Webdunia - Bharat's app for daily news and videos

Install App

ರಾಮಮಂದಿರ ನಿರ್ಮಾಣಕ್ಕೆ ಅಡ್ಡಿಪಡಿಸಿದ್ರೆ ಹಜ್ ಯಾತ್ರೆ ಬಂದ್: ಬಿಜೆಪಿ ಶಾಸಕ

Webdunia
ಶುಕ್ರವಾರ, 14 ಜುಲೈ 2017 (12:49 IST)
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಮ್ಮ ಪಕ್ಷದ ನಾಯಕರು ಕಟುವಾದ ಮಾತುಕತೆಗಳು ಮತ್ತು ಅನಗತ್ಯ ಹೇಳಿಕೆಗಳನ್ನು ನೀಡದಂತೆ ತಾಕೀತು ಮಾಡಿದ್ದರೂ, ಬಿಜೆಪಿ ಶಾಸಕರೊಬ್ಬರು ಸಾಮಾಜಿಕ ತಾಣಗಳಲ್ಲಿ ಅಮರನಾಥ್ ಯಾತ್ರೆಯಲ್ಲಿ ನಡೆದ ಉಗ್ರರ ದಾಳಿಯ ಬಗ್ಗೆ ಪ್ರಸ್ತಾಪಿಸಿ, ಹಜ್ ಯಾತ್ರಿಗಳಿಗೆ ಬೆದರಿಕೆಯೊಡ್ಡಿದ ಸಂದೇಶವನ್ನು ಪೋಸ್ಟ್ ಮಾಡಿದ್ದಾರೆ. 
 
ಒಂದು ವೇಳೆ, ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸಲು ತಡೆಯೊಡ್ಡಿದಲ್ಲಿ ಮುಸ್ಲಿಂ ಸಮುದಾಯದ ಜನರು ಮೆಕ್ಕಾ ಮತ್ತು ಮದೀನಾಗೆ ಹೋಗುವುದನ್ನು ನಿಲ್ಲಿಸುತ್ತೇನೆ ಎಂದು ಬಿಜೆಪಿ ಶಾಸಕ ಬ್ರಿಜ್‌ಭೂಷಣ್ ರಜಪೂತ್ ತಮ್ಮ ಲೈವ್ ವೀಡಿಯೊದಲ್ಲಿ ತಿಳಿಸಿದ್ದಾರೆ.
 
ಭಗವನ್ ಶ್ರೀ ರಾಮ ಮಂದಿರ ನಿರ್ಮಾಣಕ್ಕೆ ಮುಸ್ಲಿಂ ಸಮುದಾಯದವರು ಅಡ್ಡಿಪಡಿಸಿದಲ್ಲಿ, ಮುಸ್ಲಿಂ ಸಮುದಾಯದವರು ಮೆಕ್ಕಾ ಮದೀನಾಗೆ ಹೋಗುವುದನ್ನು ಶಾಸಕ ಗುಡ್ಡು ರಾಜ್‌ಪೂತ್ ತಡೆಯುತ್ತಾರೆ ಎಂದು ಗುಡುಗಿದ್ದಾರೆ. 
 
ಸಾಮಾಜಿಕ ಅಂತರ್ಜಾಲ ತಾಣದಲ್ಲಿ ವಿಡಿಯೋದೊಂದಿಗೆ ಸಂದೇಶವನ್ನೂ ಪೋಸ್ಟ್ ಮಾಡಿದ್ದು, ಅಮರನಾಥ್ ಯಾತ್ರಿಕರ ಮೇಲೆ ನಡೆಸಿದ ಉಗ್ರರು ದಾಳಿ ಹಿಂದು ಧರ್ಮದವರನ್ನು ಕೆರಳಿಸುವಂತಹ ಪ್ರಯತ್ನವಾಗಿದೆ. ನಮ್ಮ ಸರಕಾರ ಇಂತಹ ದೇಶದ್ರೋಹಿಗಳಿಗೆ ಏಳೇಳು ಜನ್ಮದಲ್ಲಿ ಹಿಂದುಗಳಿಗೆ ಬೆರಳು ತೋರಿಸಲು ಧೈರ್ಯವಾಗದಂತಹ ತಕ್ಕ ಪಾಠ ಕಲಿಸಬೇಕಾಗಿದೆ ಬಿಜೆಪಿ ಶಾಸಕ ಬ್ರಿಜ್‌ಭೂಷಣ್ ರಾಜ್‌ಪೂತ್ ಕಿಡಿಕಾರಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments