Select Your Language

Notifications

webdunia
webdunia
webdunia
webdunia

ಬಿಜೆಪಿ ನಾಯಕರ ಮಾತಿನಲ್ಲಿ ಅವರ ಸಂಸ್ಕ್ರತಿ ತಿಳಿಯುತ್ತದೆ: ಸಿದ್ದರಾಮಯ್ಯ

ಬಿಜೆಪಿ ನಾಯಕರ ಮಾತಿನಲ್ಲಿ ಅವರ ಸಂಸ್ಕ್ರತಿ ತಿಳಿಯುತ್ತದೆ: ಸಿದ್ದರಾಮಯ್ಯ
ಮೈಸೂರು , ಭಾನುವಾರ, 24 ಜನವರಿ 2016 (12:00 IST)
ಸೋನಿಯಾ ಗಾಂಧಿ ಒಬ್ಬ ರಾಷ್ಟ್ರೀಯ ಪಕ್ಷದ ಅಧ್ಯಕ್ಷಕರು ಅವರ ಬಗ್ಗೆ ಏಕವಚನ ಪ್ರಯೋಗಿಸುವುದು ಸರಿಯಲ್ಲ. ಇದರಿಂದ ಬಿಜೆಪಿ ನಾಯಕರ ಮಾತಿನಲ್ಲಿ ಅವರ ಸಂಸ್ಕ್ರತಿ ತಿಳಿಯುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
 
ಬಿಜೆಪಿ ನಾಯಕರು ಏಕವಚನದಲ್ಲಿ ಮಾತನಾಡಿದರೆ ಅವರ ಘನತೆ ಗೌರವಕ್ಕೆ ಕುಂದುಬರುತ್ತದೆ ಎನ್ನುವ ಅರಿವಿರಲಿ. ಯಾರೊಬ್ಬರ ಬಗ್ಗೆ ಆರೋಪ ಮಾಡುವಾಗ ಅವರ ವಿರುದ್ಧ ಏಕವಚನದಲ್ಲಿ ಟೀಕಿಸುವುದು ಬಿಜೆಪಿ ಪಕ್ಷಕ್ಕೆ ಗೌರವ ತರುವುದಿಲ್ಲ ಎಂದು ಹೇಳಿದರು.
 
ಬಿಜೆಪಿ ನಾಯಕರು ದಾಖಲೆಗಳಿಲ್ಲದೇ ಆರೋಪಗಳನ್ನು ಮಾಡುವುದರಲ್ಲಿ ನಿಸ್ಸಿಮರು. ರಾಜ್ಯದಲ್ಲಿ ಅಧಿಕಾರದಲ್ಲಿದ್ದಾಗ ಭ್ರಷ್ಟಾಚಾರದ ಕೂಪದಲ್ಲಿ ಮುಳುಗೆದ್ದ ಬಿಜೆಪಿ ನಾಯಕರಿಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ಯಾವುದೇ ನೈತಿಕ ಹಕ್ಕಿಲ್ಲ ಎಂದು ಗುಡುಗಿದರು.
 
ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ನಂತರ ಭ್ರಷ್ಟಾಚಾರರಹಿತ ಪಾರದರ್ಶಕ ಅಡಳಿತ ನೀಡಿದೆ. ಇದನ್ನು ಸಹಿಸಲಾಗದ ಬಿಜೆಪಿ ನಾಯಕರು ಕಾಂಗ್ರೆಸ್ ಪಕ್ಷದ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

Share this Story:

Follow Webdunia kannada