Webdunia - Bharat's app for daily news and videos

Install App

ದೇಶದ ಏಕತೆಗೆ ಬಿಜೆಪಿ ಧಕ್ಕೆ: ರಾಹುಲ್ ಗಾಂಧಿ ಅಪಹಾಸ್ಯ

Webdunia
ಗುರುವಾರ, 2 ನವೆಂಬರ್ 2023 (14:25 IST)
ಮುಜಾಫರ್ ನಗರವಾಸಿಗಳ ಭಾವನೆಗಳಲ್ಲಿ ನನ್ನ ಅಂತರಂಗವಿತ್ತು. ಆದ್ದರಿಂದಲೇ ಬಿಜೆಪಿ ಪಕ್ಷದ ನೀತಿಗಳನ್ನು ವಿರೋಧಿಸುತ್ತೇನೆ. ಇದೀಗ ಮುಜಾಫರ್ ನಗರಕ್ಕೆ ಬೆಂಕಿ ಹಚ್ಚಿದ್ದಾರೆ. ಗುಜರಾತ್, ಉತ್ತರಪ್ರದೇಶ ಮತ್ತು ಕಾಶ್ಮೀರ ರಾಜ್ಯಗಳು ಸೇರಿದಂತೆ ದೇಶದ ಎಲ್ಲಾ ರಾಜ್ಯಗಳಲ್ಲಿ ಇದೇ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ನಾವು ಮತ್ತು ನೀವು ಇದರ ಪ್ರಭಾವವನ್ನು ಎದುರಿಸಬೇಕಾಗುತ್ತದೆ. ಇದರಿಂದಾಗಿ ದೇಶದ ಏಕತೆಗೆ ಧಕ್ಕೆಯಾಗುತ್ತದೆ ಎಂದು ವಿಷಾದ ವ್ಯಕ್ತಪಡಿಸಿದರು.
 
ಬಿಜೆಪಿ ಪಕ್ಷ ದೇಶದಲ್ಲಿ ಕೋಮುವಾದವನ್ನು ಹರಡುತ್ತಿದೆ. ಬಿಜೆಪಿ ಪಕ್ಷದ ದ್ವೇಷದ ರಾಜಕಾರಣದಿಂದಾಗಿ ದೇಶದ ಘನತೆ ಗೌರವ ಹಾಳಾಗುತ್ತಿದೆ. ತಮ್ಮ ಅಜ್ಜಿ ಮತ್ತು ತಂದೆಯಂತೆ ತಾನೂ ಕೂಡಾ ಒಂದು ದಿನ ಹತ್ಯೆಯಾಗಬಹುದು ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.
 
ತಮ್ಮ ಭಾವನೆಗಳನ್ನು ಪ್ರೇಕ್ಷಕರ ಮುಂದಿಟ್ಟ ರಾಹುಲ್, ಕೆಲ ದಿನಗಳ ಹಿಂದೆ ಉತ್ತರಪ್ರದೇಶದ ಮುಜಾಫರ್ ನಗರಕ್ಕೆ ಭೇಟಿ ನೀಡಿ ಹಿಂದೂ ಮತ್ತು ಮುಸ್ಲಿಮರನ್ನು ಮಾತನಾಡಿಸಿದಾಗ ನನ್ನ ಸ್ವಂತ ಕಥೆಯಂತೆ ಕಂಡುಬಂದಿದೆ ಎಂದರು.
 
ನನ್ನ ಅಜ್ಜಿ ಇಂದಿರಾಗಾಂಧಿ ಹತ್ಯೆಯಾದರು. ನನ್ನ ತಂದೆ ಕೂಡಾ ಹತ್ಯೆಯಾದರು. ನನ್ನನ್ನು ಕೂಡಾ ಒಂದು ದಿನ ಹತ್ಯೆ ಮಾಡಬಹುದು. ಆದರೆ, ನಾನು ಹೆದರೋಲ್ಲ. ನನ್ನ ಮನಸ್ಸಿಗೆ ತೋಚಿದ್ದನ್ನು ಹೇಳಿದ್ದೇನೆ ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನುಭವ ಮಂಟಪ ಮುಗಿಸಲು ನಿಮ್ಮ ಡಿ.ಕೆ.ಶಿವಕುಮಾರ್ ಬಿಡುತ್ತಾರಾ: ಬಿ.ವೈ.ವಿಜಯೇಂದ್ರ

CET exam: ಬ್ರಾಹ್ಮಣರ ಜನಿವಾರ ತೆಗೆಸಿದ್ದು ನಿಜ ಆದ್ರೆ ಕ್ರಮ ಕೈಗೊಳ್ತೀವಿ: ಸಚಿವ ಡಾ ಎಂಸಿ ಸುಧಾಕರ್

West Bengal: ಪಶ್ಚಿಮ ಬಂಗಾಲ ಹಿಂಸಾಚಾರದಲ್ಲಿ ಮೂಗುತೂರಿಸಿದ ಬಾಂಗ್ಲಾದೇಶ: ನಿಮ್ದು ನೀವು ನೋಡ್ಕೊಳ್ಳಿ ಎಂದ ಭಾರತ

Arecanut price today: ಅಡಿಕೆ, ಕಾಳುಮೆಣಸಿಗೆ ಬೆಲೆ ಇಂದು ಎಷ್ಟಾಗಿದೆ ನೋಡಿ

Gold Price today: ಚಿನ್ನ ಖರೀದಿ ಮಾಡುವವರಿಗೆ ಮತ್ತೆ ಶಾಕ್: ಇಂದಿನ ದರ ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments