Webdunia - Bharat's app for daily news and videos

Install App

ಮೈ ನವಿರೇಳಿಸುವ ‘ಭಾರತ್ ಕೆ ವೀರ್’ ಗೀತೆ ಬಿಡುಗಡೆ; ದೇಶಕ್ಕಾಗಿ ಮಡಿದ ಯೋಧರ ಕುಟುಂಬಕ್ಕೊಂದು ನೆರವಿನ ಹಸ್ತ (ವಿಡಿಯೋ ನೋಡಿ)

Webdunia
ಭಾನುವಾರ, 21 ಜನವರಿ 2018 (08:12 IST)
ನವದೆಹಲಿ: ಉಗ್ರರ ವಿರುದ್ಧದ ಹೋರಾಟದಲ್ಲಿ ಪ್ರಾಣತ್ಯಾಗ ಮಾಡಿದ ಅರೆಸೇನಾ ಪಡೆ ಯೋಧರ ಕುಟುಂಬಗಳಿಗೆ ನೆರವು ನೀಡುವುದಕ್ಕಾಗಿ ಮೂಲ ನಿಧಿ ಸಂಗ್ರಹಿಸಲು ಆರಂಭಿಸಿದ ‘ಭಾರತ್ ಕೆ ವೀರ್’ ಗೀತೆಯನ್ನು ಶನಿವಾರ ನಡೆದ ಕಾರ್ಯಕ್ರಮದಲ್ಲಿ ಬಿಡುಗಡೆ ಮಾಡಲಾಯಿತು.


ಈ ಗೀತೆಗೆ ಕೈಲಾಶ್ ಖೇರ್ ಸಂಗೀತ ಸಂಯೋಜಿಸಿದ್ದಾರೆ ಜತೆಗೆ ಸಾಹಿತ್ಯ ರಚಿಸಿ ಮನೋಜ್ಞವಾಗಿ ಹಾಡಿದ್ದಾರೆ. ಈ ಗೀತೆಯನ್ನು ಗೃಹ ಸಚಿವ ರಾಜನಾಥ್ ಸಿಂಗ್, ಗೃಹ ಖಾತೆ ರಾಜ್ಯ ಸಚಿವರಾದ ಕಿರಣ್ ರಿಜಿಜು ಹಾಗೂ ಹಂಸರಾಜ್ ಅಹಿರ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಢೊಬಾಲ್ ಹಾಗೂ ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರು ಬಿಡುಗಡೆ ಮಾಡಿದ್ದಾರೆ.


ಹಾಡನ್ನು ಡೌನ್‌ಲೋಡ್ ಮಾಡಿಕೊಳ್ಳಿ ಎಂದು ಎಲ್ಲರಲ್ಲೂ ಕೇಳಿಕೊಳ್ಳುತ್ತೇನೆ, ಅದರಿಂದ ಬರುವ ಹಣವನ್ನು ಈ ಯೋಜನೆಗೆ ನೀಡಲಾಗುತ್ತದೆ ಎಂದು  ಕೈಲಾಶ್ ಖೇರ್ ವಿನಂತಿಸಿಕೊಂಡರು.  ಇನ್ನು ಈ ಅಭಿಯಾನದಲ್ಲಿ ಪ್ರಮುಖ ಪಾತ್ರ ವಹಿಸಿದ ಅಕ್ಷಯ್ ಕುಮಾರ್ ಅವರನ್ನು ರಾಜನಾಥ್ ಸಿಂಗ್ ಅವರು ಶ್ಲಾಫಿಸಿದರು.





ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments