Publish Date: Wed, 16 Sep 2020 (10:55 IST)
Updated Date: Wed, 16 Sep 2020 (10:57 IST)
ಬಿಜೆಪಿ ಮುಖಂಡನೊಬ್ಬ ಗನ್ ತೋರಿಸಿ ಯುವತಿಯೊಬ್ಬಳನ್ನು ಹುರಿದು ಮುಕ್ಕುತ್ತಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಪದವಿ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಜಮೀನು ಮಾರಾಟಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡನನ್ನು ಭೇಟಿ ಮಾಡಿದ್ದಾಳೆ.
ಆ ಬಳಿಕ ವಿದ್ಯಾರ್ಥಿನಿಯನ್ನು ಹೋಟೆಲ್ ಗೆ ಕರೆಸಿಕೊಂಡು ಗನ್ ತೋರಿಸಿ ಬಿಜೆಪಿ ಮುಖಂಡ ಡಾ.ಶ್ಯಾಮ್ ಪ್ರಕಾಸ್ ದ್ವಿವೇದಿ ಹಾಗೂ ಗೆಳೆಯ ಡಾ.ಅನಿಲ್ ದ್ವಿವೇದಿ ಬಟ್ಟೆ ಬಿಚ್ಚಿ ಮಾಡಬಾರದ್ದನ್ನು ಮಾಡಿದ್ದಾರೆ ಎಂದು ಯುವತಿ ದೂರು ನೀಡಿದ್ದಾಳೆ.
ಉತ್ತರ ಪ್ರದೇಶದ ಪ್ರಯಾಗರಾಜ್ ನಗರದ ಬಿಜೆಪಿ ಮುಖಂಡ ಡಾ.ಶ್ಯಾಮ್ ಪ್ರಕಾಶ್ ದ್ವಿವೇದಿ ಮತ್ತು ಗೆಳೆಯ ಡಾ.ಅನಿಲ್ ದ್ವಿವೇದಿ ವಿರುದ್ಧ ಈ ಆರೋಪ ಕೇಳಿಬಂದಿದ್ದು, ವಿದ್ಯಾರ್ಥಿನಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ.