ವಿದ್ಯುತ್ ವಿತರಣಾ ಕಂಪೆನಿಗಳ ಆದಾಯ ನಷ್ಟವನ್ನು ತಡೆಯಲು ವಿದ್ಯುತ್ ಇಲಾಖೆಯ ಅಧಿಕಾರಿಗಳು ಇಲಾಖೆಯ ಆದಾಯ ಹೆಚ್ಚಳಕ್ಕೆ ಶ್ರಮಿಸುವಂತೆ ಬಿಹಾರ್ ಸರಕಾರ ಆದೇಶ ಹೊರಡಿಸಿದೆ.
ವಿದ್ಯುತ್ ಇಲಾಖೆಯ ಆದಾಯ ಹೆಚ್ಚಿಸುವ ಅಧಿಕಾರಿಗಳಿಗೆ ನಗದು ಬಹುಮಾನ ಕೊಡಲಾಗುವುದು. ಒಂದು ವೇಳೆ ಆದಾಯ ಕುಸಿತವಾದಲ್ಲಿ ವೇತನದಲ್ಲಿ ಕಡಿತ ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಮುಖ್ಯ ಕಾರ್ಯದರ್ಶಿ ಅಂಜನಿ ಕುಮಾರ್ ಸಿಂಗ್ ವಿಡಿಯೋ ಕಾನ್ಫರೆನ್ಸ್ ಮೂಲಕ ವಿದ್ಯುತ್ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಒಂದು ವೇಳೆ ನಿಮ್ಮ ವೇತನ ಹೆಚ್ಚಿಸಿಕೊಳ್ಳಬೇಕಾದಲ್ಲಿ ಕಷ್ಟಪಟ್ಟು ದುಡಿಯಿರಿ ಎಂದು ಸಲಹೆ ನೀಡಿದ್ದಾರೆ.
ಹೊರರಾಜ್ಯದ ಇತರ ಕಂಪೆನಿಗಳಿಂದ ವಿದ್ಯುತ್ ಖರೀದಿಸಲು ಅಗತ್ಯವಾದ ಮೊತ್ತ ಸ್ಥಳೀಯವಾಗಿ ಉತ್ಪಾದಿಸುವ ವಿದ್ಯುತ್ ವೆಚ್ಚದಲ್ಲಿ ಸ್ವಲ್ಪ ವ್ಯತ್ಯಾಸವಿರುವುದರಿಂದ ಅಧಿಕಾರಿಗಳಿಗೆ ಸರಕಾರ ಎಚ್ಚರಿಕೆಯ ಸಂದೇಶ ರವಾನಿಸಿದೆ.