Webdunia - Bharat's app for daily news and videos

Install App

ಅನಿಲ್ ಹೆಗ್ಡೆಗೆ ಬಿಹಾರ್ ರಾಜ್ಯಸಭಾ ಟಿಕೆಟ್

Webdunia
ಮಂಗಳವಾರ, 17 ಮೇ 2022 (08:22 IST)
ಪಾಟ್ನಾ : ಬಿಹಾರದಿಂದ ರಾಜ್ಯಸಭೆಗೆ ಈ ಬಾರಿ ಆಡಳಿತಾರೂಢ ಜೆಡಿಯು ಪಕ್ಷವು ಕನ್ನಡಿಗ ಹಾಗೂ ಉಡುಪಿ ಮೂಲದ ಅನಿಲ್ ಹೆಗ್ಡೆ ಅವರಿಗೆ ಟಿಕೆಟ್ ನೀಡಿದೆ.

ಮೂಲತಃ ಮಂಗಳೂರಿನವರಾಗಿದ್ದ ಅನಿಲ್ ಹೆಗ್ಡೆ ಅವರು ಸುದೀರ್ಘ ಅವಧಿವರೆಗೆ ಜಾರ್ಜ್ ಫರ್ನಾಂಡಿಸ್ ಅವರ ಕಾರ್ಯದರ್ಶಿಯಾಗಿದ್ದರು. ಮಹೇಂದ್ರ ಪ್ರಸಾದ್ ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ಉಪಚುನಾವಣೆ ನಡೆಯುತ್ತಿದ್ದು, ಇದೀಗ ಜೆಡಿಯು ಅನಿಲ್ ಹೆಗ್ಡೆ ಅವರನ್ನು ಕಣಕ್ಕಿಳಿಸಿರುವುದಾಗಿ ಪ್ರಕಟಣೆ ಮೂಲಕ ತಿಳಿಸಿದೆ. 

ಕಳೆದ ವರ್ಷ ಡಿಸೆಂಬರ್ 27 ರಂದು ಜನತಾ ದಳ ಯುನೈಟೆಡ್ (ಜೆಡಿಯು) ಸಂಸದ ಮಹೇಂದ್ರ ಪ್ರಸಾದ್ ಅವರ ನಿಧನದ ನಂತರ ತೆರವಾದ ರಾಜ್ಯಸಭಾ ಸ್ಥಾನಕ್ಕೆ ಬಿಹಾರದಲ್ಲಿ ಉಪಚುನಾವಣೆ ನಡೆಯುತ್ತಿದೆ. ಇದೇ ಮೇ 30 ರಂದು ಉಪಚುನಾವಣೆ ನಡೆಯಲಿದೆ.

ರಾಜ್ಯಸಭಾ ಉಪಚುನಾವಣೆಗೆ ನಾಮಪತ್ರ ಸಲ್ಲಿಸಲು ಮೇ 19 ಕೊನೆಯ ದಿನವಾಗಿದೆ. ಮೇ 30ರಂದು ಬೆಳಿಗ್ಗೆ 9 ರಿಂದ ಸಂಜೆ 4ರ ವರೆಗೆ ಮತದಾನ ನಡೆಯಲಿದೆ. ಬಳಿಕ ಅದೇ ದಿನ ಮತ ಎಣಿಕೆ ಕಾರ್ಯ ನಡೆಯಲಿದೆ. 

ಈ ಆಯ್ಕೆಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜೆಡಿಯು ನಾಯಕರೊಬ್ಬರು, ರಾಜ್ಯಸಭಾ ಉಪಚುನಾವಣೆಗೆ ಅನಿಲ್ ಹೆಗ್ಡೆಯವರ ನಾಮಪತ್ರ ಘೋಷಣೆ ಆಶ್ಚರ್ಯ ತಂದಿದೆ. ಇದು ಸಂಘಟನೆ ಮತ್ತು ಪಕ್ಷಕ್ಕಾಗಿ ಮೌನವಾಗಿ ದುಡಿಯುತ್ತಿರುವ ವ್ಯಕ್ತಿಗೆ ಸಿಕ್ಕ ಪ್ರತಿಫಲವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments