Webdunia - Bharat's app for daily news and videos

Install App

ದಾದ್ರಿ ಹತ್ಯೆ ಸಣ್ಣ ಘಟನೆ ಎಂದ ಬಿಜೆಪಿ ಸಂಸದ ಸತ್ಯಪಾಲ್ ಸಿಂಗ್

Webdunia
ಮಂಗಳವಾರ, 13 ಅಕ್ಟೋಬರ್ 2015 (14:10 IST)
ದಾದ್ರಿ ಹತ್ಯೆಯೊಂದು ಸಣ್ಣ ಘಟನೆ ಎಂದು ಬಿಜೆಪಿ ಸಂಸದ ಸತ್ಯಪಾಲ್ ಸಿಂಗ್ ನೀಡಿದ ಹೇಳಿಕೆಗೆ ವಿಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು ಇದು ಬಿಜೆಪಿಯ ನಿಜವಾದ ಮುಖವಾಡವನ್ನು ಬಯಲಿಗೆ ತಂದಿದೆ ಎಂದು ಕಿಡಿಕಾರಿವೆ.
 
ದಾದ್ರಿ ಹತ್ಯೆಯಂತಹ ಘಟನೆಗಳಿಗೆ ಕಡಿವಾಣ ಹಾಕಲು ಪ್ರಜಾಪ್ರಭುತ್ವದ ವಾತಾವರಣ ಸಂಪೂರ್ಣವಾಗಿ ಸಮರ್ಥವಾಗಿದೆ. ಇಂತಹ ಸಣ್ಣ ಘಟನೆಗಳನ್ನು ತಡೆಯುವ ಶಕ್ತಿ ಸರಕಾರಕ್ಕಿದೆ ಎಂದು ಸಿಂಗ್ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರು. 
 
ಬಾಘ್‌ಪತ್ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದರಾದ ಸತ್ಯಪಾಲ್ ಸಿಂಗ್ ಮಾತನಾಡಿ, ಕೇಂದ್ರ ಸರಕಾರ ಮುಸ್ಲಿಮರ ಮತ್ತು ಇತರ ಧರ್ಮಗಳ ಅಭಿಪ್ರಾಯಗಳನ್ನು ಪಡೆಯಬೇಕಾಗಿದೆ ಎಂದರು. 
 
ಬಿಜೆಪಿ ಸಂಸದ ಸಿಂಗ್ ಹೇಳಿಕೆಯಿಂದ ಬಿಜೆಪಿ ಯಾವ ದಾರಿಯಲ್ಲಿ ಸಾಗುತ್ತಿದೆ ಎನ್ನುವುದರ ಸಂಕೇತವಾಗಿದೆ ಎಂದು ಕಾಂಗ್ರೆಸ್ ವಕ್ತಾರ ಅಜೋಯ್ ಕುಮಾರ್ ಗುಡುಗಿದ್ದಾರೆ.
 
ಮುಂಬೈ ಮಾಜಿ ಪೊಲೀಸ್ ಆಯುಕ್ತರಾಗಿದ್ದ ಬಿಜೆಪಿ ಸಂಸದ ಸಿಂಗ್ ಹೇಳಿಕೆ ನಾಚಿಕೆಗೇಡಿತನದ್ದು, ಇತರ ಸಮುದಾಯಗಳನ್ನು ತುಳಿದು ಬಿಜೆಪಿ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಪ್ರಯತ್ನ ನಡೆಸುತ್ತಿದೆ ಎಂದು ಆರೋಪಿಸಿದರು.  

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments