ಚುನಾವಣೆ ಆಯೋಗ ವಿರುದ್ದ ವರುಣ್ ಗಾಂಧಿ ಕಿಡಿ

Webdunia
ಮಂಗಳವಾರ, 31 ಅಕ್ಟೋಬರ್ 2023 (10:22 IST)
ಚುನಾವಣೆ ಆಯೋಗದ ಕ್ರಮದ ಹಿಂದೆ ಕೇಂದ್ರ ಸರಕಾರದ ಒತ್ತಡ ಕಾರಣವಾಗಿದೆ. ಕೊನೆಯ ಗಳಿಗೆಯಲ್ಲಿ ಜನತೆಗೆ ಆಮಿಷವೊಡ್ಡಲು ಅವಕಾಶ ನೀಡಲಾಗಿದೆ ಎಂದು ವಿಪಕ್ಷಗಳು ಟೀಕಿಸುತ್ತಿರುವ ಸಂದರ್ಭದಲ್ಲಿಯೇ ವರುಣ್ ಗಾಂಧಿ ಹೇಳಿಕೆ ಹೊರಬಿದ್ದಿದೆ.
 
 
ಕೇಂದ್ರ ಚುನಾವಣೆ ಆಯೋಗ ಹಲ್ಲಿಲ್ಲದ ಹುಲಿಯಂತೆ ಎಂದು ಬಿಜೆಪಿ ಸಂಸದ ವರುಣ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ಚುನಾವಣೆ ವೆಚ್ಚದ ವಿವರವನ್ನು ನೀಡದಿದ್ದರೂ ರಾಜಕೀಯ ಪಕ್ಷಗಳ ಮಾನ್ಯತೆ ರದ್ದುಪಡಿಸುವುದಿಲ್ಲ, ಸಾಮಾನ್ಯ ಹಿನ್ನೆಲೆಯ ವ್ಯಕ್ತಿಗಳ ಸ್ಪರ್ಧಗೆ ಅವಕಾಶ ನೀಡುವುದಿಲ್ಲ. ಇದೆಂತಹ ಚುನಾವಣೆ ಆಯೋಗ ಎಂದು ಕಿಡಿಕಾರಿದ್ದಾರೆ.
 
ದೇಶದ ಸಂವಿಧಾನ ಕಾಯ್ದೆ 324 ಅನ್ವಯ ಚುನಾವಣೆ ಆಯೋಗ ಚುನಾವಣೆಯ ಮೇಲ್ವಿಚಾರಣೆ ಮತ್ತು ನಿಯಂತ್ರಣ ಹೊಂದಿರಬೇಕು. ಪ್ರಸ್ತುತವಿರುವ ಚುನಾವಣೆ ಆಯೋಗ ಕಾಯ್ದೆ ಪಾಲಿಸುತ್ತಿದೆಯೇ? ಎಂದು ಪ್ರಶ್ನಿಸಿದ್ದಾರೆ.
 
ನ್ಯಾಶನಲ್ ಯುನಿವರ್ಸಿಟಿ ಆಫ್ ಲಾ ಕಾಲೇಜಿನಲ್ಲಿ ಭಾರತದಲ್ಲಿ ರಾಜಕೀಯ ಸುಧಾರಣೆ ಕುರಿತ ಉಪನ್ಯಾಸದ ಅಂಗವಾಗಿ ಮಾತನಾಡಿದ ವರುಣ್, ಚುನಾವಣೆ ಮುಗಿದ ನಂತರ ಪ್ರಕರಣಗಳನ್ನು ದಾಖಲಿಸುವ ಅಧಿಕಾರ ಕೂಡಾ ಆಯೋಗಕ್ಕೆ ಇರುವುದಿಲ್ಲ, ಅದನ್ನು ಮಾಡಲು ಸುಪ್ರೀಂ ಕೋರ್ಟ್‌ಗೆ ಹೋಗಬೇಕು ಎಂತಹ ವಿಚಿತ್ರ ಚುನಾವಣೆ ಆಯೋಗ ಎಂದು ಲೇವಡಿ ಮಾಡಿದರು.
 
ಚುನಾವಣಾ ವೆಚ್ಚದ ವಿವರವನ್ನು ಸಮಯಕ್ಕೆ ಸರಿಯಾಗಿ ಪಾವತಿಸದ ಯಾವುದೇ ರಾಜಕೀಯ ಪಕ್ಷದ ಮಾನ್ಯತೆಯನ್ನು ಕೇಂದ್ರ ಚುನಾವಣೆ ಆಯೋಗ ರದ್ದುಪಡಿಸಿಲ್ಲ ಎಂದು ಬಿಜೆಪಿ ಸಂಸದ ವರುಣ್ ಗಾಂಧಿ ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಸ್ಟರ್ ಕ್ಲೀನ್, ಸ್ಮಶಾನ ಭೂಮಿ, ಕೆರೆ ಅಂಗಳವನ್ನು ತಮ್ಮ ಹೆಸರಿಗೆ ಮಾಡಿಕೊಂಡದ್ದು ಹೇಗೆ

ಆರೋಗ್ಯದಲ್ಲಿ ಏರುಪೇರು, ವಿಶ್ರಾಂತಿಯಲ್ಲಿರುವ ಸಿದ್ದರಾಮಯ್ಯರನ್ನು ಭೇಟಿಯಾದ ಪುತ್ರ ಯತೀಂದ್ರ

ಎಐ ದುರ್ಬಳಕೆ ಬಗ್ಗೆ ಶ್ರೀಲೀಲಾ ಗರಂ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ನಟಿ

ಗೋವಾ ನೈಟ್‌ಕ್ಲಬ್ ದುರಂತ, ಪರಾರಿಯಾಗಿದ್ದ ಮಾಲಕ ಸಹೋದರರ ವಿಚಾರಣೆ

ಖಾಕಿ ಮೇಲೆ ಕೈ ಹಾಕಿದ ಮೂವರು ಮೂವರಿಗೆ 7 ವರ್ಷ ಜೈಲೇ ಗತಿ

ಮುಂದಿನ ಸುದ್ದಿ
Show comments