Select Your Language

Notifications

webdunia
webdunia
webdunia
webdunia

ಜಂತರ್ ಮಂತರ್‌ನಲ್ಲಿ ಭಾಗಿಯಾದ ಪ್ರತಿಭಟನಕಾರರಿಗೆ ಬಿಗ್ ರಿಲೀಫ್

Jantar Mantar Protest
ನವದೆಹಲಿ: ಇಲ್ಲಿನ‌ ಜಂತರ್ ಮಂತರ್ ನಲ್ಲಿ‌ ನಡೆದ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ ವ್ಯಕ್ತಿಗಳ ವಿರುದ್ಧ ದೆಹಲಿ ಪೊಲೀಸರು ಯಾವುದೇ ಪ್ರತಿಕೂಲ ಕಾನೂನು ಕ್ರಮ ಕೈಗೊಳ್ಳುವುದಿಲ್ಲ; ಆದರೆ, ಕ್ರಿಮಿನಲ್ ಹಿನ್ನೆಲೆ ಹೊಂದಿರುವವರು ಕ್ರಮ ಎದುರಿಸಬೇಕಾಗುತ್ತದೆ ಎಂದು ದೆಹಲಿ ಸರ್ಕಾರದ ಆದೇಶದಲ್ಲಿ‌ ತಿಳಿಸಿದೆ.

ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ಈಗಾಗಲೇ ಬಂಧನ ಅಥವಾ ವಶಕ್ಕೆ ಪಡೆಯುವಿಕೆ ನಡೆದಿದ್ದರೆ, ಆ ಬಂಧನಗಳನ್ನು ಪರಿಶೀಲಿಸುವ ಮತ್ತು ಬಂಧಿತರನ್ನು ಬಿಡುಗಡೆ ಮಾಡುವ ಪ್ರಕ್ರಿಯೆಯನ್ನು ತ್ವರಿತವಾಗಿ ಕೈಗೊಳ್ಳಲಾಗುವುದು ಎಂದು ಗೃಹ ಇಲಾಖೆ ತಿಳಿಸಿದೆ.

ದೆಹಲಿ ಸರ್ಕಾರವು ಪ್ರತಿಭಟನೆಯಲ್ಲಿ ಭಾಗವಹಿಸಿದ ವ್ಯಕ್ತಿಗಳ ವಿರುದ್ಧ ಯಾವುದೇ ಹೆಚ್ಚಿನ ಪ್ರತಿಕೂಲ ಕ್ರಮ ಕೈಗೊಳ್ಳಲು ಉದ್ದೇಶಿಸಿಲ್ಲ ಮತ್ತು ಈ ವಿಷಯಕ್ಕೆ ಸಂಬಂಧಿಸಿದಂತೆ ಭವಿಷ್ಯದಲ್ಲಿ ಯಾವುದೇ ಕ್ರಮಗಳಿಲ್ಲದೆ ಪ್ರಕರಣವನ್ನು ಮುಕ್ತಾಯಗೊಳಿಸಲಾಗುವುದು ಎಂದು ಗೃಹ ಇಲಾಖೆ ಆದೇಶದಲ್ಲಿ ತಿಳಿಸಿದೆ.

ಪ್ರತಿಭಟನೆಯಲ್ಲಿ ಭಾಗವಹಿಸಿದವರ ವಿರುದ್ಧ ದೆಹಲಿ ವ್ಯಾಪ್ತಿಯ ಯಾವುದೇ ಪೊಲೀಸ್ ಪ್ರಾಧಿಕಾರವು ಯಾವುದೇ ಪ್ರತಿಕೂಲ ಕಾನೂನು ಕ್ರಮ ಕೈಗೊಳ್ಳುವುದಿಲ್ಲ ಎಂದು ಅದು ಸ್ಪಷ್ಟಪಡಿಸಿದೆ.

ಜುಲೈ 20 ರಂದು 'ಕಾಕ್ರೋಚ್ ಜನತಾ ಪಾರ್ಟಿ' ನಡೆಸಿದ 'ಚಲೋ ಸಂಸದ್' ಮೆರವಣಿಗೆಯ ವೇಳೆ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು 13 ಎಫ್‌ಐಆರ್‌ಗಳನ್ನು (FIR) ದಾಖಲಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

Karnataka Weather: ಭಾರೀ ಮಳೆ, ಇದೇ 31ರ ವರೆಗೆ ರಾಜ್ಯದ ಈ 15ಜಿಲ್ಲೆಗಳಲ್ಲಿ ಆರೆಂಜ್ ಆಲರ್ಟ್‌