Webdunia - Bharat's app for daily news and videos

Install App

ಶಾಸಕ ಎಂ.ಚಂದ್ರಪ್ಪ ಹಾಗೂ ಕುಟುಂಬಸ್ಥರ ವಿರುದ್ದ ಪ್ರಕರಣ ದಾಖಲು

Webdunia
ಗುರುವಾರ, 5 ಮೇ 2022 (18:06 IST)
ಜನರಲ್ ಪವರ್ ಆಫ್ ಅಟಾರ್ನಿ(GPA)ಯನ್ನು ದುರುಪಯೋಗ ಪಡಿಸಿಕೊಂಡ ಆರೋಪದ ಮೇಲೆ ಚಿತ್ರದುರ್ಗ ಜಿಲ್ಲೆ ಹೊಳಲ್ಕರೆ ಕ್ಷೇತ್ರದ ಬಿಜೆಪಿ ಶಾಸಕ  ಎಂ.ಚಂದ್ರಪ್ಪ ಹಾಗೂ ಕುಟುಂಬಸ್ಥರ ವಿರುದ್ದ ದೂರು ದಾಖಲಾಗಿದೆ.
ಎಂ.ಜಿ.ಶ್ರೀಧರ್ ಎಂಬುವವರು ನಾಗರಾಜ್ ಎಂಬುವವರಿಗೆ ವ್ಯವಹಾರದ ಉದ್ದೇಶದ ಸಲುವಾಗಿ 2016ರಲ್ಲಿ GPA ಮೂಲಕ ಅಧಿಕಾರವನ್ನು ಹಸ್ತಾಂತರ ಮಾಡಿದ್ದರು. ಇದಕ್ಕೊಪ್ಪದ ಶ್ರೀಧರ್ ಸಹೋದರಿ ತಮ್ಮಗು ಆಸ್ತಿಯಲ್ಲಿ ಪಾಲಿದೆ ಎಂದು ಆಗ್ರಹಿಸಿ ನ್ಯಾಯಾಲಯದ ಮೊರೆ ಹೋಗಿದ್ದರು. ಆದರೆ, ವಿಚಾರಣೆ ನಡೆಯುವ ಸಮಯದಲ್ಲಿ ಶ್ರೀಧರ್ ಅನಾರೋಗ್ಯದಿಂದ ಮೃತಪಟ್ಟಿದ್ದರು.
ಶ್ರೀಧರ್ ಸಾವನ್ನು ದುರುಪಯೋಗ ಪಡಿಸಿಕೊಂಡ ನಾಗರಾಜ್ ಶಾಸಕರ ಕುಟುಂಬದ ಸದಸ್ಯರಿಗೆ ಆಸ್ತಿ ಕ್ರಯಪತ್ರ ಮಾಡಿಸಿಕೊಟ್ಟಿದ್ದಾರೆ. ಈ ಕುರಿತು ಖಾಸಗಿ ದೂರು ದಾಖಲಾದ ಹಿನ್ನೆಲೆಯಲ್ಲಿ ಹೊಳಲ್ಕರೆ ಸಿವಿಲ್ ಹಾಗೂ ಜೆಎಂಎಫ್ಸಿ ನ್ಯಾಯಾಲಯ IPC ಸೆಕ್ಷನ್ 149, 404, 405, 415, 420,423, 463, 464, 466, 468, 470 ಅಡಿ ಪ್ರಕರಣವನ್ನ ದಾಖಲಿಸಿ ತನಿಖೆ ನಡೆಸುವಂತೆ ಆದೇಶಿಸಿದೆ.
ಅಧಿಕಾರ ದುರುಪಯೋಗ ಆರೋಪದ ಮೇಲೆ ಶಾಸಕ ಎಂ.ಚಂದ್ರಪ್ಪ, ಪತ್ನಿ ಚಂದ್ರಕಲಾ, ಪುತ್ರರಾದ ರಘುಚಂದನ್, ದೀಪ್ ಚಂದನ್, ಉಪನೋಂದಣಾಧಿಕಾರಿ ನಾಗರತ್ನಮ್ಮ ಸೇರಿದಂತೆ ಇತರರ ವಿರುದ್ದ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments