ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಇಂದು ಬಿಡುಗಡೆ

Krishnaveni K
ಬುಧವಾರ, 13 ಮಾರ್ಚ್ 2024 (10:26 IST)
ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಹೆಚ್ಚು ಕಡಿಮೆ ಫೈನಲ್ ಆಗಿದ್ದು ಇಂದು ಅಥವಾ ನಾಳೆ ಬಿಡುಗಡೆಯಾಗುವ ಸಾಧ‍್ಯತೆಯಿದೆ.

ರಾಜ್ಯ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಹುತೇಕ ಫೈನಲ್ ಆಗಿದೆ. ಈ ಪೈಕಿ ಐವರು ಹೊಸಬರಿಗೆ ಮಣೆ ಹಾಕುವ ಸಾಧ‍್ಯತೆಯಿದೆ. ಈ ಪಟ್ಟಿಯಲ್ಲಿ ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ಹೆಸರೂ ಸೇರಿಕೊಂಡಿದೆ ಎನ್ನಲಾಗಿದೆ. ಜೊತೆಗೆ ಕೆಲವು ಘಟಾನುಘಟಿಗಳಿಗೇ ಕೊಕ್ ನೀಡಲಾಗಿದೆ ಎಂಬ ವರದಿಗಳಿವೆ. ಆ ಎಲ್ಲಾ ಕುತೂಹಲಗಳಿಗೆ ಇಂದು ಅಥವಾ ನಾಳೆ ಉತ್ತರ ಸಿಗಲಿದೆ.

ಮೈಸೂರು ಟಿಕೆಟ್ ಯಾರಿಗೆ ಎಂಬ ಕುತೂಹಲ ಜನರಿಗಿದೆ. ಟಿಕೆಟ್ ಕೈ ತಪ್ಪುವ ಭೀತಿ ಬೆನ್ನಲ್ಲೇ ಪ್ರತಾಪ್ ಸಿಂಹ ರಾಜ್ಯ ಉಸ್ತುವಾರಿಗಳನ್ನು ದೆಹಲಿಯಲ್ಲಿ ಭೇಟಿ ಮಾಡಿ ಬಂದಿದ್ದಾರೆ. ಹೀಗಾಗಿ ಮೈಸೂರು ಕೈ ತಪ್ಪಿದರೂ ಬೇರೆ ಕ‍್ಷೇತ್ರದಿಂದ ಪ್ರತಾಪ್ ಸಿಂಹಗೆ ಅವಕಾಶ ಸಿಗಬಹುದಾ ಎಂದು ಕಾದು ನೋಡಬೇಕಿದೆ.

 ಈ ನಡುವೆ ಮಾಜಿ ಶಾಸಕ ಸಿಟಿ ರವಿ ಕೂಡಾ ದೆಹಲಿಗೆ ತೆರಳಿದ್ದರು. ಹಿಗಾಗಿ ಈ ಬಾರಿ ಶೋಭಾ ಕರಂದ್ಲಾಜೆ ಬದಲಿಗೆ ಉಡುಪಿ-ಚಿಕ್ಕಮಗಳೂರು ಟಿಕೆಟ್ ಅವರಿಗೆ ಸಿಗಲಿದೆಯೇ ಎಂಬ ಕುತೂಹಲವಿದೆ. ಟಿಕೆಟ್ ಹಂಚಿಕೆ ಬಗ್ಗೆ ಮಾತನಾಡಿರುವ ಬಿಎಸ್ ಯಡಿಯೂರಪ್ಪ ಪ್ರತಿಯೊಬ್ಬರ ಕುತೂಹಲಕ್ಕೂ ಇಂದು ಉತ್ತರ ಸಿಗಲಿದೆ. ಕೆಲವು ಅಚ್ಚರಿಯ ಅಭ್ಯರ್ಥಿಗಳನ್ನೇ ವರಿಷ್ಠರು ಆಯ್ಕೆ ಮಾಡಿದ್ದಾರೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಚಿವ ಸ್ಥಾನ ಸಿಗುತ್ತಿದೆ ಎಂದು ನಿರೀಕ್ಷೆಯಲ್ಲಿರುವವರಿಗೆ ಶಾಕ್ ಕೊಟ್ಟ ಕಾಂಗ್ರೆಸ್ ಹೈಕಮಾಂಡ್

ನನಗೆ ನಾನೇ ಹೈಕಮಾಂಡ್‌ , ನನಗೆ ಯಾವುದೇ ಪಕ್ಷವಿಲ್ಲ: ಯುಟಿ ಖಾದರ್‌

ತಿರುಚೆಂಗೋಡು ರಥೋತ್ಸವದಲ್ಲಿ ದೇವರ ತೇರಿಗೆ ಸಿಕ್ಕು ಪ್ರಾಣ ಕಳೆದುಕೊಂಡ ವ್ಯಕ್ತಿ: ಭೀಕರ ವಿಡಿಯೋ ಇಲ್ಲಿದೆ Video

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments