ರಾಮಮಂದಿರ ನಿರ್ಮಾಣಕ್ಕೆ ಅಡ್ಡಿಪಡಿಸಿದ್ರೆ ಹಜ್ ಯಾತ್ರೆ ಬಂದ್: ಬಿಜೆಪಿ ಶಾಸಕ

Webdunia
ಶುಕ್ರವಾರ, 14 ಜುಲೈ 2017 (12:49 IST)
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಮ್ಮ ಪಕ್ಷದ ನಾಯಕರು ಕಟುವಾದ ಮಾತುಕತೆಗಳು ಮತ್ತು ಅನಗತ್ಯ ಹೇಳಿಕೆಗಳನ್ನು ನೀಡದಂತೆ ತಾಕೀತು ಮಾಡಿದ್ದರೂ, ಬಿಜೆಪಿ ಶಾಸಕರೊಬ್ಬರು ಸಾಮಾಜಿಕ ತಾಣಗಳಲ್ಲಿ ಅಮರನಾಥ್ ಯಾತ್ರೆಯಲ್ಲಿ ನಡೆದ ಉಗ್ರರ ದಾಳಿಯ ಬಗ್ಗೆ ಪ್ರಸ್ತಾಪಿಸಿ, ಹಜ್ ಯಾತ್ರಿಗಳಿಗೆ ಬೆದರಿಕೆಯೊಡ್ಡಿದ ಸಂದೇಶವನ್ನು ಪೋಸ್ಟ್ ಮಾಡಿದ್ದಾರೆ. 
 
ಒಂದು ವೇಳೆ, ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸಲು ತಡೆಯೊಡ್ಡಿದಲ್ಲಿ ಮುಸ್ಲಿಂ ಸಮುದಾಯದ ಜನರು ಮೆಕ್ಕಾ ಮತ್ತು ಮದೀನಾಗೆ ಹೋಗುವುದನ್ನು ನಿಲ್ಲಿಸುತ್ತೇನೆ ಎಂದು ಬಿಜೆಪಿ ಶಾಸಕ ಬ್ರಿಜ್‌ಭೂಷಣ್ ರಜಪೂತ್ ತಮ್ಮ ಲೈವ್ ವೀಡಿಯೊದಲ್ಲಿ ತಿಳಿಸಿದ್ದಾರೆ.
 
ಭಗವನ್ ಶ್ರೀ ರಾಮ ಮಂದಿರ ನಿರ್ಮಾಣಕ್ಕೆ ಮುಸ್ಲಿಂ ಸಮುದಾಯದವರು ಅಡ್ಡಿಪಡಿಸಿದಲ್ಲಿ, ಮುಸ್ಲಿಂ ಸಮುದಾಯದವರು ಮೆಕ್ಕಾ ಮದೀನಾಗೆ ಹೋಗುವುದನ್ನು ಶಾಸಕ ಗುಡ್ಡು ರಾಜ್‌ಪೂತ್ ತಡೆಯುತ್ತಾರೆ ಎಂದು ಗುಡುಗಿದ್ದಾರೆ. 
 
ಸಾಮಾಜಿಕ ಅಂತರ್ಜಾಲ ತಾಣದಲ್ಲಿ ವಿಡಿಯೋದೊಂದಿಗೆ ಸಂದೇಶವನ್ನೂ ಪೋಸ್ಟ್ ಮಾಡಿದ್ದು, ಅಮರನಾಥ್ ಯಾತ್ರಿಕರ ಮೇಲೆ ನಡೆಸಿದ ಉಗ್ರರು ದಾಳಿ ಹಿಂದು ಧರ್ಮದವರನ್ನು ಕೆರಳಿಸುವಂತಹ ಪ್ರಯತ್ನವಾಗಿದೆ. ನಮ್ಮ ಸರಕಾರ ಇಂತಹ ದೇಶದ್ರೋಹಿಗಳಿಗೆ ಏಳೇಳು ಜನ್ಮದಲ್ಲಿ ಹಿಂದುಗಳಿಗೆ ಬೆರಳು ತೋರಿಸಲು ಧೈರ್ಯವಾಗದಂತಹ ತಕ್ಕ ಪಾಠ ಕಲಿಸಬೇಕಾಗಿದೆ ಬಿಜೆಪಿ ಶಾಸಕ ಬ್ರಿಜ್‌ಭೂಷಣ್ ರಾಜ್‌ಪೂತ್ ಕಿಡಿಕಾರಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಹಲ್ಗಾಮ್‌ ಭಯೋತ್ಪಾದನಾ ದಾಳಿ: ಎನ್‌ಐಎ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪಾರ್ಟಿ ಮಾಡುತ್ತಿದ್ದಾಗ ಪೊಲೀಸರ ಎಂಟ್ರಿ, ಹೆದರಿ ನಾಲ್ಕನೇ ಫ್ಲೋರ್‌ನಿಂದ ಹಾರಿದ್ರಾ ಯುವತಿ

ಮಹಿಳೆಯರಿರುವುದು ಗಂಡನ ಜತೆ ಮಲಗುವುದಕ್ಕೆ: ಕೇರಳ ಸಿಪಿಎಂ ಮುಖಂಡನ ವಿವಾದಾತ್ಮಕ ಹೇಳಿಕೆ

ಮೊಟ್ಟೆ ಪ್ರಿಯರೇ ಹುಷಾರ್ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ಕೌಟುಂಬಿಕ ಕಲಹಕ್ಕೆ ಪತ್ನಿಯನ್ನು ಮುಗಿಸಿ, ತಾನೂ ಆತ್ಮಹತ್ಯೆಗೆ ಶರಣಾದ ಪತಿ

ಮುಂದಿನ ಸುದ್ದಿ
Show comments