Webdunia - Bharat's app for daily news and videos

Install App

ವಕ್ಫ್ ಬೋರ್ಡ್ ಪರ ಕೋಟ್ಯಾಂತರ ಮತ: ಬಿಜೆಪಿಗೆ ಪಾಕಿಸ್ತಾನದ ಮೇಲೆ ಸಂಶಯ

Krishnaveni K
ಗುರುವಾರ, 26 ಸೆಪ್ಟಂಬರ್ 2024 (10:14 IST)
ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತರಲುದ್ದೇಶಿಸಿರುವ ವಕ್ಫ್ ಬೋರ್ಡ್ ಪರ-ವಿರೋಧ ಚರ್ಚೆಗೆ ಸಾರ್ವಜನಿಕರಿಗೂ ಆಹ್ವಾನ ನೀಡಲಾಗಿತ್ತು. ಆದರೆ ವಕ್ಫ್ ಬೋರ್ಡ್ ಗೆ ತಿದ್ದುಪಡಿ ಬೇಡ ಎಂದು ಕೋಟ್ಯಾಂತರ ಮತ ಬಂದಿದ್ದು ಈಗ ಬಿಜೆಪಿಗೆ ಪಾಕಿಸ್ತಾನದ ಮೇಲೆ ಸಂಶಯ ಶುರುವಾಗಿದೆ.

ವಕ್ಫ್ ಬೋರ್ಡ್ ತಿದ್ದುಪಡಿ ಬೇಕೋ ಬೇಡವೋ ಎಂಬ ಬಗ್ಗೆ ಚರ್ಚೆಗೆ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಲು ಕೇಂದ್ರ ಸರ್ಕಾರ ಮುಂದಾಗಿತ್ತು. ಇದರಲ್ಲಿ ವಕ್ಫ್ ಬೋರ್ಡ್ ಪರ ಸುಮಾರು. 1.25 ಕೋಟಿ ಪ್ರತಿಕ್ರಿಯೆ ಬಂದಿದೆ. ಇದರ ಬಗ್ಗೆ ಬಿಜೆಪಿ ಸಂಶಯ ವ್ಯಕ್ತಪಡಿಸಿದೆ.

ಇದರ ಹಿಂದೆ ಸಾಂಪ್ರದಾಯಿಕ ಎದುರಾಳಿ ರಾಷ್ಟ್ರ ಪಾಕಿಸ್ತಾನ ಅಥವಾ ಚೀನಾ ಇಲ್ಲವೇ ಸದಾ ಭಾರತದ ವಿರುದ್ಧ ಕೆಂಡ ಕಾರುವ ಝಾಕಿರ್ ನಾಯಕ್ ನಂತಹ ನಾಯಕರ ಕೈವಾಡವಿರಬಹುದೇ ಎಂಬ ಸಂಶಯ ಮೂಡಿದೆ. ಈ ಹಿನ್ನಲೆಯಲ್ಲಿ ಸೂಕ್ತ ತನಿಖೆಯಾಗಬೇಕು ಎಂದು ಬಿಜೆಪಿ ಆಗ್ರಹಿಸಿದೆ.

ಈ ಮಟ್ಟದ ಪ್ರತಿಕ್ರಿಯೆ ಬಂದಿರುವುದು ಜಾಗತಿಕವಾಗಿ ದಾಖಲೆಯೇ. ಭಾರತದೊಳಗಿನಿಂದ ಮಾತ್ರ ಇಷ್ಟೊಂದು ಪ್ರಮಾಣದಲ್ಲಿ ಪ್ರತಿಕ್ರಿಯೆ ಬರುವುದು ಅಸಾಧ್ಯ ಎನ್ನುವುದು ಬಿಜೆಪಿ ನಾಯಕರ ಅಭಿಮತವಾಗಿದೆ. ಆದರೆ ಇದನ್ನು ಟೀಕಿಸಿರುವ ಕಾಂಗ್ರೆಸ್, ಬಿಜೆಪಿಗರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆಯಿಲ್ಲ. ಇಷ್ಟು ಜನಸಂಖ್ಯೆಯಿರುವ ರಾಷ್ಟ್ರದಲ್ಲಿ ಕೇವಲ 1.5 ಪ್ರತಿಶತ ಜನ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರೂ ಸಂಶಯಿಸುತ್ತಿದೆ ಎಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments