ದೇಶದಲ್ಲಿ ಬಿಜೆಪಿ ಮತ್ತು ಆಲ್ ಇಂಡಿಯಾ ಮಜ್ಲಿಸ್ ಎಇತ್ತೇಹಾದುಲ್ ಮುಸ್ಲಮೀನ್ (ಎಐಎಂಐಎಂ) ಮೈತ್ರಿ ಮಾಡಿಕೊಂಡಲ್ಲಿ ದೇಶವನ್ನು ಕಾಂಗ್ರೆಸ್ನಿಂದ ಮುಕ್ತಗೊಳಿಸಬಹುದು ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಸಹೋದರ ಅಕ್ಬರುದ್ದೀನ್ ಓವೈಸಿ ಹೇಳಿದ್ದಾರೆ.
ಅಕ್ಬರುದ್ದೀನ್ ಓವೈಸಿ ನೀಡಿದ ಹೇಳಿಕೆ ಸಾಮಾಜಿಕ ಅಂತರ್ಜಾಲ ತಾಣಗಳಲ್ಲಿ ವೈರಲ್ ಆಗಿದ್ದು, ಆರೋಪ ಪ್ರತ್ಯಾರೋಪಗಳು ಹೊರಬಂದಿವೆ.
ಗ್ರೇಟರ್ ಹೈದ್ರಾಬಾದ್ ಮುನ್ಸಿಪಲ್ ಕಾರ್ಪೋರೇಶನ್ ಚುನಾವಣೆ ಅಂಗವಾಗಿ ಆಯೋಜಿಸಿದ ಪ್ರಚಾರ ಕಾರ್ಯಕ್ರಮದಲ್ಲಿ ಅಕ್ಬರುದ್ದೀನ್ ತಮ್ಮ ಹೇಳಿಕೆ ನೀಡಿದ್ದಾರೆ.
ಕಾಂಗ್ರೆಸ್ ಪಕ್ಷದ ನಾಯಕರು ಗಾಂಧಿಯ ಗುಲಾಮರಾಗಿದ್ದಾರೆ. ನರೇಂದ್ರ ಮೋದಿಯವರೊಂದಿಗೆ ಮೈತ್ರಿ ಮಾಡಿಕೊಂಡು ಕಾಂಗ್ರೆಸ್ ಪಕ್ಷವನ್ನು ಬುಡಸಮೇತ ಕಿತ್ತುಹಾಕುತ್ತೇನೆ ಎಂದು ಗುಡುಗಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ವಿರುದ್ಧವು ವಾಗ್ದಾಳಿ ನಡೆಸಿದ ಅಕ್ಬರುದ್ದೀನ್, ಚಾಯಿ ಮಾರಾಟ ಮಾಡುವ ವ್ಯಕ್ತಿ ಸಬಕಾ ಸಾಥ್ ಸಬಕಾ ವಿಕಾಸ್ ಹೇಗೆ ಮಾಡಲು ಸಾಧ್ಯ ಎಂದು ಪ್ರಶ್ನಿಸಿದ್ದಾರೆ.