Webdunia - Bharat's app for daily news and videos

Install App

ಬೆಳಗಾವಿ ಗಡಿ ವಿವಾದ: ಸಮಿತಿಯನ್ನು ಪುನರ್ ರಚಿಸಿದ ಮಹಾರಾಷ್ಟ್ರ

Webdunia
ಶುಕ್ರವಾರ, 6 ಮಾರ್ಚ್ 2015 (18:34 IST)
ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದವನ್ನು ಗಂಭಿರವಾಗಿ ಪರಿಗಣಿಸಿರುವ ಮಹಾರಾಷ್ಟ್ರ ಸರ್ಕಾರ, ವಿವಾದಕ್ಕೆ ಸಂಬಂಧಿಸಿದಂತೆ ಈ ಹಿಂದೆ ರಚಿಸಲಾಗಿದ್ದ ಸಮಿತಿಗೆ ಸರ್ಜರಿ ಮಾಡಿದ್ದು, ಪುನರ್ ರಚಿಸಿದೆ.  
 
ಮಹಾರಾಷ್ಟ್ರ ಮತ್ತು ಕರ್ನಾಟಕ ರಾಜ್ಯಗಳ ಗಡಿ ವಿವಾದ ಸಂಬಂಧ ರಚನೆಯಾಗಿರುವ ಈ ಸಮಿತಿಯು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನಾವಿಸ್ ಅವರ ನೇತೃತ್ವದಲ್ಲಿ ರಚಿಸಲಾಗಿದ್ದು, ಎನ್‌ಸಿಪಿ ಹಿರಿಯ ನಾಯಕ ಶರದ್ ಪವಾರ್ ಹಾಗೂ ಬಿಜೆಪಿ, ಶಿವಸೇನೆಯ ಹಿರಿಯ ಸಚಿವರು ಸೇರಿದಂತೆ ಸಮಿತಿಯಲ್ಲಿ ಇತರೆ ಎಂಟು ಸದಸ್ಯರಿದ್ದಾರೆ. 
 
ಈ ಸಂಬಂಧ ಸರ್ಕಾರವು ಈಗಾಗಲೇ ಗೊತ್ತುವಳಿಯನ್ನು ಬಿಡುಗಡೆ ಮಾಡಿದ್ದು, ಅದರ ಪ್ರಕಾರ, ವಿಧಾನಸಭೆಯ ಪ್ರತಿಪಕ್ಷ ನಾಯಕರೂ ಕೂಡ ಸಮಿತಿಯ ಭಾಗವಾಗಿರಲಿದ್ದಾರೆ ಎಂದು ಹೇಳಿದೆ.
 
ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದ ತುಂಬಾ ಹಳೆಯ ವಿವಾದವಾಗಿದ್ದು, ಕರ್ನಾಟಕದ ಬೆಳಗಾವಿ ಹಾಗೂ ಇತರೆ ಕೆಲವು ಗಡಿ ಭಾಗಗಳು ತಮಗೆ ಸೇರಿದ್ದೆಂದು ಮಹಾರಾಷ್ಟ್ರ ಮೊದಲನಿಂದಲೂ ವಾದಿಸುತ್ತಾ ಬಂದಿದೆ. ಸದ್ಯ ಪ್ರಕರಣ ಸುಪ್ರೀಂ ಕೋರ್ಟ್‌ನಲ್ಲಿದ್ದು, ವಿಚಾರಣಾ ಹಂತದಲ್ಲಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments