Select Your Language

Notifications

webdunia
webdunia
webdunia
webdunia

ಮೇಕೆದಾಟು ಯೋಜನೆ ಕುರಿತು ಲೋಕಸಭೆಯಲ್ಲಿ ಭಾರಿ ಗದ್ದಲ; 26 ಸದಸ್ಯರನ್ನು ಅಮಾನತು ಮಾಡಿದ ಸ್ಪೀಕರ್‌

ನವದೆಹಲಿ
ನವದೆಹಲಿ , ಗುರುವಾರ, 3 ಜನವರಿ 2019 (07:35 IST)
ನವದೆಹಲಿ : ಮೇಕೆದಾಟು ಯೋಜನೆಯ ಹಿನ್ನಲೆಯಲ್ಲಿ ಲೋಕಸಭೆಯಲ್ಲಿ ಭಾರಿ ಗದ್ದಲ ಏರ್ಪಟ್ಟ ಕಾರಣ ಲೋಕಸಭಾ ಸ್ಪೀಕರ್‌ ಸುಮಿತ್ರಾ ಮಹಾಜನ್‌ 26 ಸದಸ್ಯರನ್ನು ಅಮಾನತು ಮಾಡಿದ್ದಾರೆ.


ಮೇಕೆದಾಟು ಕಾಮಗಾರಿ ಕಾರ್ಯ ಯೋಜನೆಯ ವರದಿಯನ್ನು ಸಿದ್ಧಪಡಿಸಲು ಕೇಂದ್ರ ಸರಕಾರ ಅನುಮತಿ ನೀಡಿದ್ದಕ್ಕೆ ತಮಿಳುನಾಡು ಸರಕಾರ ಭಾರಿ ವಿರೋಧ ವ್ಯಕ್ತಪಡಿಸಿದೆ. ಬುಧವಾರ ಲೋಕಸಭೆ ಕಲಾಪ ಸೇರುತ್ತಿದ್ದಂತೆ ಎಐಡಿಎಂಕೆ ಸದಸ್ಯರು ಈ ಬಗ್ಗೆ ಚರ್ಚಿಸಿ  ಗದ್ದಲ ಮಾಡಿದ್ದಾರೆ.


ಕಲಾಪಕ್ಕೆ ಅನುವು ಮಾಡಿಕೊಡುವಂತೆ ಲೋಕಸಭಾ ಸ್ಪೀಕರ್‌ ಸುಮಿತ್ರಾ ಮಹಾಜನ್‌ ಹಲವಾರು ಬಾರಿ ಮನವಿ ಮಾಡಿದರೂ ಕೂಡ ಅವರ ಮಾತಿನ್ನು ಲೆಕ್ಕಿಸದೆ  ಸದಸ್ಯರು ಗದ್ದಲ ಮಾಡಿದ್ದಾರೆ. ಈ ಹಿನ್ನೆಲೆ ಸ್ಪೀಕರ್‌ ಸುಮಿತ್ರಾ ಮಹಾಜನ್‌ 26 ಸದಸ್ಯರನ್ನು ಅಮಾನತು ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಮೂರು ಬ್ಯಾಂಕುಗಳ ವಿಲೀನಕ್ಕೆ ಒಪ್ಪಿಗೆ ನೀಡಿದ ಕೇಂದ್ರ ಸಚಿವ ಸಂಪುಟ