Webdunia - Bharat's app for daily news and videos

Install App

ದೆಹಲಿ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದ ಬಿಜೆಪಿ; ಕೇಜ್ರಿವಾಲ್ ವಿರುದ್ಧ ಪರ್ವೇಶ ಕಣಕ್ಕೆ

Sampriya
ಶನಿವಾರ, 4 ಜನವರಿ 2025 (15:15 IST)
Photo Courtesy X
ನವದೆಹಲಿ: ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್‌, ಆಪ್ ಬಳಿಕ ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಪಟ್ಟಿಯಲ್ಲಿ 29 ಅಭ್ಯರ್ಥಿಗಳ ಹೆಸರು ಘೋಷಿಸಿದೆ.

ಎಎಪಿ ಈಗಾಗಲೇ ದೆಹಲಿಯ ಎಲ್ಲಾ 70 ವಿಧಾನಸಭಾ ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಘೋಷಿಸಿದ್ದು, ಕಾಂಗ್ರೆಸ್ ಇದುವರೆಗೆ 47 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿದೆ‌. ಅದರ ಬೆನ್ನಲ್ಲೇ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಘೋಷಿಸಿದೆ.

ಕಾಲ್ಕಾಜಿಯಲ್ಲಿ ಮುಖ್ಯಮಂತ್ರಿ ಅತಿಶಿ ವಿರುದ್ಧ ಹಿರಿಯ ನಾಯಕ ರಮೇಶ್ ಬಿಧುರಿ, ನವದೆಹಲಿ ಕ್ಷೇತ್ರದಲ್ಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್, ವಿರುದ್ಧ ಮಾಜಿ ಸಂಸದ ಪರ್ವೇಶ ವರ್ಮಾ ಅವರನ್ನು ಕಣಕ್ಕಿಳಿಸಿದೆ.

ಬಿಜೆಪಿ ತನ್ನ ಗಾಂಧಿನಗರ ಶಾಸಕ ಅನಿಲ್ ಬಾಜ್‌ಪೇಯ್ ಅವರನ್ನು ಕೈಬಿಟ್ಟು ದೆಹಲಿಯ ಕಾಂಗ್ರೆಸ್ ಮಾಜಿ ಮುಖ್ಯಸ್ಥ ಅರವಿಂದರ್ ಸಿಂಗ್ ಲವ್ಲಿಗೆ ಟಿಕೆಟ್ ನೀಡಿದೆ. ಶೀಲಾ ದೀಕ್ಷಿತ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ 2003 ರಿಂದ 2013ರ ವರೆಗೆ ಸಚಿವರಾಗಿದ್ದ ಲವ್ಲಿ ಕಳೆದ ವರ್ಷ ಬಿಜೆಪಿ ಸೇರಿದ್ದರು.  

ಎಎಪಿ ಮಾಜಿ ಸಚಿವ, ಕೇಜ್ರಿವಾಲ್ ಆಪ್ತರಾಗಿದ್ದ ಕೈಲಾಶ್ ಗಹ್ಲೋಟ್ ಬಿಜೆಪಿಯಿಂದ ನಜಾಫ್‌ಗಢ್ ಬದಲಿಗೆ ಬಿಜ್ವಾಸನ್‌ನಿಂದ ಕಣಕ್ಕಿಳಿದಿದ್ದರೆ, ರಾಜ್ ಕುಮಾರ್ ಆನಂದ್ ಪಟೇಲ್ ನಗರದಿಂದ ಟಿಕೆಟ್ ಪಡೆದಿದ್ದಾರೆ. ಎಎಪಿಯಿಂದ ಬಿಜೆಪಿಗೆ ತೆರಳಿದ್ದ ಶಾಸಕ ಕರ್ತಾರ್ ಸಿಂಗ್ ತನ್ವಾರ್ ಅವರ ಛತ್ತರ್‌ಪುರ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ.

ವಿಪಕ್ಷದ ನಾಯಕ ವಿಜೇಂದರ್ ಗುಪ್ತಾ, ಓಂ ಪ್ರಕಾಶ್ ಶರ್ಮಾ, ಅಜಯ್ ಮಹಾವರ್ ಮತ್ತು ಜಿತೇಂದರ್ ಮಹಾಜನ್ ಸೇರಿದಂತೆ ಬಿಜೆಪಿಯ ಹಾಲಿ ಶಾಸಕರು ಕ್ರಮವಾಗಿ ರೋಹಿಣಿ, ವಿಶ್ವಾಸ್ ನಗರ, ಘೋಂಡಾ ಮತ್ತು ರೋಹ್ತಾಸ್ ನಗರದಿಂದ ಸ್ಪರ್ಧಿಸಲಿದ್ದಾರೆ. ದೆಹಲಿ ಬಿಜೆಪಿ ಮಾಜಿ ಅಧ್ಯಕ್ಷ ಸತೀಶ್ ಉಪಾಧ್ಯಾಯ ಮಾಳವೀಯಾ ನಗರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದು, ಮನೋಜ್ ಶೋಕೀನ್ ನಂಗ್ಲೋಯ್ ಜಾಟ್‌ನಿಂದ ಕಣಕ್ಕಿಳಿದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments