Webdunia - Bharat's app for daily news and videos

Install App

ಐಪಿಎಲ್‌ ಬೆಟ್ಟಿಂಗ್‌ನಲ್ಲಿ ಪತ್ನಿಯನ್ನೇ ಪಣಕ್ಕಿಟ್ಟು ಸೋತ ಪತಿ ಮಹಾಶಯ

Webdunia
ಭಾನುವಾರ, 29 ಮೇ 2016 (11:26 IST)
ಮಹಾಭಾರತದಲ್ಲಿ ಯುಧಿಷ್ಠರ ಪತ್ನಿ ದ್ರೌಪದಿಯನ್ನು ಪಣಕ್ಕಿಟ್ಟು ಸೋತಂತೆ ಪತಿ ಮಹಾಶಯನೊಬ್ಬ ಪತ್ನಿಯನ್ನು ಐಪಿಎಲ್‌ ಬೆಟ್ಟಿಂಗ್‌ಗೆ ಒಡ್ಡಿ ಸೋತ ಘಟನೆ ವರದಿಯಾಗಿದೆ.
 
ಕಾನ್ಪುರ್ ಜಿಲ್ಲೆಯ ಗೋವಿಂದನಗರ್ ನಿವಾಸಿಯಾಗಿರುವ ರವೀಂದ್ರ ಸಿಂಗ್ ಎನ್ನು ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಪಣಕ್ಕಿಟ್ಟು ಸೋತಿದ್ದಾನೆ.
 
ರವೀಂದ್ರ ಸಿಂಗ್ ವಿರುದ್ಧ ಐಪಿಎಲ್ ಬೆಟ್ಟಿಂಗ್‌ನಲ್ಲಿ ಗೆದ್ದವರು ಪತ್ನಿ ಜಸ್ಮಿತ್ ಕೌರ್‌ಗೆ ಕಿರುಕುಳ ನೀಡಲು ಆರಂಭಿಸಿದ್ದಾರೆ. ಇದರಿಂದ ಬೇಸತ್ತ ಕೌರ್ ಸಾಮಾಜಿಕ ಸಂಘಟನೆಗಳ ಕಾರ್ಯಕರ್ತರ ಬೆಂಬಲ ಪಡೆದು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ. 
 
ಪೊಲೀಸರು ಪತಿ ರವೀಂದ್ರ ಸಿಂಗ್ ಮತ್ತು ಆತನ ಇತರ ಸಹಚರರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಯಲ್ಲಿ ತೊಡಗಿದ್ದಾರೆ. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿಗಳು ಪರಾರಿಯಾಗಿದ್ದಾರೆ. 
 
ಪೊಲೀಸ್ ಮೂಲಗಳ ಪ್ರಕಾರ, ಆರೋಪಿ ರವೀಂದ್ರ ಸಿಂಗ್ ತನ್ನೆಲ್ಲಾ ಹಣವನ್ನು ಶೇರುಮಾರುಕಟ್ಟೆಯಲ್ಲಿ ಕಳೆದುಕೊಂಡ ನಂತರ, ಐಪಿಎಲ್‌ ಬೆಟ್ಟಿಂಗ್‌ನಿಂದ ಹಣ ಸಂಪಾದಿಸಲು ಪತ್ನಿಯನ್ನೇ ಅಡವಿಟ್ಟಿದ್ದಾನೆ. ಅದರಲ್ಲೂ ಕೂಡಾ ಸೋತಿದ್ದಾನೆ. 
 
ಐದು ವರ್ಷಗಳ ಹಿಂದೆ ವಿವಾಹವಾದ ದಂಪತಿಗಳ ಮಧ್ಯೆ ಸಾಮರಸ್ಯದ ಕೊರತೆ ಎದುರಾಗಿತ್ತು. ವಿವಾಹವಾದ ಮಾರನೇ ದಿನದಿಂದಲೇ ಪತಿಯ ಕಾಟ ಆರಂಭವಾಗಿತ್ತು. ವಿವಾಹ ಸಂದರ್ಭದಲ್ಲಿ ನನಗೆ ಬಂದಿದ್ದ ಎಲ್ಲಾ ಉಡುಗೊರೆಗಳನ್ನು ಶೇರುವಹಿವಾಟಿನಲ್ಲಿ ಕಳೆದುಕೊಂಡಿದ್ದ ಎಂದು ಬ್ಯೂಟಿ ಪಾರ್ಲರ್ ಒಡತಿಯಾದ ಜಸ್ಮಿತ್ ಕೌರ್ ತಿಳಿಸಿದ್ದಾರೆ. 
 
ಮದ್ಯ ಸೇವನೆ, ಜೂಜಾಟ ಸೇರಿದಂತೆ ಹಲವಾರು ದುಶ್ಚಟಗಳಿಂದಾಗಿ ಮನೆಯಲ್ಲಿದ್ದ ಹಣ, ಒಡುವೆ, ಆಸ್ತಿ, ಪಾಸ್ತಿ ಎಲ್ಲವನ್ನು ಕಳೆದುಕೊಂಡಿದ್ದ ಎಂದು ಆರೋಪಿಸಿದ್ದಾಳೆ. 
 
ಐಪಿಎಲ್‌ನಲ್ಲಿ ಬೆಟ್ಟಿಂಗ್ ಆಡಲು ವಾಸವಾಗಿದ್ದ ಮನೆಯನ್ನೇ ಮಾರಾಟ ಮಾಡುವ ಯೋಚನೆಯಲ್ಲಿದ್ದಾಗ ಈ ಘಟನೆ ನಡೆದಿದೆ ಎಂದು ಆರೋಪಿ ರವೀಂದ್ರ ಸಿಂಗ್ ಪತ್ನಿ ಜಸ್ಮಿತ್ ಕೌರ್ ತಿಳಿಸಿದ್ದಾಳೆ. 

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೊಸೆಯನ್ನು ಕೊಂದು ನಾಟಕವಾಡಿದ್ದ ಮಾವ ಹತ್ಯೆಗೂ ಮುನ್ನಾ ಮಾಡಿದ್ದ ನೀಚ ಕೆಲಸ

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ಮೇಲೆ ರೇಪ್ ಕೇಸ್ ಗೆ ಬಿಗ್ ಟ್ವಿಸ್ಟ್

ಕೇರಳ ಶಾಲೆಗಳಲ್ಲಿ ಜುಂಬಾ ನೃತ್ಜಕ್ಕೆ ಮುಸ್ಲಿಂ ಗುಂಪಿನಿಂದ ವಿರೋಧ

ಮಲೆ ಮಹದೇಶ್ವರ ಬೆಟ್ಟ: ಐದು ಹುಲಿಗಳ ಸಾವಿನ ಹಿಂದಿದೆ ಧ್ವೇಷದ ಕತೆ

ವಿಮಾನ ದುರಂತ: ತೀವ್ರವಾಗಿ ಮುಂದುವರೆದ ತನಿಖೆ

ಮುಂದಿನ ಸುದ್ದಿ
Show comments