Select Your Language

Notifications

webdunia
webdunia
webdunia
webdunia

ಸ್ವಾತಂತ್ರ್ಯ ಯೋಧರ ಕಾರ್ಯಕ್ರಮಕ್ಕೆ ಬಿಜೆಪಿ ಬಹಿಷ್ಕಾರ!

ಸ್ವಾತಂತ್ರ್ಯ ಯೋಧರ ಕಾರ್ಯಕ್ರಮಕ್ಕೆ ಬಿಜೆಪಿ ಬಹಿಷ್ಕಾರ!
Patna , ಮಂಗಳವಾರ, 18 ಏಪ್ರಿಲ್ 2017 (05:13 IST)
ಪಾಟ್ನಾ: ಸಾಮಾನ್ಯವಾಗಿ ದೇಶಭಕ್ತಿಗೆ ಸಂಬಂಧಿಸಿದಂತೆ ಕಾರ್ಯಕ್ರಮಗಳಿಗೆ ತಾವು ಸದಾ ಮುಂದು ಎನ್ನುವ ಬಿಜೆಪಿ ಬಿಹಾರದಲ್ಲಿ ನಡೆದ ಸ್ವಾತಂತ್ರ್ಯ ಯೋಧರ ಕಾರ್ಯಕ್ರಮಕ್ಕೆ ಮಾತ್ರ ಬಹಿಷ್ಕಾರ ಹಾಕುವ ಮೂಲಕ ಅಚ್ಚರಿ ಮೂಡಿಸಿದೆ.

 
ಅದಕ್ಕೆ ಕಾರಣ ಏನೆಂಬುದು ಇನ್ನಷ್ಟು ಇಂಟರೆಸ್ಟಿಂಗ್ ಆಗಿದೆ. ಈ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಮುಖ್ಯ ಅತಿಥಿಯಾಗಿದ್ದರು. ಆದರೆ ಬಿಜೆಪಿ ನಾಯಕರು ಮಾತ್ರ ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಒಲ್ಲೆನೆಂದಿದ್ದರು.

ಅದಕ್ಕೆ ಕಾರಣ, ಲಾಲೂ ಪ್ರಸಾದ್ ಯಾದವ್ ಮತ್ತು ರಾಹುಲ್ ಗಾಂಧಿ! ಭ್ರಷ್ಟಾಚಾರ ಪ್ರಕರಣದಲ್ಲಿ ಸಿಲುಕಿದ್ದ ಲಾಲೂ ಮತ್ತು ನ್ಯಾಷನಲ್ ಹೆರಾಲ್ಡ್ ಕೇಸ್ ನಲ್ಲಿ ಆರೋಪಿಯಾಗಿರುವ ರಾಹುಲ್ ಗಾಂಧಿ ಇದೇ ವೇದಿಕೆಯಲ್ಲಿ ಉಪಸ್ಥಿತರಿರುವುದು ಬಿಜೆಪಿ ನಾಯಕರ ಆಕ್ರೋಶಕ್ಕೆ ಕಾರಣ. ಆದರೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಮಾತ್ರ ಬಿಜೆಪಿ ನಾಯಕರ ನಡೆಯನ್ನು ಟೀಕಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

Share this Story:

Follow Webdunia kannada

ಮುಂದಿನ ಸುದ್ದಿ

ಬಲೂಚಿಸ್ತಾನ್ ಜನತೆ ಯಾವತ್ತೂ ಭಾರತದ ಗುಲಾಮರಾಗುವುದಿಲ್ಲ: ಬಲೂಚಿಸ್ತಾನ್ ಸಿಎಂ