Webdunia - Bharat's app for daily news and videos

Install App

ಒಂದು ಕಾಲದ ಖಡಕ್ ಪೊಲೀಸ್‌ ಅಣ್ಣಾಮಲೈಯನ್ನೇ ವಶಕ್ಕೆ ಪಡೆದ ಖಾಕಿ, ಕಾರಣ ಹೀಗಿದೆ

Sampriya
ಸೋಮವಾರ, 17 ಮಾರ್ಚ್ 2025 (15:38 IST)
Photo Courtesy X
ತಮಿಳುನಾಡು:  ರಾಜ್ಯ ಮಾರುಕಟ್ಟೆ ನಿಗಮದಲ್ಲಿ (ಟ್ಯಾಸ್ಮ್ಯಾಕ್) ನಡೆದಿದೆ ಎನ್ನಲಾದ ಅಕ್ರಮಗಳ ವಿರುದ್ಧ ಪ್ರತಿಭಟನೆ ನಡೆಸಲು ಮುಂದಾಗಿದ್ದಕ್ಕಾಗಿ, ಬಿಜೆಪಿ ರಾಜ್ಯಾಧ್ಯಕ್ಷೆ ಕೆ. ಅಣ್ಣಾಮಲೈ ಮತ್ತು ತೆಲಂಗಾಣದ ಮಾಜಿ ರಾಜ್ಯಪಾಲೆ ತಮಿಳಿಸೈ ಸೌಂದರರಾಜನ್ ಸೇರಿದಂತೆ ಹಲವಾರು ಬಿಜೆಪಿ ನಾಯಕರನ್ನು ಸೋಮವಾರ ಚೆನ್ನೈ ನಗರ ಪೊಲೀಸರು ಬಂಧಿಸಿದರು.

ಅಕ್ಕರೈನಲ್ಲಿರುವ ಅವರ ಮನೆಯಿಂದ ಸುಮಾರು 1 ಕಿ.ಮೀ ದೂರದಲ್ಲಿಅಣ್ಣಾಮಲೈ ಅವರನ್ನು ಪೊಲೀಸರು ತಡೆದು ಎಗ್ಮೋರ್‌ನಲ್ಲಿ ಪ್ರತಿಭಟನಾ ಸ್ಥಳದ ಕಡೆಗೆ ತೆರಳುತ್ತಿದ್ದಾಗ ವಶಕ್ಕೆ ಪಡೆದರು.

ಪ್ರತಿಭಟನೆಗಾಗಿ ತಮ್ಮ ಮನೆಯಿಂದ ಹೊರಡುತ್ತಿದ್ದಾಗ ಸೌಂದರರಾಜನ್ ಅವರನ್ನು ವಶಕ್ಕೆ ಪಡೆಯಲಾಯಿತು.

ಬಿಜೆಪಿ ಮಹಿಳಾ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷೆಯಾಗಿರುವ ಬಿಜೆಪಿ ಶಾಸಕಿ ವನತಿ ಶ್ರೀನಿವಾಸನ್ ಮತ್ತು ಸರಸ್ವತಿ ಅವರನ್ನು ಸಹ ರಾಜ್ಯ ಸಚಿವಾಲಯದ ಬಳಿ ಬಂಧಿಸಲಾಯಿತು.

ಟಾಸ್ಮ್ಯಾಕ್‌ ಕಾರ್ಯನಿರ್ವಹಣೆಯಲ್ಲಿ ₹1,000 ಕೋಟಿ ಆರ್ಥಿಕ ಅಕ್ರಮಗಳ ಆರೋಪ ನಡೆಸಿದೆ ಎಂಬ ಆರೋಪದಲ್ಲಿ ಇಡಿ ಈಚೆಗೆ ಶೋಧ ನಡೆಸಿತ್ತು. ಅಕ್ರಮಗಳ ವಿರುದ್ಧ ಹೋರಾಟ ನಡೆಸುವುದಾಗಿ ಅಣ್ಣಾಮಲೈ ಹೇಳಿದ್ದರು.

ಪ್ರತಿಭಟನೆ ವೇಳೆ ಬಿಜೆಪಿ ನಾಯಕರನ್ನು ವಶಕ್ಕೆ ಪಡೆಯಲಾಯಿತು.
ಪೊಲೀಸರು ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸುವ ಮೂಲಕ ಅವರ ಮನೆಯನ್ನು ಸುತ್ತುವರೆದರು. ಪ್ರತಿಭಟನೆಯಲ್ಲಿ ಭಾಗವಹಿಸದಂತೆ ತಡೆಯಲು ಅವರು ತಮ್ಮ ಮನೆಯಿಂದ ಹೊರಬರುತ್ತಿದ್ದಂತೆ ಅವರನ್ನು ವಶಕ್ಕೆ ಪಡೆಯಲಾಯಿತು. ಪಕ್ಷದ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು, ಆಗ ಪೊಲೀಸರು ಅವರನ್ನು ಬಂಧಿಸಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments