Webdunia - Bharat's app for daily news and videos

Install App

ಬೆಳಗಾವಿ ಗಡಿ ವಿವಾದ: ಮೋದಿ ಮಧ್ಯಪ್ರವೇಶಕ್ಕೆ ಮಹಾರಾಷ್ಟ್ರ ಪಟ್ಟು

Webdunia
ಗುರುವಾರ, 12 ಆಗಸ್ಟ್ 2021 (08:42 IST)
ಮುಂಬೈ(ಆ.12): ಕರ್ನಾಟಕದೊಂದಿಗೆ ದಶಕಗಳ ಹಳೆಯ ಗಡಿ ವಿವಾದ ಇತ್ಯರ್ಥಕ್ಕೆ ಮಧ್ಯಪ್ರವೇಶ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಹಾರಾಷ್ಟ್ರದ ಉಪಮುಖ್ಯಮಂತ್ರಿ, ಎನ್ಸಿಪಿ ನಾಯಕ ಅಜಿತ್ ಪವಾರ್ ಮನವಿ ಮಾಡಿದ್ದಾರೆ.

ಈ ಕುರಿತು ಆ.9ರಂದು ಪ್ರಧಾನಿ ಮೋದಿಗೆ ಪತ್ರ ಬರೆದಿರುವ ಪವಾರ್ ‘ಮುಂಬೈಯನ್ನು ರಾಜಧಾನಿಯಾಗಿಸಿ ಮಹಾರಾಷ್ಟ್ರ ರಾಜ್ಯ ರಚನೆಯಾಗಿ 60ಕ್ಕಿಂತ ಹೆಚ್ಚಿನ ವರ್ಷಗಳೇ ಕಳೆದರೂ ಕರ್ನಾಟಕದಲ್ಲಿನ ಮರಾಠಿ ಭಾಷಿಕ ಪ್ರದೇಶಗಳಾದ ಬೆಳಗಾವಿ, ಕಾರವಾರ, ಬೀದರ್, ಭಾಲ್ಕಿ, ನಿಪ್ಪಾಣಿ ಮತ್ತು ಇತರೆ ಹಲವು ಪ್ರದೇಶಗಳು ಮಹಾರಾಷ್ಟ್ರಕ್ಕೆ ಸೇರಿಸಿಲ್ಲ. ಇಷ್ಟು ವರ್ಷಗಳಾದರೂ ಸಮಸ್ಯೆ ಇನ್ನೂ ಬಗೆ ಹರಿಯದೇ ಇರುವುದಕ್ಕೆ ಮಹಾರಾಷ್ಟ್ರ ಮತ್ತು ಕರ್ನಾಟಕದಲ್ಲಿನ ಮರಾಠಿ ಭಾಷಿಕ ಪ್ರದೇಶಗಳ ಜನರಿಗೆ ವಿಷಾದವಿದೆ. ಈ ಎಲ್ಲಾ ಭಾಗಗಳನ್ನು ಒಳಗೊಂಡ ಸಂಯುಕ್ತ ಮಹಾರಾಷ್ಟ್ರ ರಚನೆಯ ಕನಸು ನನಸಾಗುವವರೆಗೂ ಮಹಾರಾಷ್ಟ್ರ ವಿರಮಿಸುವುದಿಲ್ಲ. ಈ ಕುರಿತು ಸುಪ್ರೀಂಕೋರ್ಟ್ನಲ್ಲಿ ಕಾನೂನು ಹೋರಾಟ ಮುಂದುವರೆಯುವುದಾದರೂ, ಈ ವಿಷಯ ಸಂಬಂಧ ನೀವು ಮಹಾರಾಷ್ಟ್ರದ ಜನರ ಭಾವನೆಗಳನ್ನು ಅರ್ಥ ಮಾಡಿಕೊಳ್ಳಬೇಕು ಮತ್ತು ನ್ಯಾಯಸಿಗುವಂತೆ ನೋಡಿಕೊಳ್ಳಬೇಕು ಎಂದು ಕೋರುತ್ತೇವೆ’ ಎಂದಿದ್ದಾರೆ.
 ‘ಸುಪ್ರೀಂಕೋರ್ಟ್ನಲ್ಲಿ ನಡೆಯುತ್ತಿರುವ ಕಾನೂನು ಹೋರಾಟದಲ್ಲಿ ಮಹಾರಾಷ್ಟ್ರಕ್ಕೆ ನ್ಯಾಯ ಸಿಗಲಿದೆ ಎಂಬ ಭರವಸೆ ಇದೆ. ಆದರೂ ನಾವು ಈ ಹಂತದಲ್ಲಿ ನಿಮ್ಮ ಕರ್ನಾಟಕದಲ್ಲಿನ ಮರಾಠಿ ಭಾಷಿಕರಿಗೆ ನ್ಯಾಯ ದೊರಕಿಸಲು ನಿಮ್ಮ ನೆರವನ್ನು ಕೋರುತ್ತೇವೆ. ನೀವು ಈ ವಿಷಯದಲ್ಲಿ ನಮ್ಮ ಆಶಯ ನೆರವೇರಿಸುತ್ತೀರಿ ಎಂಬ ನಂಬಿಕೆಯೂ ಇದೆ’ ಎಂದು ಹೇಳಿದ್ದಾರೆ. ಜೊತೆಗೆ ‘ಮಹಾರಾಷ್ಟ್ರಕ್ಕೆ ಸೇರಿದ ವಿವಾದಿತ ಪ್ರದೇಶ ಮತ್ತು ಇತರೆ ಮರಾಠಿ ಭಾಷಿಕ ಪ್ರದೇಶಗಳಲ್ಲಿ ಮರಾಠಿ ಭಾಷಿಕರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ತಡೆಯಬೇಕು’ ಎಂದೂ ಪವಾರ್ ಮನವಿ ಮಾಡಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಬಿಜೆಪಿಯಿಂದ ಒಂದು ಉಗ್ರ ಹೋರಾಟ

Priyank Kharge: ನಿಮ್ಮ ಮಕ್ಳು ಮಾತ್ರ ಕೊಹ್ಲಿ ಜೊತೆ ಫೋಟೋ ತೆಗೆಸಿಕೊಳ್ಬೇಕಾ: ಪ್ರಿಯಾಂಕ್ ಖರ್ಗೆಗ ನೆಟ್ಟಿಗರು ಟಾಂಗ್

Indore Raja Raguvamshi murder: ಮಗನಂತೇ ನಾಟಕವಾಡಿ, ರಘುವಂಶಿ ಸಾವಿನ ದಿನ ತಬ್ಬಿ ಸಾಂತ್ವನಿಸಿದ್ದ ಆರೋಪಿ ರಾಜ್

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

ಮುಂದಿನ ಸುದ್ದಿ
Show comments