ಭಾರತ್ ಜೋಡೋ : 7ನೇ ದಿನ ಮುಂದುವರಿದ ಪಾದಯಾತ್ರೆ

Webdunia
ಮಂಗಳವಾರ, 13 ಸೆಪ್ಟಂಬರ್ 2022 (15:40 IST)
ನವದೆಹಲಿ : ಕಾಂಗ್ರೆಸ್ನ ಬಹು ನಿರೀಕ್ಷಿತ ಭಾರತ್ ಜೋಡೋ ಯಾತ್ರೆಯ ಏಳನೇ ದಿನದ ಪಾದಯಾತ್ರೆ ಆರಂಭವಾಗಿದ್ದು,
 
ಇಂದು 100 ಕಿಲೋ ಮೀಟರ್ ಹಾದಿಯನ್ನು ಯಾತ್ರೆ ಕ್ರಮಿಸಿದೆ. ರಾಹುಲ್ ಗಾಂಧಿ ನೇತೃತ್ವದಲ್ಲಿ ಕನ್ಯಾಕುಮಾರಿಯಿಂದ ಹೊರಟಿರುವ ಯಾತ್ರೆ ಕೇರಳದ ಕಣಿಯಾಪುರಂ ತಲುಪಿದೆ.

ಇಂದು ಕಣಿಯಾಪುರಂನಿಂದ ಪಾದಯಾತ್ರೆ ಹೊರಟಿದ್ದು, ಮುಂದಿನ 17 ದಿನಗಳ ಕಾಲ ಕೇರಳದ ಬೇರೆ ಬೇರೆ ನಗರಗಳ ಮೂಲಕ ಯಾತ್ರೆ ಸಾಗಲಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಭಾರತದ ಕನಸು ಭಗ್ನಗೊಂಡಿದೆ, ಚದುರಿಹೋಗಿಲ್ಲ.

ಕನಸನ್ನು ನನಸಾಗಿಸಲು ನಾವು ಭಾರತವನ್ನು ಸಂಪರ್ಕಿಸುತ್ತಿದ್ದೇವೆ. 100 ಕಿಮೀ ಮುಗಿದಿದೆ, ನಾವು ಈಗಷ್ಟೇ ಪ್ರಾರಂಭಿಸಿದ್ದೇವೆ ಎಂದು ಹೇಳಿದ್ದಾರೆ. 

ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ 3,500 ಕಿಲೋಮೀಟರ್ ಮೆರವಣಿಗೆಯು 150 ದಿನಗಳಲ್ಲಿ ಪೂರ್ಣಗೊಳ್ಳಲಿದೆ. ಈ ಯಾತ್ರೆ 12 ರಾಜ್ಯಗಳಲ್ಲಿ ಸಂಚರಿಸಲಿದೆ. ಸದ್ಯ ಕೇರಳದಲ್ಲಿರುವ ಯಾತ್ರೆ, ಮುಂದಿನ 18 ದಿನಗಳ ಕಾಲ ಸಂಚರಿಸಲಿದ್ದು, ಸೆಪ್ಟೆಂಬರ್ 30 ರಂದು ಕರ್ನಾಟಕವನ್ನು ತಲುಪಲಿದೆ. ಕರ್ನಾಟಕದಲ್ಲಿ 21 ದಿನಗಳ ಕಾಲ ಪಾದಯಾತ್ರೆ ನಡೆಯಲಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಶ್ವವಿಖ್ಯಾತ ಜಂಬೂಸವಾರಿ: ಮೆರವಣಿಗೆಯಲ್ಲಿ 58 ಸ್ತಬ್ಧಚಿತ್ರ, ನೂರಾರು ಕಲಾತಂಡಗಳು ಭಾಗಿ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಪೇಸ್‌ಮೇಕರ್‌ ಅಳವಡಿಕೆ: ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

ನವೆಂಬರ್ ಕ್ರಾಂತಿ ಇಲ್ಲ, ಬರೀ ಬ್ರಾಂತಿ ಅಷ್ಟೇ: ಸಿಎಂ ಬದಲಾವಣೆ ಬಗ್ಗೆ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ

ಗ್ಯಾರಂಟಿ ಹಣದಲ್ಲಿ ವಾಷಿಂಗ್ ಮಷಿನ್ ಖರೀದಿಸಿ ಮಹಿಳೆ ಪೂಜೆ: ವಿಡಿಯೊ ಹಂಚಿ ಸಿದ್ದರಾಮಯ್ಯ ಸಂತಸ

ದಸರಾ-ದೀಪಾವಳಿಗೆ ಕರ್ನಾಟಕಕ್ಕೆ ₹3705 ಕೋಟಿ ಕೇಂದ್ರದ ಕೊಡುಗೆ: ಪ್ರಲ್ಹಾದ ಜೋಶಿ

ಮುಂದಿನ ಸುದ್ದಿ
Show comments