ರಾಹುಲ್ ಗಾಂಧಿ ‘ಅಪಶಕುನ’ ಟಾಂಗ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಕೊಟ್ಟ ಬಿಜೆಪಿ

Webdunia
ಗುರುವಾರ, 23 ನವೆಂಬರ್ 2023 (11:35 IST)
ಜೈಪುರ: ರಾಜಸ್ಥಾನ್ ನಲ್ಲಿ ಚುನಾವಣಾ ಕಣ ರಂಗೇರುತ್ತಿದೆ. ಚುನಾವಣೆ ಎಂದ ಮೇಲೆ ರಾಜಕೀಯ ನಾಯಕರ ಹೇಳಿಕೆಗಳ ಕದನ ಜೋರಾಗಿಯೇ ನಡೆಯುತ್ತಿರುತ್ತದೆ.

ರಾಜಸ್ಥಾನ್ ನಲ್ಲಿ ಚುನಾವಣಾ ಪ್ರಚಾರ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇತ್ತೀಚೆಗೆ ಭಾರತೀಯ ಕ್ರಿಕೆಟ್ ತಂಡ ವಿಶ್ವಕಪ್ ಫೈನಲ್ ಸೋಲಲು ಅಪಶಕುನ (ಪನೌತಿ)ದ ನಾಯಕ ಅಲ್ಲಿ ಇದ್ದಿದ್ದೇ ಕಾರಣ ಎಂದು ಪ್ರಧಾನಿ ಮೋದಿಗೆ ಟಾಂಗ್ ಕೊಟ್ಟಿದ್ದರು. ಅಲ್ಲದೆ ಮೋದಿಯನ್ನು ಜೇಬುಗಳ್ಳರಿಗೆ ಹೋಲಿಸಿದ್ದರು. ಆ ಮೂಲಕ ಮೋದಿ ಕಾಲಿಟ್ಟಲ್ಲೆಲ್ಲಾ ಸೋಲು ಎಂದು ಕುಹುಕವಾಡಿದ್ದರು.

ನಿನ್ನೆ ಇದೇ ಮಾತನ್ನು ಮತ್ತೆ ರಾಹುಲ್ ಸಹೋದರಿ ಪ್ರಿಯಾಂಕಾ ವಾದ್ರಾ ಕೂಡಾ ಚುನಾವಣಾ ರ್ಯಾಲಿಯಲ್ಲಿ ಪುನರುಚ್ಚರಿಸಿದ್ದಾರೆ. ಪ್ರಧಾನಿ ಮೋದಿ ಹೋಗಿದ್ದಕ್ಕೇ ಟೀಂ ಇಂಡಿಯಾ ವಿಶ್ವಕಪ್ ಫೈನಲ್ ಸೋತಿದ್ದು ಎಂದಿದ್ದರು.

ಇದು ಬಿಜೆಪಿ ಪಾಳಯದ ಆಕ್ರೋಶಕ್ಕೆ ಕಾರಣವಾಗಿದೆ. ಇದು ಪ್ರಧಾನಿ ಹುದ್ದೆಗೆ ಮಾಡಿದ ಅವಮಾನ. ಹೀಗಾಗಿ ಕಾಂಗ್ರೆಸ್ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿತ್ತು. ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಈಗ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಪಿಕ್ ಪಾಕೆಟರ್ ಎನ್ನುವುದು, ಅಪಶಕುನ ಎನ್ನುವುದು ಒಬ್ಬ ವ್ಯಕ್ತಿಯ ಮಾನಹಾನಿ ಮಾಡುವ ಮಾತುಗಳು. ಅಲ್ಲದೆ, ಒಬ್ಬ ಘನತೆಯನ್ನು ಹಾಳು ಮಾಡಿ ಸಾರ್ವಜನಿಕರ ಹಾದಿ ತಪ್ಪಿಸುವ ಮಾತುಗಳು ಇದಾಗಿದೆ ಎಂದು ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂ ಹೆಣ್ಣುಮಕ್ಕಳಿಗೆ ಜಾಗೃತಿ ಮೂಡಿಸುವುದು ದ್ವೇಷ ಆಗುತ್ತಾ: ಪ್ರಮೋದ್ ಮುತಾಲಿಕ್

ರೋಡ್‌ನಲ್ಲಿ ಬಿಟ್ಟು ಹೋದ ರಾಟ್ ವೀಲರ್ ನಾಯಿಗಳ ದಾಳಿಗೆ ಮಹಿಳೆ ಬಲಿ, ಆಗಿದ್ದೇನು ಗೊತ್ತಾ

ಶಬರಿಮಲೆ ಚಿನ್ನ ಕಳವು ವಿಚಾರ, ಈಗ ಮಾತನಾಡುವುದು ಸರಿಯಲ್ಲ: ಪಿಣರಾಯಿ ವಿಜಯನ್

ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ವಿಚಾರ ವದಂತಿ ಬೇಡ: ಮಧು ಬಂಗಾರಪ್ಪ

ಸತೀಶ್ ಜತೆಗೆ ನಡೆದ ಮಾತುಕತೆ ಬಗ್ಗೆ ಬಿಚ್ಚಿಟ್ಟ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments