ನೇಪಾಳದಂತೆ ಜೆನ್ ಜಿ ದಂಗೆಯೇಳಲು ಪ್ರೇರೇಪಿಸುತ್ತಿರುವ ರಾಹುಲ್ ಗಾಂಧಿ ಉದ್ದೇಶವೇನು

Krishnaveni K
ಶನಿವಾರ, 20 ಸೆಪ್ಟಂಬರ್ 2025 (10:43 IST)
ನವದೆಹಲಿ: ಮತಗಳ್ಳತನದ ವಿರುದ್ಧ ಸರಣಿ ಆರೋಪ ಮಾಡುತ್ತಿರುವ ರಾಹುಲ್ ಗಾಂಧಿ ನೇಪಾಳದಂತೆ ಇಲ್ಲಿಯೂ ಜೆನ್ ಜಿ ವರ್ಗ ದಂಗೆಯೇಳಲು ಪರೋಕ್ಷವಾಗಿ ಪ್ರೇರೇಪಿಸುತ್ತಿದ್ದಾರೆ ಎಂದು ಬಿಜೆಪಿ ಕಿಡಿ ಕಾರಿದೆ. ರಾಹುಲ್ ಮೂಲ ಉದ್ದೇಶವೇನು ಎಂದು ಪ್ರಶ್ನೆ ಮಾಡಿದೆ.

ನೇಪಾಳದಲ್ಲಿ ಸೋಷಿಯಲ್ ಮೀಡಿಯಾಗಳಿಗೆ ನಿಷೇಧ ಹೇರಿದ್ದ ಸರ್ಕಾರದ ವಿರುದ್ಧ ಜೆನ್ ಜಿ ಕ್ರಾಂತಿ ನಡೆದು ಅರಾಜಕತೆ ಸೃಷ್ಟಿಯಾಗಿತ್ತು. ಪ್ರಧಾನಿ, ಅಧ್ಯಕ್ಷರು ರಾಜೀನಾಮೆ ನೀಡಬೇಕಾಗಿ ಬಂದಿತ್ತು. ಹಿಂಸಾಚಾರ ಭುಗಿಲೆದ್ದು ಕೈಗೆ ಪ್ರಧಾನಿ ನಿವಾಸವನ್ನೇ ಧ್ವಂಸ ಮಾಡಿದ್ದರು. ಕೈ ಗೆ ಸಿಕ್ಕವರ ಮೇಲೆ ಹಲ್ಲೆ, ಕೊಲೆ ನಡೆದಿತ್ತು.

ಇದೀಗ ಮತಗಳ್ಳತನದ ವಿರುದ್ಧ ಸರಣಿ ಆರೋಪ ಮಾಡುತ್ತಿರುವ ರಾಹುಲ್ ಗಾಂಧಿ ಜೆನ್ ಜಿ ಇದರ ವಿರುದ್ಧ ಹೋರಾಡಬೇಕು. ನಿಮ್ಮ ಜೊತೆಗೆ ನಾನು ಯಾವತ್ತೂ ಇರುತ್ತೇನೆ ಎನ್ನುವ ಮೂಲಕ ಪರೋಕ್ಷವಾಗಿ ನೇಪಾಳದಂತೆ ಇಲ್ಲಿಯೂ ದಂಗೆಯೇಳಲು ಪ್ರೇರೇಪಿಸಿದ್ದಾರೆ ಎಂದು ಬಿಜೆಪಿ ಕಿಡಿ ಕಾರಿದೆ.

ಇದರ ವಿರುದ್ಧ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ಹೇಗಾದರೂ ಮಾಡಿ ದೇಶದಲ್ಲಿ ಅರಾಜಕತೆ ಸೃಷ್ಟಿಸುವುದು ಮತ್ತು ಅಧಿಕಾರ ಪಡೆಯುವುದೇ ರಾಹುಲ್ ಗಾಂಧಿ ಉದ್ದೇಶವೆಂಬಂತೆ ಕಾಣುತ್ತಿದೆ. ಆದರೆ ರಾಹುಲ್ ಪ್ರಚೋದನೆಯನ್ನು ಜೆನ್ ಜಿ ಕಿವಿಗೆ ಹಾಕಿಕೊಳ್ಳಲ್ಲ. ಯಾಕೆಂದರೆ ವಂಶ ಆಡಳಿತ ಹೊಂದಿರುವ ಕಾಂಗ್ರೆಸ್ ನ ನಿಜ ಬಣ್ಣವೇನೆಂದು ಈಗಿನ ಯುವ ಜನಾಂಗದವರಿಗೆ ಗೊತ್ತಿದೆ ಎಂದು ಬಿಜೆಪಿ ನಾಯಕರು ಸೋಷಿಯಲ್ ಮೀಡಿಯಾದಲ್ಲಿ ಕಿಡಿ ಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟೀಚರ್ ಎನ್ನಲೂ ನಾಲಾಯಕ್, ಚಿತ್ರದುರ್ಗದ ಸಂಸ್ಕೃತ ಶಿಕ್ಷಕ ಬಾಲಕನಿಗೆ ಕಾಲಿನಿಂದ ಒದ್ದ ವಿಡಿಯೋ

ಜಪಾನ್‌ನಲ್ಲಿ ಹೊಸ ಇತಿಹಾಸ ಬರೆದ ಸನೇ ಟಕೈಚಿ, ಮೋದಿಯಿಂದ ಅಭಿನಂದನೆ

ಕಾಂಗ್ರೆಸ್ ಸರ್ಕಾರದ ನಡೆಯಿಂದ ಇರುವ ಕಂಪೆನಿಗಳನ್ನು ಉಳಿಸಿಕೊಳ್ಳುವುದೇ ದೊಡ್ಡ ವಿಷಯ: ಸುಧಾಕರ್ ಕಿಡಿ

ಬಿಜೆಪಿ ಹೈಕಮಾಂಡಿಗೆ ₹1800 ಕೋಟಿ ಕಪ್ಪ ನೀಡಿದ್ದನ್ನಾ ಮರೆತ್ರಾ: ಕೆದಿಕಿದ ರಾಘವೇಂದ್ರಗೆ ಪ್ರಿಯಾಂಕ್ ಖರ್ಗೆ ಕೌಂಟರ್

ಮೋದಿಗೆ ರಾಜ್ಯದ ಮೇಲೆ ಸಿಟ್ಟು, ಅಮವಾಸ್ಯೆ ತೇಜಸ್ವಿಯೂ ಕೇಂದ್ರದಿಂದ ಹಣ ತರಲ್ಲ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments