Webdunia - Bharat's app for daily news and videos

Install App

ಸಂವಿಧಾನದ ಮೇಲೆ ಬಿಜೆಪಿಯ ದಾಳಿ– ರಾಹುಲ್ ಗಾಂಧಿ

Webdunia
ಗುರುವಾರ, 28 ಡಿಸೆಂಬರ್ 2017 (19:43 IST)
ದೇಶದ ಸಂವಿಧಾನದ ಮೇಲೆ ಬಿಜೆಪಿ ದಾಳಿ ನಡೆಸುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
 
ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ ಸಮಾರಂಭದಲ್ಲಿ ಬಿಜೆಪಿಯ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಬಿಜೆಪಿ ರಾಜಕೀಯ ಅನುಕೂಲಕ್ಕಾಗಿ ಸುಳ್ಳನ್ನು ಬಳಸಿಕೊಳ್ಳುತ್ತಿದೆ ಎಂದಿದ್ದಾರೆ.
 
ಕಾಂಗ್ರೆಸ್ ಚುನಾವಣೆಗಳಲ್ಲಿ ಸೋಲು ಕಂಡಿರಬಹುದು ಆದರೆ, ನಾವು ಎಂದಿಗೂ ಸತ್ಯವನ್ನು ಬಿಟ್ಟುಕೊಟ್ಟಿಲ್ಲ. ಸತ್ಯ ಕಾಂಗ್ರೆಸ್‍ನ ಮುಖ್ಯ ಧ್ಯೇಯವಾಗಿದ್ದರೆ, ರಾಜಕೀಯ ಪ್ರಯೋಜನಗಳಿಗಾಗಿ ಬಿಜೆಪಿ ಸುಳ್ಳಿನ ಕಂತೆಗಳನ್ನು ಸೃಷ್ಟಿಸುತ್ತಿದೆ ಎಂದು ದೂಷಿಸಿದ್ದಾರೆ.
 
ಕಾಂಗ್ರೆಸ್‍ಗೆ ಭವ್ಯ ಮತ್ತು ವೈಭವದ ಇತಿಹಾಸವಿದೆ. ಸತ್ಯ ಎಂಬುದು ಪಕ್ಷದ ಅವಿಭಾಜ್ಯ ಅಂಗ. ಇದರ ರಕ್ಷಣೆಗೆ ನಾವು ಹೋರಾಟ ಮುಂದುವರಿಸುತ್ತೇವೆ ಎಂದು ಅವರು ಘೋಷಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments