Webdunia - Bharat's app for daily news and videos

Install App

ಬ್ಯಾಂಕ್ ಮ್ಯಾನೇಜರ್‌ಗೆ ಕಪಾಳಮೋಕ್ಷ: ಶಾಸಕನ ಬಂಧನ

Webdunia
ಶನಿವಾರ, 30 ಜುಲೈ 2016 (15:55 IST)
ಬಿಹಾರ್‌ನ ಕಟಿಹಾರ್ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಬ್ಯಾಂಕ್ ಮ್ಯಾನೇಜರ್‌ಗೆ ಕಪಾಳಮೋಕ್ಷ ಮಾಡಿದ ಆರೋಪದ ಮೇಲೆ ಸಿಪಿಐ(ಎಂಎಲ್) ಪಕ್ಷದ ಶಾಸಕ ಮೆಹಬೂಬ್ ಆಲಂನನ್ನು ಪೊಲೀಸರು ಬಂಧಿಸಿದ್ದಾರೆ.
 
ಅಲಹಾಬಾದ್‌ ಬ್ಯಾಂಕ್‌‌ನ ಗ್ವಾಲ್ಟೋಲಿ ಶಾಖೆಯ ವ್ಯವಸ್ಥಾಪಕ ರಾಜೇಶ್ ರಂಜನ್, ಶಾಸಕ ಆಲಂ ಕರ್ತವ್ಯನಿರ್ವಹಣೆಗೆ ಅಡ್ಡಿಯಾಗಿದ್ದಲ್ಲದೇ ಶಾಖೆಯನ್ನು ಬಲವಂತವಾಗಿ ಮುಚ್ಚಿಸುವ ಯತ್ನ ಮಾಡಿ ಅಸಭ್ಯ ಪದಗಳಿಂದ ನಿಂದಿಸಿ ಹಲ್ಲೆ ಮಾಡಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಿದ್ದಾರೆ.   
 
ಗ್ವಾಲ್ಟೋಲಿ ಶಾಖೆಯಲ್ಲಿ ಶಾಸಕನ ವರ್ತನೆಯ ಬಗ್ಗೆ ರಂಜನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಲಿಖಿತ ದೂರು ನೀಡಿದ ಹಿನ್ನೆಲೆಯಲ್ಲಿ ಆರೋಪಿ ಶಾಸಕನ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ.  
 
ಮಾಧ್ಯಮದ ವರದಿಗಾರರು ಘಟನೆ ಕುರಿತಂತೆ ಶಾಸಕ ಆಲಂನನ್ನು ಪ್ರಶ್ನಿಸಿದಾಗ, ಬ್ಯಾಂಕ್‌ ಮ್ಯಾನೇಜರ್ ಆರೋಪಗಳಲ್ಲಿ ಸತ್ಯಾಂಶವಿಲ್ಲ. ಅವರು ನನ್ನ ವಿರುದ್ಧ ಕೇಸ್ ದಾಖಲಿಸಿದ್ರೆ ನಾನು ಅವರ ವಿರುದ್ಧ ಕೇಸ್ ದಾಖಲಿಸುತ್ತೇನೆ. ಜನರ ಸಮಸ್ಯೆಗಳನ್ನು ತೆಗೆದುಕೊಂಡು ಬ್ಯಾಂಕ್‌ಗೆ ಹೋಗಿದ್ದೆ. ಆದರೆ, ಬ್ಯಾಂಕ್ ಮ್ಯಾನೇಜರ್ ತುಂಬಾ ಭ್ರಷ್ಟ ಅಧಿಕಾರಿ ಎಂದು ಕಿಡಿಕಾರಿದ್ದಾರೆ.
 
ಆದರೆ, ಬ್ಯಾಂಕ್‌ನ ಸಿಸಿಟಿವಿಯಲ್ಲಿ ಶಾಸಕ ಆಲಂ ಬ್ಯಾಂಕ್‌ ಮ್ಯಾನೇಜರ್‌ಗೆ ಕಪಾಳಮೋಕ್ಷ ಮಾಡಿರುವ ವಿಡಿಯೋ ಘಟನೆಯನ್ನು ಖಚಿತಪಡಿಸಿದೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತದ 52ನೇ ಸಿಜೆಐ ಆಗಿ ನೇಮಕಗೊಂಡ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಹಿನ್ನಲೆ ಇಲ್ಲಿದೆ

Prajwal Revanna: ವಕೀಲರನ್ನೂ ನೇಮಿಸಿಕೊಂಡಿಲ್ಲ: ಪ್ರಜ್ವಲ್ ರೇವಣ್ಣ ಪರಿಸ್ಥಿತಿ ಏನಾಗಿದೆ ನೋಡಿ

PM Modi: ಉಗ್ರರ ದಮನಕ್ಕೆ ಸೇನೆಗೆ ಸಂಪೂರ್ಣ ಪವರ್ ಕೊಟ್ಟ ಪ್ರಧಾನಿ ಮೋದಿ

K Annamalai: ಮೋದಿ, ಅಮಿತ್ ಶಾ ಹೆಸರಲ್ಲಿ ಅಮೆರಿಕದಲ್ಲಿ ಅಣ್ಣಾಮಲೈ ವಿಶೇಷ ಪೂಜೆ

ಉಗ್ರರ ಹಿಮ್ಮೆಟ್ಟಿಸಲು ಐಕ್ಯತೆ ಅವಶ್ಯಕ: ಮಾಜಿ ಪ್ರಧಾನಿ ದೇವೇಗೌಡ

ಮುಂದಿನ ಸುದ್ದಿ
Show comments