Select Your Language

Notifications

webdunia
webdunia
webdunia
webdunia

ಭಗವಂತ್ ಮಾನ್ ವಿಶೇಷ ಅಧಿವೇಶನದ ಬೇಡಿಕೆಯನ್ನು ತಿರಸ್ಕಾರ!

ಭಗವಂತ್ ಮಾನ್ ವಿಶೇಷ ಅಧಿವೇಶನದ ಬೇಡಿಕೆಯನ್ನು ತಿರಸ್ಕಾರ!
ಚಂಡೀಗಢ , ಗುರುವಾರ, 22 ಸೆಪ್ಟಂಬರ್ 2022 (06:38 IST)
ಚಂಡೀಗಢ : ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ತಮ್ಮ ಬಹುಮತವನ್ನು ಸಾಬೀತುಪಡಿಸಲು ವಿಶೇಷ ಅಧಿವೇಶನವನ್ನು ಕರೆದಿದ್ದರು.

ಆದರೆ ಪಂಜಾಬ್ನ ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಅವರು ಇದಕ್ಕೆ ಅನುಮತಿಯನ್ನು ನಿರಾಕರಿಸಿದ್ದಾರೆ. ರಾಜ್ಯದಲ್ಲಿ ಬಿಜೆಪಿ ತನ್ನ ಸರ್ಕಾರವನ್ನು ಬೀಳಿಸಲು ಪ್ರಯತ್ನಿಸುತ್ತಿದೆ ಎಂದು ಎಎಪಿ  ಈ ಹಿಂದೆ ಆರೋಪಿಸಿತ್ತು.

ಈ ಹಿನ್ನೆಲೆ ಸೋಮವಾರ ಭಗವಂತ್ ಮಾನ್ ಅವರು ಗುರುವಾರ ವಿಶ್ವಾಸಮತ ಯಾಚನೆ ಮಾಡುವುದಾಗಿ ಹೇಳಿದ್ದರು. ಆದರೆ ವಿಶ್ವಾಸಮತ ಸಾಬೀತುಪಡಿಸಲು ಕರೆದಿರುವ ಅಧಿವೇಶನ ನಿಯಮಾನುಸಾರವಾಗಿಲ್ಲ ಎಂದು ರಾಜಭವನ ವಿಶೇಷ ಅಧಿವೇಶನದ ಆದೇಶವನ್ನು ರದ್ದುಗೊಳಿಸಿದೆ.

 

Share this Story:

Follow Webdunia kannada

ಮುಂದಿನ ಸುದ್ದಿ

ನೈಋತ್ಯ ರೈಲ್ವೆ ಬೆಂಗಳೂರು ವಿಭಾಗದಿಂದ ಅಪಘಾತದ ಅಣಕು ಪ್ರದರ್ಶನ