Webdunia - Bharat's app for daily news and videos

Install App

ಬೆಂಗಳೂರು ಮೂಲದ ಸಂಗೀತಗಾರ ಮುಂಬೈನಲ್ಲಿ ಆತ್ಮಹತ್ಯೆ

Webdunia
ಸೋಮವಾರ, 11 ಸೆಪ್ಟಂಬರ್ 2017 (11:57 IST)
12 ಅಂತಸ್ತಿನ ಕಟ್ಟಡದಿಂದ ಹಾರಿ ಮ್ಯೂಸಿಶಿಯನ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಮೃತ ಸಂಗೀತಗಾರನನ್ನ ಬೆಂಗಳೂರು ಮೂಲದ 29 ವರ್ಷದ ಕರಣ್ ಜೋಸೆಫ್ ಎಂದು ಗುರ್ತಿಸಲಾಗಿದೆ. ಸ್ನೇಹಿತ ರಿಶಿ ಶಾಗೆ ಕಂಪನಿಯಿಂದ ನೀಡಿದ್ದ 12ನೇ ಮಹಡಿಯ ಫ್ಲ್ಯಾಟ್`ನ ಕಿಟಕಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ.
 

ಕಳೆದೊಂದು ತಿಂಗಳಿಂದ ಸ್ನೇಹಿತನ ಜೊತೆ ವಾಸವಿದ್ದ ಕರಣ್ ತೀವ್ರ ಖಿನ್ನತೆಯಿಂದ ಬಳಲುತ್ತಿದ್ದರು. ಬೆಳಗ್ಗೆ 8.30ರ ಸುಮಾರಿಗೆ ಸ್ನೇಹಿತರ ಜೊತೆ ಕುಳಿತು ಟಿವಿ ನೋಡುತ್ತಿದ್ದ ಕರಣ್, ಕಿಟಕಿ ಬಳಿಗೆ ಹೋಗಿ ಅಲ್ಲಿಂದ ಧುಮುಕಿ ಆತ್ಮಹತ್ಯೆ ಮಾಡಿಕೊಮಡಿದ್ದಾನೆ. ಈ ಸಂದರ್ಭ ಕರಣ್ ಪಾನಮತ್ತನಾಗಿದ್ದನೆಂದು ವರದಿಯಾಗಿದೆ.

ಮೇಲಿನಿಂದ ಜಿಗಿದ ಬಳಿಕವೂ ಕರಣ್`ನನ್ನ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಬರುವಾಗಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಶುಕ್ರವಾರ ರಾತ್ರಿ ಮನೆ ಬಿಟ್ಟು ತೆರಳಿದ್ದ ಕರಣ್ ಬೆಳಗಿನ ಜಾವ ಮನೆಗೆ ಬಂದಿದ್ದ. ಈ ಸಂದರ್ಭ ಬೇಸರದಲ್ಲಿದ್ದ ಎನ್ನಲಾಗಿದೆ. ಕರಣ್ ಆತ್ಮಹತ್ಯೆಗೆ ಸಂಬಂಧಿಸಿದಂತೆ ಯಾವುದೇ ಡೆತ್ ನೊಟ್ ಪತ್ತೆಯಾಗಿಲ್ಲವೆಂದು ಪೊಲೀಸರು ತಿಳಿಸಿದ್ದಾರೆ. ಕರಣ್ ಮೊಬೈಲನ್ನ ವಿಧಿ ವಿಜಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂಗಳಿಗೆ ಹೀಗೇ ತೊಂದರೆ ಕೊಡುತ್ತಿದ್ದರೆ ಬಿಜೆಪಿ ಕೈಕಟ್ಟಿ ಕೂರಲ್ಲ: ಬಿವೈ ವಿಜಯೇಂದ್ರ

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ಇಂದು ನಿರಾಸೆ

Gold Price today: ಚಿನ್ನದ ದರ ಕೇಳಿದ್ರೆ ಇಂದು ಶಾಕ್ ಆಗ್ತೀರಿ

Kanimozhi: ಭಾರತದ ರಾಷ್ಟ್ರಭಾಷೆ ಯಾವುದು, ಸಂಸದೆ ಕನಿಮೊಳಿ ಕೊಟ್ಟ ಉತ್ತರದ ವಿಡಿಯೋ ಈಗ ವೈರಲ್

Mangaluru: ದಕ್ಷಿಣ ಕನ್ನಡ ಜಿಲ್ಲೆಯಿಂದ 21 ಹಿಂದೂ ನಾಯಕರು, 15 ಮುಸ್ಲಿಂ ನಾಯಕರು ಗಡೀಪಾರು

ಮುಂದಿನ ಸುದ್ದಿ
Show comments