಿರದಿದ್ರೆ ಕಪಾಳಮೋಕ್ಷ ಮಾಡುವುದಾಗಿ ಗರ್ಜಿಸಿದರು.
 
ಕೇಂದ್ರ ಸರಕಾರ ಉತ್ತರ ಪ್ರದೇಶ ರಾಜ್ಯಕ್ಕೆ ಹೆಚ್ಚಿನ ಬೆಂಬಲ ನೀಡುತ್ತಿಲ್ಲ ಎನ್ನುವ ಅಖಿಲೇಶ್ ಸರಕಾರದ ಹೇಳಿಕೆಯನ್ನು ಖಂಡಿಸಿದ ಅವರು, ಕೇಂದ್ರ ಸರಕಾರ ಯಾವುದೇ ರೀತಿಯ ನೆರವಿಗೆ ಬದ್ಧವಾಗಿದೆ ಎಂದರು.
 
ಮಥುರಾ ನಗರದಲ್ಲಿ ನಡೆದ ಹಿಂಸಾಚಾರಕ್ಕೆ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಸರಕಾರವೇ ನೇರ ಹೊಣೆಯಾಗಿದೆ ಎಂದು ಆರೋಪಿಸಿದರು.
 
ಮಥುರಾದ ಜವಾಹರ್‌‍ಬಾಗ್‌ನಲ್ಲಿ ಸಾವಿರಾರು ಜನರು ಭೂ ಕಬಳಿಕೆ ಮಾಡಿಕೊಂಡಿದ್ದರೂ ಸರಕಾರಕ್ಕೆ ಮಾಹಿತಿಯಿರಲಿಲ್ಲವೇ ಎಂದು ಪ್ರಶ್ನಿಸಿದ ಅವರು, ಘಟನೆಯ ಬಗ್ಗೆ ಸಿಬಿಐ ತನಿಖೆ ನಡೆಸಲು ಸರಕಾರ ಸಿದ್ದವಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಡ್ನಿಯಲ್ಲಿ ನಡೆದ ಮಾರಣಾಂತಿಕ ದಾಳಿ ಬಗ್ಗೆ ಯುಕೆ ಪ್ರಧಾನಿ ಮೊದಲ ರಿಯಾಕ್ಷನ್

2 ವರ್ಷದ ಬಾಲಕಿ ರೇಪ್ ಎಸಗಿ, ಹತ್ಯೆ ಮಾಡಿದವನಿಗೆ ಕ್ಷಮದಾನಕ್ಕೆ ನಿರಾಕರಿಸಿದ ರಾಷ್ಟ್ರಪತಿ

ಆರ್‌ಎಸ್‌ಎಸ್‌, ಬಿಜೆಪಿ ಸಿದ್ಧಾಂತ ದೇಶವನ್ನು ನಾಶಪಡಿಸುತ್ತದೆ: ಮಲ್ಲಿಕಾರ್ಜುನ ಖರ್ಗೆ

ಬಿಜೆಪಿ ಸಾರ್ವಜನಿಕರ ನಂಬಿಕೆಯನ್ನು ಕಳೆದುಕೊಂಡಿದೆ: ಪ್ರಿಯಾಂಕಾ ಗಾಂಧಿ

ಮತ್ತಷ್ಟು ದಾಖಲೆ ಸಮೇತ ಎದುರು ಬರುತ್ತೇವೆ: ಗುಡುಗಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments