Webdunia - Bharat's app for daily news and videos

Install App

ಬಿಜೆಪಿಯ ಭೀಷ್ಮ ಎಲ್‌.ಕೆ. ಅಡ್ವಾಣಿಗೆ 97ನೇ ಜನ್ಮದಿನದ ಸಂಭ್ರಮ: ಮೋದಿ ಸೇರಿ ಗಣ್ಯರಿಂದ ಶುಭಾಶಯ

Sampriya
ಶುಕ್ರವಾರ, 8 ನವೆಂಬರ್ 2024 (14:08 IST)
Photo Courtesy X
ನವದೆಹಲಿ: ಬಿಜೆಪಿಯ ಧುರೀಣ, ಮಾಜಿ ಉಪ ಪ್ರಧಾನಿ ಎಲ್.ಕೆ.ಅಡ್ವಾಣಿ ಅವರಿಗೆ ಇಂದು 97ನೇ ಹುಟ್ಟುಹಬ್ಬದ ಸಂಭ್ರಮ. ಅವರಿಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು, ಅಭಿಮಾನಿಗಳು ಶುಭ ಕೋರಿದ್ದು,  ಪಕ್ಷ ಮತ್ತು ದೇಶಕ್ಕೆ ಅಡ್ವಾಣಿ ಅವರ ಸೇವೆಯನ್ನು ಮುಖಂಡರು ಇದೇ ಸಂದರ್ಭದಲ್ಲಿ ಮೆಲುಕುಹಾಕಿದ್ದಾರೆ.

ಎಲ್.​ಕೆ.ಅಡ್ವಾಣಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ದೇಶದ ಅತ್ಯಂತ ಮೆಚ್ಚುಗೆ ಪಡೆದ ರಾಜನೀತಿಜ್ಞರಲ್ಲಿ ಅಡ್ವಾಣಿ ಒಬ್ಬರು. ಬುದ್ಧಿವಂತಿಕೆ ಮತ್ತು ದೂರದೃಷ್ಟಿಯಿಂದಾಗಿ ಸದಾ ಅವರು ಗೌರವಿಸಲ್ಪಟ್ಟಿದ್ದಾರೆ. ಅವರ ಮಾರ್ಗದರ್ಶನವನ್ನು ಹಲವು ವರ್ಷಗಳಿಂದ ಪಡೆದಿರುವುದು ನನ್ನ ಅದೃಷ್ಟ. ದೀರ್ಘ ಮತ್ತು ಆರೋಗ್ಯಕರ ಜೀವನಕ್ಕಾಗಿ ಪ್ರಾರ್ಥಿಸುತ್ತೇನೆ ಎಂದು ಮೋದಿ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಅಡ್ವಾಣಿ ಅವರಿಗೆ ಈ ವರ್ಷ ಇನ್ನಷ್ಟು ವಿಶೇಷವಾಗಿದೆ. ಏಕೆಂದರೆ ಅವರು ದೇಶಕ್ಕೆ ಸಲ್ಲಿಸಿದ ಅತ್ಯುತ್ತಮ ಸೇವೆಗಾಗಿ ಭಾರತ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ದೇಶದ ಅತ್ಯಂತ ಮೆಚ್ಚುಗೆ ಪಡೆದ ರಾಜಕೀಯ ನಾಯಕರಲ್ಲಿ ಒಬ್ಬರಾದ ಅಡ್ವಾಣಿ ಅವರು ದೇಶದ ಅಭಿವೃದ್ಧಿಗಾಗಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ ಎಂದು ಮೋದಿ ಕೊಂಡಾಡಿದ್ದಾರೆ.

ಭಾರತ ರತ್ನ ಗೌರವಾನ್ವಿತ ಎಲ್‌.ಕೆ. ಅಡ್ವಾಣಿ ಅವರಿಗೆ ಜನ್ಮದಿನದ ಶುಭಾಶಯಗಳು. ಅಡ್ವಾಣಿ ಅವರು ಸಾರ್ವಜನಿಕ ಸೇವೆ ಮತ್ತು ಸಂಘಟನಾ ಕೌಶಲ್ಯದ ವಿಶಿಷ್ಟ ಉದಾಹರಣೆ ನೀಡುವ ಮೂಲಕ ಬಿಜೆಪಿಯನ್ನು ಸಾರ್ವಜನಿಕ ಕಲ್ಯಾಣದ ಸಂಕೇತವಾಗಿ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಅವರ ನಾಯಕತ್ವದಲ್ಲಿ ಬಿಜೆಪಿಯ ಸಂಘಟನೆ ಬಲಿಷ್ಠವಾಯಿತು ಎಂದು ಗೃಹ ಸಚಿವ ಅಮಿತ್ ಶಾ ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿದ್ದಾರೆ.

ಭಾರತೀಯ ರಾಜಕೀಯದ ಆಧಾರ ಸ್ತಂಭ ಮತ್ತು ನಮ್ಮೆಲ್ಲರಿಗೂ ಸ್ಫೂರ್ತಿಯ ಮೂಲವಾಗಿರುವ ಎಲ್.ಕೆ.ಅಡ್ವಾಣಿ ಅವರಿಗೆ ಜನ್ಮದಿನದ ಶುಭಾಶಯಗಳು. ಸಾರ್ವಜನಿಕ ಜೀವನದಲ್ಲಿ ಅವರು ಅನೇಕ ಜವಾಬ್ದಾರಿಗಳನ್ನು ನಿರ್ವಹಿಸುವ ಮೂಲಕ ದೇಶದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆಯನ್ನು ನೀಡಿದ್ದಾರೆ. ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್ ಪೋಸ್ಟ್ ಮಾಡಿದ್ದಾರೆ.

ಅಡ್ವಾಣಿ ಅವರ ಜನ್ಮದಿನದ ಪ್ರಯುಕ್ತ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೇರಿದಂತೆ ಅನೇಕರು ಸಾಮಾಜಿಕ ಮಾಧ್ಯಮಗಳಲ್ಲಿ ಶುಭಾಶಯ ಕೋರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸತ್ಯ ಹರಿಶ್ಚಂದ್ರರ ತುಂಡುಗಳ ಬಣ್ಣವೆಲ್ಲಾ ಬಯಲಾಗ್ತಿದೆ: ಬಿ ಶ್ರೀರಾಮುಲು

ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಕೈ ಹೈಕಮಾಂಡ್‌ ಶಾಕ್‌: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟವರಿಗೂ ನಿರಾಸೆ

ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಬಿಗ್‌ ರಿಲೀಫ್‌: ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್‌ ಹೇಳಿದ್ದೇನು ಗೊತ್ತಾ

Mallikarjun Kharge: ಕಾಲ್ತುಳಿತ ಆಕಸ್ಮಿಕವಾಗಿ ನಡೆದಿದ್ದು ನಮ್ಮವ್ರು ಕ್ಷಮೇನೂ ಕೇಳವ್ರೆ: ಮಲ

Karnataka caste census: 165 ಕೋಟಿ ರೂ. ಖರ್ಚು ಮಾಡಿದ್ದಕ್ಕೆ ಯಾರು ಹೊಣೆ: ವಿ.ಸುನೀಲ್ ಕುಮಾರ್

ಮುಂದಿನ ಸುದ್ದಿ
Show comments