ಪ್ರಧಾನಿ ಮೋದಿಗೆ ರಕ್ತದಲ್ಲಿ ಪತ್ರ ಬರೆದ ಬಿಜೆಪಿ ನಾಯಕ

Krishnaveni K
ಭಾನುವಾರ, 10 ಮಾರ್ಚ್ 2024 (10:11 IST)
ಕೋಲ್ಕೊತ್ತಾ: ಇತ್ತೀಚೆಗಷ್ಟೇ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಪ.ಬಂಗಾಲದ ಕೌಸ್ತವ್ ಬಾಗ್ಚಿ ಎಂಬವರು ಪ್ರಧಾನಿ ಮೋದಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ. ಪಶ್ಚಿಮ ಬಂಗಾಲ ಉಳಿಸಿ ಎಂದು ಪತ್ರ ಬರೆದಿದ್ದಾರೆ.

ತಮ್ಮ ರಕ್ತದಿಂದ ಪತ್ರ ಬರೆದ ಕೌಸ್ತವ್ ಪ್ರಧಾನಿ ಮೋದಿಯವರೇ ದಯವಿಟ್ಟು ಪಶ್ಚಿಮ ಬಂಗಾಲವನ್ನು ಕಳ್ಳರಿಂದ ರಕ್ಷಿಸಿ ಎಂದು ಬರೆದಿದ್ದಾರೆ. ಆದರೆ ಈ ಪತ್ರವನ್ನು ಸ್ವೀಕರಿಸಿದ ಪ್ರಧಾನಿ ಮೋದಿಯವರು ಇನ್ನು ಮುಂದೆ ಇಂತಹ ಕೆಲಸ ಮಾಡಬೇಡಿ ಎಂದು ಬುದ್ಧಿವಾದ ಹೇಳಿದ್ದಾರೆ.

ಕಾಂಗ್ರೆಸ್ ನಲ್ಲಿದ್ದಾಗ ಕೌಸ್ತವ್ ಕಳೆದ ವರ್ಷ ಪ.ಬಂಗಾಲ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರನ್ನು ಟೀಕಿಸಿದ್ದಕ್ಕೆ ಬಂಧನಕ್ಕೊಳಗಾಗಿದ್ದರು. ಬಳಿಕ ಮಮತಾ ಬ್ಯಾನರ್ಜಿ ಸರ್ಕಾರ ಉರುಳಿಸುವವರೆಗೂ ತಲೆ ಕೂದಲು ಬೆಳೆಸಲ್ಲ ಎಂದು ಶಪಥ ಮಾಡಿದ್ದರು. ತೀರಾ ಇತ್ತೀಚೆಗೆ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದು ದೊಡ್ಡ ಸುದ್ದಿಯಾಗಿತ್ತು.

ಕಾಂಗ್ರೆಸ್ ನಲ್ಲಿ ತನಗೆ ಯಾವುದೇ ಗೌರವ ನೀಡುತ್ತಿಲ್ಲ. ಪಶ್ಚಿಮ ಬಂಗಾಲದ ಕಾಂಗ್ರೆಸ್ ಬಗ್ಗೆ ಕೇಂದ್ರ ನಾಯಕರು ನಿರ್ಲ್ಯಕ್ಷ ತೋರಿದ್ದಾರೆ ಎಂದು ಆರೋಪಿಸಿ ಅವರು ಬಿಜೆಪಿ ಸೇರಿದ್ದರು. ಇದೀಗ ಪ್ರಧಾನಿ ಮೋದಿ ಬಂಗಾಲ ಭೇಟಿ ವೇಳೆ ರಕ್ತದಲ್ಲಿ ಬರೆದ ಪತ್ರ ಹಸ್ತಾಂತರಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪತ್ನಿಗೆ ಅನಾರೋಗ್ಯ, ಕೆಲಸ ಕಾರ್ಯ ಬಿಟ್ಟು ಓಡಿ ಬಂದ ಸಿಎಂ ಸಿದ್ದರಾಮಯ್ಯ

Karnataka Weather: ಮುಗಿದಿಲ್ಲ ಮಳೆಗಾಲ, ಇಂದು ಈ ಜಿಲ್ಲೆಗಳಿಗೆ ಮಳೆ ಸಾಧ್ಯತೆ

ದೆಹಲಿ ಸ್ಫೋಟ ಪ್ರಕರಣ, ಸಾವಿನ ಸಂಖ್ಯೆ 15ಕ್ಕೆ ಏರಿಕೆ

ಕುಟುಂಬದಲ್ಲಿ ಕಲಹದ ನಡುವೆ ವಿರೋಧ ಪಕ್ಷದ ನಾಯಕನಾದ ತೇಜಸ್ವಿ ಯಾದವ್‌

ಮೆಕ್ಕಾ ಯಾತ್ರಿಕರ ಬಸ್ ದುರಂತ: ಪರಿಹಾರ ಘೋಷಿಸಿದ ತೆಲಂಗಾಣ ಸರ್ಕಾರ

ಮುಂದಿನ ಸುದ್ದಿ
Show comments