Webdunia - Bharat's app for daily news and videos

Install App

ಬುರ್ಹಾನ್ ವಾನಿ ಕೊಂದವರಿಗೆ ಅಶೋಕ ಚಕ್ರ ನೀಡಿ: ಬಿಜೆಪಿ

Webdunia
ಸೋಮವಾರ, 1 ಆಗಸ್ಟ್ 2016 (16:05 IST)
ಹಿಜ್ಬುಲ್ ಮುಜಾಹಿದ್ದೀನ್ ಕಮಾಂಡರ್ ಬುರ್ಹಾನ್ ವಾನಿಯನ್ನು ಕೊಂದ ಸೈನಿಕರಿಗೆ ಅಶೋಕ ಚಕ್ರ ನೀಡಬೇಕಾಗಿ ಜಮ್ಮು ಮತ್ತು ಕಾಶ್ಮೀರ ಬಿಜೆಪಿ ಇಂದು ಒತ್ತಾಯಿಸಿದೆ.

ಭಯೋತ್ಪಾದಕ ವಾನಿಯನ್ನುಹತ್ಯೆಗೈದ ಭದ್ರತಾ ಸಿಬ್ಬಂದಿಗೆ ಸನ್ಮಾನಿಸಬೇಕು. ಅವರಿಗೆ ಅಶೋಕ ಚಕ್ರ ನೀಡಿ ಗೌರವಿಸಬೇಕು ಎಂದು ರಾಜ್ಯ ಬಿಜೆಪಿ ಮಾಜಿ ಅಧ್ಯಕ್ಷ ಮತ್ತು ವಿಧಾನ ಪರಿಷತ್ ಸದಸ್ಯ ಅಶೋಕ್ ಖಜುರಿಯಾ ಹೇಳಿದ್ದಾರೆ.

ಜುಲೈ 9 ರಂದು ಉಗ್ರ ಬುರ್ಹಾನ್ ವಾನಿಯನ್ನು ಎನ್ ಕೌಂಟರ್‌ನಲ್ಲಿ ಭದ್ರತಾ ಸಿಬ್ಬಂದಿ ಕೊಂದು ಹಾಕಿದ್ದರು. ಆ ಬಳಿಕ ಕಾಶ್ಮೀರ ಅಕ್ಷರಶಃ ಹೊತ್ತಿ ಉರಿದಿತ್ತು. ಪ್ರತಿಭಟನಾಕಾರರು ಮತ್ತು ಭದ್ರತಾ ಸಿಬ್ಬಂದಿ ನಡುವೆ ನಡೆದ ಸಂಘರ್ಷದಲ್ಲಿ 49 ಜನರು , ಇಬ್ಬರು ಪೊಲೀಸ್ ಸಿಬ್ಬಂದಿ ಸಾವನ್ನಪ್ಪಿದ್ದರೆ ಬರೊಬ್ಬರಿ 5,500 ಜನರು ಗಾಯಗೊಂಡಿದ್ದರು.

ಏತನ್ಮಧ್ಯೆ ಬುರ್ಹಾನ್‌ವಾನಿ ಮತ್ತು ಜಮಾತ್-ಉದ್-ದಾವಾ (ಜೆಯುಡಿ)ದ ಮುಖ್ಯಸ್ಥ ಹಫೀಜ್ ಸಯೀದ್ ಸಂಪರ್ಕದಲ್ಲಿದ್ದರು ಎಂದು ತಿಳಿದು ಬಂದಿದೆ. ಸ್ವತಃ ಸಯೀದ್ ಇದನ್ನು ಖಚಿತಪಡಿಸಿದ್ದಾನೆ.

ಕೆಲವು ದಿನಗಳ ಹಿಂದೆ ಬುರ್ಹಾನ್‌ವಾನಿ ನನಗೆ ಫೋನ್ ಮಾಡಿ, ನಿಮ್ಮೊಂದಿಗೆ ಮಾತನಾಡುವುದು ನನ್ನ ಕೊನೆಯ ಆಸೆ ಈಡೇರಿದೆ. ಹುತಾತ್ಮನಾಗಲು ಸಿದ್ಧನಾಗಿದ್ದೇನೆ’ ಎಂದು ಹೇಳಿದ್ದ ಎಂದೂ ಹಫೀಜ್ ಹೇಳಿದ್ದಾನೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ: ವರಸೆ ಬದಲಾಯಿಸಿದ ಮಾಸ್ಕ್‌ಮ್ಯಾನ್‌, ಬೇರೆಡೆ ಹೊರಟ ಎಸ್‌ಐಟಿ ತಂಡ

ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಸ್ಥಿತಿ ನಿಜಕ್ಕೂ ಶಾಕಿಂಗ್

ಒಳ ಮೀಸಲಾತಿಯಲ್ಲಿ ಮೋಸ, ವಂಚನೆ ಸಹಿಸುವುದಿಲ್ಲ: ಛಲವಾದಿ ನಾರಾಯಣಸ್ವಾಮಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಹಬ್ಬಕ್ಕೂ ಬರದ ಗೃಹಲಕ್ಷ್ಮಿ ಹಣ: ಸರ್ಕಾರ ರೊಕ್ಕ ಕೊಡೋದು ಯಾವಾಗ್ಲೋ ಅಂತಿದ್ದಾರೆ ಮಹಿಳೆಯರು

ಮುಂದಿನ ಸುದ್ದಿ
Show comments