Publish Date: Tue, 20 Jun 2017 (15:23 IST)
Updated Date: Tue, 20 Jun 2017 (15:27 IST)
ಎನ್ಡಿಎ ಮೈತ್ರಿಕೂಟದಿಂದ ರಾಷ್ಟ್ರಪತಿ ಅಭ್ಯರ್ಥಿಯಾಗಿರುವ ರಾಮಾನಾಥ್ ಕೋವಿಂದ್ ರಾಜ್ಯಪಾಲ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
ಬಿಹಾರ್ ರಾಜ್ಯಪಾಲ ರಾಮಾನಾಥ್ ಕೋವಿಂದ್ ನೀಡಿದ ರಾಜೀನಾಮೆಯನ್ನು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅಂಗೀಕರಿಸಿದ್ದಾರೆ.
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ನಿನ್ನೆ ಆಯೋಜಿಸಲಾದ ಸುದ್ದಿಗೋಷ್ಠಿಯಲ್ಲಿ ರಾಮಾನಾಥ್ ಕೋವಿಂದ್ ಅವರ ಹೆಸರನ್ನು ರಾಷ್ಟ್ರಪತಿ ಅಭ್ಯರ್ಥಿ ಸ್ಥಾನಕ್ಕಾಗಿ ಪ್ರಕಟಿಸಿದ್ದರು. ಯುಪಿಎ ಮೈತ್ರಿಕೂಟ ಕೂಡಾ ಕೋವಿಂದ್ ಅವರನ್ನು ಬೆಂಬಲಿಸುವಂತೆ ಮನವಿ ಮಾಡಿದ್ದರು.
ಕೇಂದ್ರದಲ್ಲಿ ಎನ್ಡಿಎ ಮೈತ್ರಿಕೂಟಕ್ಕೆ ಬಹುಮತವಿರುವುದರಿಂದ ಜುಲೈ 17 ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಯಲ್ಲಿ ರಾಷ್ಟ್ರಪತಿ ಅಭ್ಯರ್ಥಿ ಕೋವಿಂದ್ ಅವರ ಗೆಲುವು ಬಹುತೇಕ ಗೆಲುವು ಖಚಿತ ಎನ್ನಲಾಗಿದೆ.
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
http://kannada.fantasycricket.webdunia.com/
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.