Select Your Language

Notifications

webdunia
webdunia
webdunia
webdunia

ಬಿಜೆಪಿ ಸಂಸದ ಶಾಂತಕುಮಾರ್ ವಿರುದ್ಧ ಬಿಜೆಪಿ ಶಾಸಕ ಕಾಲಿಯಾ ಗರಂ

ಬಿಜೆಪಿ ಸಂಸದ ಶಾಂತಕುಮಾರ್ ವಿರುದ್ಧ ಬಿಜೆಪಿ ಶಾಸಕ ಕಾಲಿಯಾ ಗರಂ
ನವದೆಹಲಿ , ಸೋಮವಾರ, 27 ಜುಲೈ 2015 (16:35 IST)
ಬಿಜೆಪಿ ಹೈಕಮಾಂಡ್ ವಿರುದ್ಧ ಅಪಸ್ವರ ಎತ್ತಿದ್ದ ಹಿಮಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ, ಸಂಸದ ಶಾಂತಕುಮಾರ್ ವಿರುದ್ಧ ಬಿಜೆಪಿ ಶಾಸಕ ಕಾಲಿಯಾ ಚುನಾವಣೆ ಹಣ ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.
 
ಕಾಂಗ್ರಾ ಸಂಸದ ಶಾಂತಕುಮಾರ್ ಬಿಜೆಪಿ ಪಕ್ಷದ ಕಾರ್ಯಕ್ಷಮತೆಯನ್ನು ಪ್ರಶ್ನಿಸಿದ್ದಾರೆ. ಆದರೆ, ಇತರರ ವಿರುದ್ಧ ಆರೋಪ ಹೊರಿಸುವ ಮೊದಲು ತಮ್ಮ ಕಾರ್ಯವೈಖರಿಯ ಬಗ್ಗೆ ಗಮನಹರಿಸಲಿ ಎಂದು ಲೇವಡಿ ಮಾಡಿದ್ದಾರೆ.
 
ಲಲಿತ್‌ಗೇಟ್ ಮತ್ತು ವ್ಯಾಪಂ ಹಗರಣಗಳಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಬಿಜೆಪಿ ಪಕ್ಷದ ಇಮೇಜ್‌ಗೆ ಧಕ್ಕೆಯಾಗಿದೆ ಎಂದು ಸಂಸದ ಶಾಂತಕುಮಾರ್ ಆರೋಪಿಸಿದ್ದರು.
 
ಕಳೆದ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಸಂಸದ ಶಾಂತಕುಮಾರ್ ಚುನಾವಣೆ ಹಣವನ್ನು ಸ್ವಂತಕ್ಕೆ ಬಳಸಿಕೊಂಡಿದ್ದರು ಎಂದು ಪಂಜಾಬ್ ಮಾಜಿ ಸಚಿವ ಬಿಜೆಪಿ ಶಾಸಕ ಕಾಲಿಯಾ ಗಂಭೀರ ಆರೋಪ ಮಾಡಿದ್ದಾರೆ.
 
ಪಂಜಾಬ್ ರಾಜ್ಯದ ಬಿಜೆಪಿ ಪಕ್ಷದ ಉಸ್ತುವಾರಿಯಾಗಿದ್ದ ಶಾಂತಕುಮಾರ್ ಲೋಕಸಭೆ ಚುನಾವಣೆಗಾಗಿ ಸಂಗ್ರಹಿಸಲಾದ ಹಣದ ಮಾಹಿತಿಯ ಬಗ್ಗೆ ಯಾವುದೇ ಲೆಕ್ಕಪತ್ರಿವಿಟ್ಟಿರಲಿಲ್ಲ. ಸ್ವಂತಕ್ಕಾಗಿ ಬಳಸಿಕೊಂಡಿದ್ದಾರೆ ಎಂದು ಜಾಲಂಧರ್ ಕಂಟೋನ್ಮೆಂಟ್ ಶಾಸಕ ಮನೋರಂಜನ್ ಕಾಲಿಯಾ ಗುಡುಗಿದ್ದಾರೆ. 
 

Share this Story:

Follow Webdunia kannada