ಗುಜರಾತ್: ಇಲ್ಲಿನ ಛೋಟೌದೇಪುರ ಜಿಲ್ಲೆಯಲ್ಲಿ ಐದು ವರ್ಷದ ಮಗುವಿನ ಕತ್ತು ಸೀಳಿ, ದೇವರಿಗೆ ರಕ್ತ ಅರ್ಪಿಸಿದ ಭಯಾನಕ ಘಟನೆ ನಡೆದಿದೆ.
ಬುಡಕಟ್ಟು ಪ್ರಾಬಲ್ಯದ ಜಿಲ್ಲೆಯ ಪನೇಜ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಬೆಳಿಗ್ಗೆ ತಾಯಿ ಇರುವಾಗಲೇ ಆರೋಪಿ ಲಾಲಾ ತಡ್ವಿ ಮಗುವನ್ನು ಕಿಡ್ನ್ಯಾಪ್ ಮಾಡಿದ್ದಾನೆ ಎಂದು ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ (ಎಎಸ್ಪಿ) ಗೌರವ್ ಅಗರ್ವಾಲ್ ಹೇಳಿದ್ದಾರೆ.
ನಂತರ ಮಗುವನ್ನು ತನ್ನ ಮನೆಗೆ ಕರೆದೊಯ್ದು ಕೊಡಲಿಯಿಂದ ಆಕೆಯ ಕುತ್ತಿಗೆಗೆ ಮಾರಕ ಗಾಯಗಳನ್ನು ಮಾಡಿದ್ದಾನೆ ಎಂದು ಅಗರ್ವಾಲ್ ಹೇಳಿದ್ದಾರೆ.
ನಂತರ ಅವನು ಹುಡುಗಿಯ ಕುತ್ತಿಗೆಯಿಂದ ಹೊರಬರುತ್ತಿದ್ದ ರಕ್ತವನ್ನು ಸಂಗ್ರಹಿಸಿ, ಅದರಲ್ಲಿ ಸ್ವಲ್ಪವನ್ನು ತನ್ನ ಮನೆಯಲ್ಲಿರುವ ಸಣ್ಣ ದೇವಸ್ಥಾನದ ಮೆಟ್ಟಿಲುಗಳ ಮೇಲೆ ಅರ್ಪಿಸಿದ್ದಾನ್. ಇದನ್ನು ಕಂಡು ಮಗುವಿನ ತಾಯಿ ಮತ್ತು ಇತರ ಕೆಲವು ಗ್ರಾಮಸ್ಥರು ಆಘಾತಕ್ಕೊಳಗಾಗಿದ್ದರು, ಆದರೆ ಅವನು ಕೊಡಲಿಯನ್ನು ಹಿಡಿದಿದ್ದರಿಂದ ಜನ ಹತ್ತಿರ ಹೋಗಲು ಭಯಪಟ್ಟಿದ್ದಾರೆ.
ಆರೋಪಿಯು ಮಾಂತ್ರಿಕನಂತೆ ಕಾಣುತ್ತಿಲ್ಲ, ಮತ್ತು ಕೊಲೆಯ ಹಿಂದಿನ ನಿಖರವಾದ ಉದ್ದೇಶ ಇನ್ನೂ ಸ್ಪಷ್ಟವಾಗಿಲ್ಲ ಎಂದು ಅಗರ್ವಾಲ್ ಹೇಳಿದರು.
"ಆರೋಪಿ ಮಾನಸಿಕವಾಗಿ ಅಸ್ವಸ್ಥನಂತೆ ಕಾಣುತ್ತಿದ್ದಾನೆ" ಎಂದು ಅವರು ಹೇಳಿದರು.
ಬಾಲಕಿಯ ಕುಟುಂಬದ ದೂರಿನ ಮೇರೆಗೆ, ಕೊಲೆ ಮತ್ತು ಅಪಹರಣಕ್ಕೆ ಸಂಬಂಧಿಸಿದ ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ಗಳ ಅಡಿಯಲ್ಲಿ ತಡ್ವಿ ವಿರುದ್ಧ ಎಫ್ಐಆರ್ ದಾಖಲಿಸಲಾಗುತ್ತಿದೆ ಎಂದು ಅಗರ್ವಾಲ್ ಮಾಹಿತಿ ನೀಡಿದ್ದಾರೆ.