Webdunia - Bharat's app for daily news and videos

Install App

ಭೂಗತಪಾತಕಿ ಛೋಟಾ ರಾಜನ್‌ಗೆ ಬಿಗ್ ರಿಲೀಫ್: ಜೀವಾವಧಿ ಶಿಕ್ಷೆ ಅಮಾನತು, ಜಾಮೀನು ಮಂಜೂರು

Sampriya
ಬುಧವಾರ, 23 ಅಕ್ಟೋಬರ್ 2024 (14:31 IST)
Photo Courtesy X
ಮುಂಬೈ: ಭೂಗತ ಪಾತಕಿ ಛೋಟಾ ರಾಜನ್‌ಗೆ ವಿಧಿಸಲಾಗಿದ್ದ ಜೀವಾವಧಿ ಶಿಕ್ಷೆಯನ್ನು ಮುಂಬೈ ಹೈಕೋರ್ಟ್ ಬುಧವಾರ ಅಮಾನತು ಮಾಡಿದೆ. ಜೊತೆಗೆ ಆತನಿಗೆ ಜಾಮೀನು ಮಂಜೂರು ಮಾಡಿದೆ.

2001ರಲ್ಲಿ ನಡೆದಿದ್ದ ಹೋಟೆಲ್ ಉದ್ಯಮಿ ಜಯ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿದ್ದ ಭೂಗತ ಪಾತಕಿ ಛೋಟಾ ರಾಜನ್‌ಗೆ ಬಾಂಬ್ ಹೈಕೋರ್ಟ್ ಇಂದು ಜಾಮೀನು ಮಂಜೂರು ಮಾಡಿದೆ.

ವಿಶೇಷ ಮೋಕಾ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಛೋಟಾ ರಾಜನ್ ಸಲ್ಲಿಸಿರುವ ಮೇಲ್ಮನವಿ ತೀರ್ಮಾನವಾಗುವವರೆಗೂ, ಆತನ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿರುವ ನ್ಯಾ. ರೇವತಿ ಮೋಹಿತೆ-ಡೇರೆ ಹಾಗೂ ಪೃಥ್ವಿರಾಜ್ ಚವಾಣ್ ಅವರನ್ನೊಳಗೊಂಡ ವಿಭಾಗೀಯ ನ್ಯಾಯಪೀಠವು, ಜಾಮೀನನ್ನೂ ಮಂಜೂರು ಮಾಡಿದೆ.

ಮೇ 30, 2024ರಂದು ವಿಶೇಷ ಮೋಕಾ ನ್ಯಾಯಾಲಯವು ಛೋಟಾ ರಾಜನ್ ಹಾಗೂ ಮತ್ತಿತರರನ್ನು ಅಪರಾಧಿಗಳು ಎಂದು ಘೋಷಿಸಿತ್ತು ಹಾಗೂ ಛೋಟಾ ರಾಜನ್ ಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಛೋಟಾ ರಾಜನ್‌ಗೆ ಜೀವಾವಧಿ ಶಿಕ್ಷೆ ವಿಧಿಸಿದ್ದ ಎರಡನೆ ಪ್ರಕರಣ ಇದಾಗಿದ್ದು, 2011ರಲ್ಲಿ ನಡೆದಿದ್ದ ಪತ್ರಕರ್ತ ಜ್ಯೋತಿರ್ಮೊಯ್ ಡೇ ಹತ್ಯೆ ಪ್ರಕರಣದಲ್ಲಿ ಆತ ಸೆರೆವಾಸ ಅನುಭವಿಸುತ್ತಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನಕ್ಕಾಗಿ ತೆರಳುತ್ತಿದ್ದ ಎಂಟು ಮಂದಿ ಭೀಕರ ರಸ್ತೆ ಅಪಘಾತದಲ್ಲಿ ಬಲಿ

ಷರತ್ತುಬದ್ಧ ಜಾಮೀನು ಪಡೆದ ಮಹೇಶ್‌ ಶೆಟ್ಟಿ ತಿಮರೋಡಿಗೆ ಮತ್ತೆ ಬಂಧನದ ಭೀತಿ

ಗಾಜಿಯಾಬಾದ್‌: ಬೀದಿ ನಾಯಿಗಳಿಗೆ ಊಟ ಹಾಕುತ್ತಿದ್ದ ಮಹಿಳೆಗೆ ಅಟ್ಟಾಡಿಸಿ ಹೊಡದ ವ್ಯಕ್ತಿ, Viral Video

ರಾಹುಲ್ ಗಾಂಧಿಯನ್ನು ಭೇಟಿಯಾದ ಕರ್ನಾಟಕದ ಟ್ಯಾಕ್ಸಿ ಚಾಲಕರಿಗೆ ಹೊಸ ಭರವಸೆ

ವಿದೇಶಿ ಶಕ್ತಿಗಳ ಕೈವಾಡವೂ ಅಡಗಿರುವ ಸಾಧ್ಯತೆ: ವಿಜಯೇಂದ್ರ

ಮುಂದಿನ ಸುದ್ದಿ
Show comments