Webdunia - Bharat's app for daily news and videos

Install App

ಶಾಸಕರೊಂದಿಗೆ ಚರ್ಚಿಸಿ ಹೊಸ ಸಿಎಂ ಆಯ್ಕೆ

Webdunia
ಬುಧವಾರ, 3 ಆಗಸ್ಟ್ 2016 (09:59 IST)
ಗುಜರಾತ್ ಮುಖ್ಯಮಂತ್ರಿ ಸ್ಥಾನಕ್ಕೆ ಆನಂದಿ ಬೆನ್ ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಹೊಸ ಮುಖ್ಯಮಂತ್ರಿ ಆಯ್ಕೆಗೆ ಬಿಜೆಪಿಯಲ್ಲಿ ಕಸರತ್ತು ಪ್ರಾರಂಭವಾಗಿದೆ.


ಮುಖ್ಯಮಂತ್ರಿ ಆಯ್ಕೆ ಹೊಣೆಯನ್ನು ಪಕ್ಷದ ಸಂಸದೀಯ ಮಂಡಳಿಗೆ ನೀಡಲಾಗಿದೆ. ಗುಜರಾತ್ ಶಾಸಕರೊಂದಿಗೆ ಚರ್ಚಿಸಿ ಮುಖ್ಯಮಂತ್ರಿ ಆಯ್ಕೆ ಮಾಡಲಾಗುವುದು. ಈ ಸಂಬಂಧ ಗುಜರಾತ್‌ನ ಶಾಸಕರು ಆಗಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನೇತೃತ್ವದಲ್ಲಿ ನಿಯೋಗವೊಂದನ್ನು ಗುಜರಾತ್‌ಗೆ ಕಳುಹಿಸಲಾಗುವುದು ಎಂದು ಪಕ್ಷದ ಕೇಂದ್ರ ಸಚಿವ ವೆಂಕಯ್ಯ ನಾಯ್ಡು ತಿಳಿಸಿದ್ದಾರೆ.

ಕೇಂದ್ರ ಸಚಿವ ಪುರುಷೋತ್ತಮ್ ರೂಪಾಲಾ, ಗುಜರಾತ್ ಸಂಪುಟ ದರ್ಜೆ ಸಚಿವ ನಿತಿನ್ ಪಟೇಲ್, ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ವಿಯ್ ರೂಪಾನಿ, ವಿಧಾನಸಭಾ ಸ್ಪೀಕರ್ ಗಣಪತಿ  ವಾಸವ್  ಮುಖ್ಯಮಂತ್ರಿ ಪದವಿಯ ರೇಸ್‌ನಲ್ಲಿದ್ದಾರೆ.

ಪಟೇದಾರ್, ಚಳವಳಿ, ಸ್ಥಳೀಯ ಚುನಾವಣೆಗಳ ಸೋಲು, ಇತ್ತೀಚೀಗೆ ನಡೆದ ದಲಿತರ ಮೇಲಿನ ಹಲ್ಲೆ ಪ್ರಕರಣಗಳಿಂದ ಪಕ್ಷಕ್ಕಾಗಿರುವ ಹಿನ್ನಡೆಯನ್ನು ಮೆಟ್ಟಿ ನಿಂತು 2017ರ ಚುನಾವಣೆಯಲ್ಲಿ ಮತ್ತೆ ಅಧಿಕಾರಕ್ಕೇರುವ ಸವಾಲನ್ನು ಸಮರ್ಥವಾಗಿ ಎದುರಿಸುವ ನಾಯಕನ ಆಯ್ಕೆಯಾಗಬೇಕಿದೆ.

ಕಳೆದ ಎರಡು ದಶಕಗಳಿಂದ ರಾಜ್ಯದಲ್ಲಿ ಹೊಂದಿರುವ ಅಧಿಕಾರವನ್ನು ಯಾವುದೇ ಪರಿಸ್ಥಿತಿಯಲ್ಲೂ ಕಳೆದುಕೊಳ್ಳಬಾರದು ಎಂಬ ನಿಲುವು ಪ್ರಧಾನಿಯವರದಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan:ರಾತ್ರಿಯಾಗುತ್ತಿದ್ದಂತೇ ಪಾಕಿಸ್ತಾನದಿಂದ ಮತ್ತೆ ದಾಳಿ ಶುರು, 3 ರಾಜ್ಯ ಟಾರ್ಗೆಟ್

Operation Sindoor Effect:ಈ ವಿಷಯ ಗೊತ್ತಿಲ್ಲದೆ ಮಾಮೂಲಿ ಟೈಮ್‌ಗೆ ವಿಮಾನ ಹತ್ತಲು ಹೋದ್ರೆ ಮಿಸ್ ಆಗುವುದು ಗ್ಯಾರಂಟಿ

ಪಾಕ್‌, ಭಾರತ ನಡುವೆ ಹೆಚ್ಚಿದ ಉದ್ವಿಗ್ನತೆ: ಚೀನಾಗೂ ತಟ್ಟಿದ ಬಿಸಿ, ನಾಗರಿಕರಿಗೆ ಸಂದೇಶ ರವಾನೆ

ಸರ್ಕಾರದ ಈ ಕ್ರಮವು ದೇಶದ ಸ್ವಾಭಿಮಾನವನ್ನು ಹೆಚ್ಚಿಸಿದೆ: ಸಶಸ್ತ್ರ ಪಡೆಗಳನ್ನು ಅಭಿನಂದಿಸಿದ RSS

'Sindoor Is For Love, Not War: ಚರ್ಚೆ ಹುಟ್ಟುಹಾಕಿದ ಛಾಯಾಗ್ರಾಹಕನ ಪೋಸ್ಟ್‌

ಮುಂದಿನ ಸುದ್ದಿ
Show comments