ಬಿಜೆಪಿ ಅಭ್ಯರ್ಥಿಗೆ ಚಪ್ಪಲಿಹಾರ ಹಾಕಿ ಆಕ್ರೋಶ ವ್ಯಕ್ತಪಡಿಸಿದ ಮತದಾರರು

Webdunia
ಸೋಮವಾರ, 8 ಜನವರಿ 2018 (16:02 IST)
ಸ್ಥಳೀಯ ಸಂಸ್ಥೆ ಚುನಾವಣೆಗೆ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿಯೊಬ್ಬನಿಗೆ ಮತದಾರರು ಚಪ್ಪಲಿಯ ಹಾರ ಹಾಕಿದ ಘಟನೆ ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನಿಂದ 272 ಕಿ.ಮೀ ದೂರದಲ್ಲಿರುವ ಧಾರ್ ಜಿಲ್ಲೆಯ ದಾಮ್ನೋಡ್ ಪಟ್ಟಣದಲ್ಲಿ ನಡೆದಿದೆ. 
ಬಿಜೆಪಿ ಅಭ್ಯರ್ಥಿ ದಿನೇಶ್ ಶರ್ಮಾ ಚುನಾವಣೆ ನಿಮಿತ್ಯ ಮನೆ ಮನೆಗೆ ಪ್ರಚಾರಕ್ಕೆ ತೆರಳಿದ್ದ ಸಂದರ್ಭದಲ್ಲಿ ಆಕ್ರೋಶಗೊಂಡಿದ್ದ ಮತದಾರರು ಅವರಿಗೆ ಚಪ್ಪಲಿ ಹಾರ ತೋಡಿಸಿ ಸನ್ಮಾನಿಸಿದ್ದಾರೆ. 
 
ಮತದಾರರಿಗೆ ನನ್ನಿಂದ ಅಸಮಾಧಾನವಾಗಿರಬಹುದು. ಆದ್ದರಿಂದ ಇಂತಹ ವರ್ತನೆ ತೋರಿದ್ದಾರೆ. ನಾವು ಒಂದು ಕಡೆ ಕುಳಿತು ಚರ್ಚೆ ನಡೆಸುತ್ತೇವೆ. ನಾನು ಅವರಿಗೆ ಮಗನಿದ್ದಂತೆ ಎಂದು ಶರ್ಮಾ ತಿಳಿಸಿದ್ದಾರೆ.
 
ಬಿಜೆಪಿ ಅಭ್ಯರ್ಥಿ ದಿನೇಶ್ ಶರ್ಮಾಗೆ ಆರಂಭದಲ್ಲಿ ಆಘಾತವಾದರೂ ನಂತರ ಚಪ್ಪಲಿ ಹಾರ ಹಾಕಿಕೊಂಡರು. ಪ್ರದೇಶದಲ್ಲಿ ನೀರಿನ ಸಮಸ್ಯೆಯನ್ನು ನಿವಾರಿಸದಿರುವುದಕ್ಕೆ ಬೆಳಕು ಚೆಲ್ಲಲು ಚಪ್ಪಲಿ ಹಾರ ಹಾಕಿದ್ದಾಗಿ ನತದಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ನೀರಿನ ಸಮಸ್ಯೆ ಕುರಿತು ದೂರು ನೀಡಲು ನಾವು ಬಿಜೆಪಿ ಅಭ್ಯರ್ಥಿಯ ಬಳಿಗೆ ತೆರಳಿದ್ದಾಗ, ಅವರು, ನಮ್ಮ ವಿರುದ್ಧವೇ ಪೊಲೀಸರಿಗೆ ದೂರು ನೀಡಿದ್ದರು. ಹಲವಾರು ಬಾರಿ ನಮ್ಮನ್ನು ಪೊಲೀಸ್ ಠಾಣೆಗೆ ಕರೆಸಿ ಕಿರುಕುಳ ನೀಡಲಾಯಿತು. ಆದ್ದರಿಂದ ನಾವು ಹೀಗೆ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲು ಮರದ ತಿಮ್ಮಕ್ಕನ ಹೆಸರಿನಲ್ಲಿ ಹೊಸ ಘೋಷಣೆ ಮಾಡಿದ ಸಿಎಂ ಸಿದ್ದರಾಮಯ್ಯ

Viral video: ಗರ್ಭಿಣಿ ಮಹಿಳೆ ಮೇಲೆ ಮಾನವೀಯತೆ ಮರೆತು ಸ್ಕೂಟಿ ಹತ್ತಿಸಿದ ಪೊಲೀಸ್

ಶೂದ್ರರು ತಮ್ಮ ವಿರೋಧಿಯಾಗಿರುವ ಆರ್ ಎಸ್ಎಸ್ ಸೇರುತ್ತಾರಲ್ಲಾ ಏನು ಹೇಳೋದು: ಸಿದ್ದರಾಮಯ್ಯ

ಇಂದಿರಾ ಗಾಂಧಿ ದೇಶದ ಪ್ರೇಮದ, ಧೈರ್ಯದ ಪ್ರತೀಕ: ಡಿಕೆ ಶಿವಕುಮಾರ್

ಪಿಎಂ ಕಿಸಾನ್ ಸಮ್ಮಾನ್ ಯೋಜನೆ 21 ನೇ ಕಂತು ಬಿಡುಗಡೆ: ಇಂದೇ ಖಾತೆ ಚೆಕ್ ಮಾಡಿ

ಮುಂದಿನ ಸುದ್ದಿ
Show comments