Webdunia - Bharat's app for daily news and videos

Install App

ಬಿಜೆಪಿ ನಿಮ್ಮನ್ನು ನಿರುದ್ಯೋಗಿಗಳನ್ನಾಗಿ ಮಾಡಿದೆ : ಪ್ರಿಯಾಂಕಾ

Webdunia
ಶುಕ್ರವಾರ, 25 ಫೆಬ್ರವರಿ 2022 (14:45 IST)
ಲಕ್ನೋ : ಬಿಜೆಪಿ ಉದ್ದೇಶಪೂರ್ವಕವಾಗಿ ಜನರನ್ನು ಬಡವರನ್ನಾಗಿ ಮತ್ತು ಉಚಿತ ಪಡಿತರ ಮೇಲೆ ಅವಲಂಬಿತರನ್ನಾಗಿ ಮಾಡಿದೆ.

ಆದರೆ ಅಭಿವೃದ್ಧಿ ಮತ್ತು ನಿರುದ್ಯೋಗದ ಬಗ್ಗೆ ಯಾರು ಮಾತನಾಡಿಲ್ಲ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಆರೋಪಿಸಿದ್ದಾರೆ.

ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ನಡೆದ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ತಮ್ಮ ಮಕ್ಕಳ ಭವಿಷ್ಯಕ್ಕಾಗಿ ಹಗಲಿರುಳು ಶ್ರಮಿಸುವ ಸರ್ಕಾರವನ್ನು ಆರಿಸಬೇಕೆಂದು ಜನರನ್ನು ಒತ್ತಾಯಿಸಿದ್ದಾರೆ. ಬಿಜೆಪಿಯವರು ಪಡಿತರ ಮೂಟೆ ಕೊಟ್ಟಿದ್ದಾರೆ ಎಂದು ಕೆಲವರು ಹೇಳುತ್ತಾರೆ.

ಬಿಜೆಪಿಯವರು ಬ್ಯಾಂಕ್ ಖಾತೆಗಳನ್ನು ತೆರೆದು ಸ್ವಲ್ಪ ಹಣವನ್ನು ಕಳುಹಿಸಿದ್ದಾರೆ. ಐದು ವರ್ಷಗಳಲ್ಲಿ ಬಿಜೆಪಿ ಎಷ್ಟೋ ಕೆಲಸಗಳನ್ನು ಮಾಡಿದೆ ಎನ್ನುತ್ತಾರೆ. ಆದರೆ ಬಿಜೆಪಿ ಸಾರ್ವಜನಿಕರನ್ನು ಪಡಿತರ ಮೇಲೆ ಅವಲಂಬಿತರಾಗುವಂತೆ ಮಾಡಿದೆ. ಉದ್ದೇಶಪೂರ್ವಕವಾಗಿ ಜನರನ್ನು ಬಡವರನ್ನಾಗಿ ಮಾಡಿದೆ.

ನಿಮಗೆ ಕೆಲಸ ಸಿಗುತ್ತಿಲ್ಲ ಎಂಬುವುದಕ್ಕೆ ಉದ್ಯೋಗವಿಲ್ಲ ಎಂದರ್ಥವಲ್ಲ. ನಿಮಗೆ ಕೆಲಸ ಸಿಗದೇ ನಿರುದ್ಯೋಗಿಯಾಗಿ ಉಳಿದುಕೊಂಡರೆ, ನೀವಿನ್ನು ಚಿಕ್ಕವರಾಗಿರುವುದರಿಂದ ನಿಮಗೆ ಶಕ್ತಿಯಿದೆ. ನೀವು ಬೇಗ ಕೋಪಗೊಳ್ಳುತ್ತೀರಾ, ನೀವು ಆತ್ಮವಿಶ್ವಾಸವನ್ನು ಕಳೆದುಕೊಳ್ಳುತ್ತೀರಾ, ಆಗ ಅವರು ನಿಮ್ಮನ್ನು ಕೆಣಕಲು ಸುಲಭವಾಗುತ್ತದೆ ಎಂದು ತಿಳಿದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿಗೆ ಸೂಚಿಸಿದ ದೆಹಲಿ ನಾಯಕ ಯಾರು: ತೇಜಸ್ವಿ ಸೂರ್ಯ

ಧರ್ಮಸ್ಥಳ ವಿವಾದಕ್ಕೆ ಬಿಜೆಪಿ, ಆರ್ ಎಸ್ಎಸ್ ಕಾರಣ ಎಂದ ಬಿಕೆ ಹರಿಪ್ರಸಾದ್

ಕನ್ನಡವನ್ನು ಭುವನೇಶ್ವರಿ ಮಾಡಿ ದೌರ್ಜನ್ಯ ಮಾಡಿದ್ರಿ ಎಂದಿದ್ದ ಬಾನು ಮುಷ್ತಾಕ್

ಆರ್ ಎಸ್ಎಸ್ ಗೀತೆ ಹಾಡಿದ್ದಕ್ಕೆ ಡಿಕೆ ಶಿವಕುಮಾರ್ ಕ್ಷಮೆ ಕೇಳಬೇಕು: ಬಿಕೆ ಹರಿಪ್ರಸಾದ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments