Webdunia - Bharat's app for daily news and videos

Install App

ವಂಚನೆ ಪ್ರಕರಣ ರದ್ದು: ಡಿವಿಎಸ್ ಪುತ್ರನಿಗೆ ಬಿಗ್ ರಿಲೀಫ್

Webdunia
ಶುಕ್ರವಾರ, 16 ಡಿಸೆಂಬರ್ 2016 (11:15 IST)
ವಂಚನೆ ಪ್ರಕಣದಲ್ಲಿ ಸಿಲುಕಿದ್ದ ಕೇಂದ್ರ ಸಚಿವ ಸದಾನಂದ ಗೌಡ ಅವರ ಪುತ್ರ ಕಾರ್ತಿಕ್ ಗೌಡ ಅವರ ಮೇಲೆ ದಾಖಲಾಗಿದ್ದ ಮೊಕದ್ದಮೆಯನ್ನು ಹೈಕೋರ್ಟ್ ರದ್ದುಗೊಳಿಸಿದೆ.

 
ಆರ್ ಟಿ ನಗರ ಪೊಲೀಸರು ಸಲ್ಲಿಸಿದ್ದ ಚಾರ್ಜ್‌ಶೀಟ್‌ನ್ನು ರದ್ದುಗೊಳಿಸುವಂತೆ ಕಾರ್ತಿಕ್ ಕೋರ್ಟ್ ಮೆಟ್ಟಿಲೇರಿದ್ದರು. ಮತ್ತೀಗ ಅದನ್ನು ಹೈಕೋರ್ಟ್ ಪೀಠ ರದ್ದುಗೊಳಿಸಿದ್ದು ಕಾರ್ತಿಕ್ ಗೌಡ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಮೈತ್ರಿಯಾ ಹೇಳಿಕೆ ಮತ್ತು ದೂರಿನಲ್ಲಿದ್ದ ಗೊಂದಲ ಮತ್ತು ವೈದ್ಯಕೀಯ ವರದಿಯನ್ನು ಆಧರಿಸಿ ಕೋರ್ಟ್ ಈ ತೀರ್ಮಾನವನ್ನು ಕೈಗೊಂಡಿದೆ.
 
ನಟಿ ಮೈತ್ರಿಯಾ ಗೌಡ ಕಾರ್ತಿಕ್ ತಮಗೆ ವಂಚಿಸಿದ್ದಾರೆ ಎಂದು ದೂರು ಸಲ್ಲಿಸಿದ್ದರು. ವಿವಾಹ ವಂಚನೆ ಆರೋಪಕ್ಕೆ ಸಂಬಂಧಪಟ್ಟಂತೆ ಸುದೀರ್ಘ ಕಾಲದಿಂದ ಈ ಪ್ರಕರಣ ವಂಚನೆಗೊಳಗಾಗಿತ್ತು.
 
ಮೊದಲು ತನ್ನ ಮೇಲೆ ಅತ್ಯಾಚಾರವಾಗಿದೆ ಎಂದು ದೂರು ನೀಡಿದ್ದ ಮೈತ್ರಿಯಾ ಬಳಿಕ ನಮ್ಮಿಬ್ಬರ ಮದುವೆಯಾಗಿದೆ ಎಂದು ಹೇಳಿಕೆ ನೀಡಿದ್ದರು. ಅವರ ಹೇಳಿಕೆಗಳಲ್ಲಿಯೇ ವೈರುಧ್ಯಗಳಿದ್ದವು. ಮದುವೆಯಾದ ಮೇಲೆ ಅತ್ಯಾಚಾರದ ಪ್ರಶ್ನೆ ಎಲ್ಲಿಂದ ಎಂಬುದು ಕೋರ್ಟ್‌ ಕೇಳಿದ ಪ್ರಶ್ನೆಯಾಗಿತ್ತು. 
 
ವಿಚಾರಣೆ ನಡೆಯುತ್ತಿದ್ದ ಸಂದರ್ಭದಲ್ಲಿಯೇ ಕಾರ್ತಿಕ್ ಬೇರೊಬ್ಬ ಯುವತಿಯ ಜತೆ ಮದುವೆಯಾಗಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತೀಯ ಮುಸ್ಲಿಮರು ಮತ್ತು ಹಿಂದೂಗಳು ನಡುವೆ ಬೆಂಕಿ ಹೊತ್ತಿಸಲು ಪಾಕ್‌ನಿಂದ ಪ್ರಯತ್ನ: ಅಸಾದುದ್ದೀನ್ ಓವೈಸಿ

ತಕ್ಷಣದ ಕದನ ವಿರಾಮಕ್ಕೆ ಭಾರತ, ಪಾಕಿಸ್ತಾನ ಒಪ್ಪಿಗೆ: ಮಹತ್ವದ ಪೋಸ್ಟ್ ಹಂಚಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ರಾಜ್ಯದಲ್ಲಿ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

ಟಿವಿ ಕಾರ್ಯಕ್ರಮಗಳಲ್ಲಿ ಸೈರನ್ ಮೊಳಗಿಸದಂತೆ ಕೇಂದ್ರ ಸರ್ಕಾರ ನಿರ್ಬಂಧ

Operation Sindoor: ಬೆಟ್ಟಿಂಗ್ ವೇಳೆ ಪಾಕಿಸ್ತಾನ ಪರ ಕೂಗಿದವ ಅರೆಸ್ಟ್‌, ಆಗಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments